32 C
Mumbai
March 7, 2026
Mumbai News Kannada
ಮುಂಬಯಿ

ತುಳು ಸಂಘ ಬೊರಿವಲಿ ; ವಾರ್ಷಿಕ ವಿಹಾರ ಕೂಟ





 

ಮುಂಬಯಿ :  ತುಳು ಸಂಘ ಬೊರಿವಲಿ ಯ ವಿಹಾರ ಕೂಟವನ್ನು ಮಾ. 3ರಂದು ಮಲಾಡ್ ಪಶ್ಚಿಮ ಮಡ್ ಸಮೀಪ ರಾಹುತ್ ಕೋಟೇಜ್ ನಲ್ಲಿ ಏರ್ಪಡಿಸಲಾಯಿತು. 

ಸಂಘದ ನೂರಾರು ಮಂದಿ ಸದಸ್ಯರು ಪರಿವಾರ ಸಮೇತ ಬಾಗವಹಿಸಿದ್ದು ಹಿರಿ ಕಿರಿಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನೃತ್ಯ, ಗಾಯನ ಇತ್ಯಾದಿಗಳನ್ನು ಏರ್ಪಡಿಸಲಾಗಿದ್ದು ಎಲ್ಲರೂ  ಆನಂದಿಸಿದರು. 

ಸಂಘದ ಅಧ್ಯಕ್ಷರಾದ  ಕರುಣಾಕರ ಎಂ. ಶೆಟ್ಟಿಯವರು  ಸಂಘದ ಕಾರ್ಯಚಟುವಟಿಕೆಗಳ ಮಾಹಿತಿಯಿತ್ತರು.  ಸದಸ್ಯರ ಸಕ್ರಿಯ ಭಾಗವಹಿಸುವಿಕೆ ಮತ್ತು ನಿರಂತರ ಬೆಂಬಲಕ್ಕಾಗಿ ಅಲ್ಲದೆ ಸಂಸ್ಥಾಪಕ ಅಧ್ಯಕ್ಷರಾದ ವಾಸು ಪುತ್ರನ್ ಮತ್ತು ಮಾಜಿ  ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪೇಟೆಮನೆ ಅವರ ನಿರಂತರ ಬೆಂಬಲ ಮತ್ತು ಮಾರ್ಗದರ್ಶನಕ್ಕಾಗಿ ಶ್ಲಾಘಿಸಿದರು.  ವಿಹಾರ ಕೂಟದಲ್ಲಿ ಭಾಗವಹಿಸಿ ಯಶಸ್ಸಿಯಾಗಿ ನಡೆಸಿಕೊಟ್ಟ ಎಲ್ಲಾ ಸದಸ್ಯರಿಗೆ ಕೃತಜ್ನತೆಯನ್ನು ಸಲ್ಲಿಸಿದರು. ಅಲ್ಲದೆ ಎಲ್ಲಾ ಕಾರ್ಯಗಳನ್ನು ಯಶಸ್ಸಿಯಾಗಿ ನೆರವೇರಿಸಿದ ಸಂಘದ ಪದಾಧಿಕಾರಿಗಳಿಗೆ, ಕಾರ್ಯಕಾರಿ ಸಮಿತಿಯ ಸದಸ್ಯರಿಗೆ, ಸಾಂಸ್ಕೃತಿಕ ಸಮಿತಿ ಹಾಗೂ  ಮಹಿಳಾ ವಿಭಾಗದ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು.

ತುಳು ಸಂಘ ಬೊರಿವಲಿಯ ಕಾರ್ಯಾಕಾರಿ ಸಮಿತಿಯ ಸದಸ್ಯರಾದ ನ್ಯಾ. ರಾಘವ ಅವರು,  ದಿನ ಪೂರ್ತಿ ನಡೆದ ವಿವಿಧ ಆಟೋಟ ಸ್ಪರ್ಧೆಯನ್ನು ನಡೆಸಿಕೊಟ್ಟರು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. 

ಸಂಘದ ಸ್ಥಾಪಕ  ಅಧ್ಯಕ್ಷರಾದ ವಾಸು ಪುತ್ರನ್ ಮಾತನಾಡಿ, ಸದಸ್ಯರ ಭಾಗವಹಿಸುವಿಕೆ ಮತ್ತು ಬೆಂಬಲಕ್ಕೆ ಸಂತೋಷ ವ್ಯಕ್ತಪಡಿಸಿದರು. 

ಪ್ರಧಾನ ಕಾರ್ಯದರ್ಶಿ ರಜಿತ್ ಸುವರ್ಣ, ಕೋಶಾಧಿಕಾರಿ ಚಂದ್ರಹಾಸ ಬೆಳ್ಚಡ, ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷೆ ಕುಸುಮಾ ಶೆಟ್ಟಿ, ಉಪಕಾರ್ಯಾಧ್ಯಕ್ಷೆ ಕಸ್ತೂರಿ ಶೆಟ್ಟಿ, ಮಹಿಳಾ ವಿಭಾಗದ ಉಪಾಧ್ಯಕ್ಷೆ ಶೋಭ ಶೆಟ್ಟಿ, ಸರಸ್ವತಿ ರಾವ್, ಲಕ್ಷ್ಮೀ ದೇವಾಡಿಗ, ಜಯಂತಿ ಶೆಟ್ಟಿ ಮತ್ತಿತರ ಪದಾಧಿಕಾರಿಗಳು ಹಾಗೂ ಸದಸ್ಯರು ಸಹಕರಿಸಿದರು. 



Related posts

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಆಶ್ರಯದಲ್ಲಿ ಯಕ್ಷಗಾನ

Mumbai News Desk

ಬಂಟರ ಸಂಘ, ಮುಂಬಯಿ, ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿ ಮಹಿಳಾ‌ ವಿಭಾಗ- ಆಟಿದ ಪೊರ್ಲ್ ತಿರ್ಲ್ ಕಾರ್ಯಕ್ರಮ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮೀರಾ – ಭಾಯಂದರ್ ಶಾಖೆಯ ವಾರ್ಷಿಕೋತ್ಸವ 

Mumbai News Desk

ಶ್ರೀ ರಜಕ ಸಂಘ (ಮುಂಬಯಿ) ವಸಾಯಿ ಪ್ರಾದೇಶಿಕ ವಲಯದಿಂದ 14ನೇ ವರ್ಷದ ಶಾರದಾ ಪೂಜೆ ವೈಭವ

Mumbai News Desk

ಬಿಲ್ಲವರ ಅಸೋಸ್ಸಿಯೇಶನ್ ಮುಂಬಯಿ: ಗುರುಜಯಂತಿಯ ಶುಭ ಸಂಧರ್ಭದಲ್ಲಿ ಗೌರವಾಧ್ಯಕ್ಷರಾಗಿ ಪದಗ್ರಹಣ ಮಾಡಿದ ಎಲ್. ವಿ. ಅಮೀನ್

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ರಕ್ಷಿತ್ ಸತೀಶ್ ಶೆಟ್ಟಿ ಗೆ ಶೇ. 93.60 ಅಂಕ.

Mumbai News Desk