September 6, 2026
Mumbai News Kannada
ಪ್ರಕಟಣೆ

ಮಾ.3, ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ, ಡೊಂಬಿವಲಿ ಸ್ಥಳೀಯ ಸಮಿತಿ ಕುಂದರಂಜನಿ – 2024





ಡೊಂಬಿವಲಿ ಫೆ 23: ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ ಇದರ ಡೊಂಬಿವಲಿ ಸ್ಥಳೀಯ ಸಮಿತಿ ಕುಂದರಂಜನಿ – 2024 ಕಾರ್ಯಕ್ರಮವು ರವಿವಾರ ದಿನಾಂಕ 03-03-2024 ರಂದು ಸಂಜೆ 4.00 ಗಂಟೆಗೆ ಸರಿಯಾಗಿ ಡೊಂಬಿವಲಿ ಪೂರ್ವದ ದತ್ತ ನಗರದ ಡಿ.ಎನ್.ಸಿ ರಸ್ತೆಯಲ್ಲಿರುವ ಲೇವಾ ಭವನದಲ್ಲಿ ಜರಗಲಿದೆ.

ಸಂಘದ ಅಧ್ಯಕ್ಷರಾದ ರಾಜು ಮೆಂಡನ್ ವಂಡ್ಸೆ ಇವರ ಅಧ್ಯಕ್ಷತೆಯಲ್ಲಿ ಜರಗುವ ಕಾರ್ಯಕ್ರಮದಲ್ಲಿ ಸಂಘದ ಗೌರವ ಅಧ್ಯಕ್ಷರಾದ ಸುರೇಶ್ ಆರ್. ಕಾಂಚನ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಸಂಘದ ಮಾಜಿ ಅಧ್ಯಕ್ಷ ಮಹಾಬಲ ಎಮ್. ಕುಂದರ್ ಉಪಸ್ಥಿತಿತರಿರುವರು ಅತಿಥಿಗಳಾಗಿ ಕರ್ನಾಟಕ ಸಂಘ ಡೊಂಬಿವಲಿ ಇದರ ಅಧ್ಯಕ್ಷ ಬಂಟರ ಸಂಘ ಮುಂಬಯಿ ಇದರ ಪೂರ್ವ ವಲಯದ ಸಮನ್ವಯಕರಾದ ಸುಕುಮಾರ್ ಎನ್. ಶೆಟ್ಟಿ, ಬಂಟರ ಸಂಘ ಮುಂಬಯಿ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಆನಂದ ಡಿ. ಶೆಟ್ಟಿ ಎಕ್ಕಾರ್ , ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ಡೊಂಬಿವಲಿ ಶಾಖೆಯ ಮಾಜಿ ಕಾರ್ಯಾಧ್ಯಕ್ಷ ಯಧುವೀರ್ ಪುತ್ರನ್, ಜಗಜ್ಯೋತಿ ಕಲಾವೃಂದ ಮುಂಬಯಿ ಇದರ ಅಧ್ಯಕ್ಷ  ರಮೇಶ್ ಎ. ಶೆಟ್ಟಿ, ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ ಇದರ ಮಾಜಿ ಅಧ್ಯಕ್ಷ ರಮೇಶ ಬಂಗೇರ ಉಪಸ್ಥಿತರಿರುವರು

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪೂಜಾ ನೃತ್ಯ ಹಾಗೂ ನೃತ್ಯ ವೈಭವ ಜರಗಲಿದ್ದು ವಿಶೇಷ ಅಕರ್ಷಣೆಯಾಗಿ ಕುಂದ ಕನ್ನಡದ ಕುಂದ ರಂಜನೀಯ ಹಾಸ್ಯ ರಸಾಯನ ನ್ಯೆಗಿ ನಾಗಣ್ಣ ಖ್ಯಾತಿಯ ನಾಗರಾಜ ಮೊಗವೀರ ತೆಕ್ಕಟ್ಟೆ ಸಾರಥ್ಯದ ಕಲಾಶಕ್ತಿ ಕನ್ನುಕೆರೆ ತೆಕ್ಕಟ್ಟೆ ಇವರಿಂದ ನಗೆ ಕೊಪ್ಪರಿಗೆ ಜರಗಲಿದೆ.

ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಸಮಾಜ ಬಾಂಧವರು ಹಿತೈಷಿಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿ ಗೊಳಿಸ ಬೇಕೆಂದು ಮೊಗವೀರ ಮಹಾಜನ ಸೇವಾ ಸಂಘ ಮುಂಬಯಿ ಇದರ ಗೌ.ಪ್ರ.ಕಾರ್ಯದರ್ಶಿ ಗಣೇಶ್ ಮೆಂಡನ್, ಗೌ.ಪ್ರ ಕೋಶಾಧಿಕಾರಿ ಸತೀಶ್ ಶ್ರಿಯಾನ್, ಡೊಂಬಿವಲಿ ಸ್ಥಳೀಯ ಸಮಿತಿಯ ಗೌರವ ಕಾರ್ಯಾಧ್ಯಕ್ಷ ಭಾಸ್ಕರ್ ಎನ್. ಕಾಂಚನ್, ಕಾರ್ಯಾದ್ಯಕ್ಷ ರಾಜು ಎ. ಮೊಗವೀರ, ಕಾರ್ಯದರ್ಶಿ ಸಂತೋಷ್ ಪುತ್ರನ್, ಶೇಖರ್ ಎಸ್.ನಾಯ್ಕ್, ಕಾರ್ಯಕ್ರಮ ಸಮಿತಿಯ ಕಾರ್ಯಾಧ್ಯಕ್ಷ ಭಾಸ್ಕರ್ ಶ್ರಿಯಾನ್, ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ಅಧ್ಯಕ್ಷರು, ಕಾರ್ಯಾಧ್ಯಕ್ಷರು, ಕಾರ್ಯಕಾರಿ ಸಮಿತಿ ಸದಸ್ಯರು ಕೇಂದ್ರ ಕಾರ್ಯಾಲಯ ಕುಂದಾಪುರ,ಮೀರಾ ರೋಡ್ , ಥಾಣೆ ಸ್ಥಳೀಯ ಸಮಿತಿ ಮತ್ತು ಮಹಿಳಾ ವಿಭಾಗದ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ದೋಲ್ಗೊಟ್ಟು, ಕೆಲ್ಲಪುತ್ತಿಗೆ, ಶ್ರೀ ಧರ್ಮಶಾಸ್ತ ಭಕ್ತವೃಂದ,ಜ.11 ರಂದು 23ನೇ ಅಯ್ಯಪ್ಪ ಮಹಾಪೂಜೆ ಅನ್ನಸಂತರ್ಪಣೆ,

Mumbai News Desk

  ಪುಣೆ  ‌:ಸುಂದರ ಪೂಜಾರಿ ಕಾಣೆಯಾಗಿದ್ದಾರೆ

Mumbai News Desk

ಕಾಮೋಟೆ ಶ್ರೀ ದುರ್ಗಾಪರಮೇಶ್ವರಿ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ  ಜ 3 ರಂದು 6ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಂಡಲ ಮಹಾಪೂಜೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ, ಆ. 10 ರಂದು ಮುನಿರಾಜ್ ಜೈನ್ ಶ್ರದ್ಧಾಂಜಲಿ ಸಭೆ

Mumbai News Desk

ಡಿ.3ರಂದು ಮುಂಬೈಯಲ್ಲಿ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರ ಷಷ್ಠಿಯಬ್ದ ಮಹೋತ್ಸವ.

Mumbai News Desk

ಏ. 12 ರಿಂದ 21 ರ ವರಗೆ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ 62 ನೇ ವಾರ್ಷಿಕ ಮಹೋತ್ಸವ

Mumbai News Desk