30 C
Mumbai
April 24, 2026
Mumbai News Kannada
ಮುಂಬಯಿ

ಡೊಂಬಿವಿಲಿಯ ಶ್ರೀಮಹಾವಿಷ್ಣು ಮಂದಿರದಲ್ಲಿ “ದಶಾವತಾರ ” ಹರಿನಾಮವಳಿ – ಶುಭ ಚಿಂತನ ” ಕಾರ್ಯಕ್ರಮ





ಡೊಂಬಿವಲಿ ಪಶ್ಚಿಮದ ಯಶವಂತ ನಗರದಲ್ಲಿರುವ ಮುಂಬ್ರಾ ಮಿತ್ರ ಭಜನಾ ಮಂಡಳಿ (ರಿ) ಇದರ ಸಂಚಾಲಕತ್ವದ ಶ್ರೀ ಮಹಾವಿಷ್ಣು ಮಂದಿರದಲ್ಲಿ ವೈ. ಅನಂತ ಪದ್ಮನಾಭ ಭಟ್ ಇವರಿಂದ ಪುರಂದರ ದಾಸರಾ ಆರಾಧನಾ ಮಹೋತ್ಸವದ ನಿಮಿತ್ತ “ದಶಾವತಾರ ” ಹರಿನಾಮವಳಿ – ಶುಭ ಚಿಂತನ ” ಕಾರ್ಯಕ್ರಮವು ಫೆ.19 ರಂದು ಸೋಮವಾರ ಸಂಜೆ 7 ರಿಂದ 10 ರ ತನಕ ಮಂದಿರದ ಸಭಾಗ್ರಹದಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಹರಿದಾಸರಾದ ವಿದ್ವಾನ್ ವೈ. ಅನಂತಪದ್ಮನಾಭ ಭಟ್ ಹಾಗು ಅವರೊಂದಿಗೆ ಹಾರ್ಮೋನಿಯಂ ವಾದಕರಾದ ಶ್ರೀ ಶಿವರಾಮ ಭಾಗವತ್ ಯೆಲ್ಲಾಪುರ ಹಾಗೂ ಮಾನಸ್ ಬಂಗೇರ ರವರಿಗೆ ಮಂದಿರದ ವತಿಯಿಂದ ಗೌರವಿಸಲಾಯಿತು.

ಮಂದಿರದ ಅಧ್ಯಕ್ಷರಾದ ಶ್ರೀ ಇಂದುಶೇಖರ್ ಸುವರ್ಣ , ಗೌರವ ಅಧ್ಯಕ್ಷರಾದ ಶ್ರೀಯುತ ನಿತಿನ್ ಪ್ರಕಾಶ್ ಪುತ್ರನ್ ಉಪಾಧ್ಯಕ್ಷರಾದ ಅರವಿಂದ್ ಪದ್ಮಶಾಲಿ, ಜೊತೆ ಕಾರ್ಯದರ್ಶಿ ಚಂದ್ರಶೇಖರ್ ಸಾಲಿಯಾನ್ , ಮಹಿಳಾ ವಿಭಾಗದ ಕಾರ್ಯದ್ಯೆಕ್ಷೆ ಶ್ರೀಮತಿ ಸವಿತಾ ಸಾಲಿಯಾನ್ ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದ ಸದಸ್ಯೆಯರು , ಹಾಗು ತುಳು ಕನ್ನಡ ಸಂಘ ಸಂಸ್ಥೆಯ ಹೆಚ್ಚಿನ ಸದಸ್ಯರುಗಳು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿ ಯಾಗಲು ಸಹಕರಿಸಿದರು. ಮಂದಿರ ದ್ ಉಪ ಬುವಾಜಿ ಶ್ರೀಯುತ ಲೀಲೆಶ್ ಸುವರ್ಣ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.



Related posts

ಎಸ್ ಎಸ್ ಸಿ ಯಲ್ಲಿ ಅದಿತಿ ಆರ್ ಶೆಟ್ಟಿ ಯವರಿಗೆ ಶೇಕಡಾ 96.20 ಅಂಕ

Mumbai News Desk

ಕುಲಾಲ ಸಂಘ ಮುಂಬಯಿ ಮೀರಾ ರೋಡ್ – ವಿರಾರ್ ಸ್ಥಳೀಯ ಸಮಿತಿಯ  ಸ್ನೇಹ ಸಮ್ಮಿಲನ, ಸಾಂಸ್ಕೃತಿಕ ವೈಭವ,

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ, ಡೊಂಬಿವಿಲಿ ಸಮಿತಿಯ ವಾರ್ಷಿಕೋತ್ಸವ, ಸ್ಮರಣ ಸಂಚಿಕೆ ಬಿಡುಗಡೆ,

Mumbai News Desk

ಕಲಂಬೋಲಿ  ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ದ  34 ನೆ  ವಾರ್ಷಿಕ ಮಹಾಪೂಜೆ .

Mumbai News Desk

“ಜ್ಞಾನ ವಿಕಾಸ ಮಂಡಲದ ಮೆಹತಾ ಕಾಲೇಜಿನಲ್ಲಿ ಎರಡು ದಿನ ಪಾರಿತೋಷಕ ವಿತರಣಾ ಸಮಾರಂಭ, ಅಧ್ಯಕ್ಷ ಶ್ರೀ ವಿ. ಎನ್ ಹೆಗಡೆ ಅವರಿಂದ ಕಾಲೇಜಿನ ಬೆಳ್ಳಿ ಹಬ್ಬದ ಲಾಂಛನ ಬಿಡುಗಡೆ”

Mumbai News Desk

ಶ್ರೀ ಅಯ್ಯಪ್ಪ ಭಕ್ತ ಮಂಡಳಿ, ಶ್ರೀ ಲಕ್ಷ್ಮೀ ನಾರಾಯಣ ಭಜನಾ ಸಮಿತಿ ಮೀರಾ ರೋಡ್ ಶ್ರೀ ಅಯ್ಯಪ್ಪ ಸ್ವಾಮಿ 29ನೇ ಮಹಾಪೂಜೆ

Mumbai News Desk