September 6, 2026
Mumbai News Kannada
ಸುದ್ದಿ

ಅಕ್ಷಯಧಾರ ಕ್ರೆಡಿಟ್ ಸೊಸೈಟಿ ಕಾಪು – ಅಧ್ಯಕ್ಷರಾಗಿ ಲವ ಎನ್. ಕರ್ಕೇರ ಮರು ಆಯ್ಕೆ.





ಅಕ್ಷಯಧಾರ ಕ್ರೆಡಿಟ್ ಸೊಸೈಟಿ ಕಾಪು – ಅಧ್ಯಕ್ಷರಾಗಿ ಲವ ಎನ್. ಕರ್ಕೇರ ಮರು ಆಯ್ಕೆ.

ಕಾಪು , ಮಾ5:: ಕಾಪುವಿನಲ್ಲಿ ಹಲವು ವರ್ಷಗಳಿಂದ ಕಾರ್ಯಚರಿಸುತ್ತಿರುವ ಜನಪ್ರಿಯ ಆರ್ಥಿಕ ಸಂಸ್ಥೆ ” ಅಕ್ಷಯಧಾರ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ” ಇದರ ನಿರ್ದೇಶಕ ಮಂಡಳಿಯ ಸಭೆಯು ಮಾರ್ಚ್ 5ರಂದು ನಡೆಯಿತು.


ಸಭೆಯಲ್ಲಿ ಮುಂದಿನ ಐದು ವರ್ಷಗಳ ಅವಧಿಗೆ , ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಲವ ಕರ್ಕೆರ ಅವರು ಸತತ ಮೂರನೇ ಅವಧಿಗೆ ಆರ್ಥಿಕ ಸಂಸ್ಥೆಯ ಅದ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಕ್ಷಯಧಾರಾ ಸೊಸೈಟಿಯ ಉಪಾಧ್ಯಕ್ಷರಾಗಿ ಇರ್ಫಾನ್ , ನಿರ್ದೇಶಕರುಗಳಾಗಿ ಜಗದೀಶ್ ಮೆಂಡನ್, ಶಿವರಾಂ ಆಚಾರ್ಯ , ಉತ್ತಮ್ ಕುಮಾರ್ ಬಂಗೇರಾ, ಪ್ರದೀಪ್ .ಯು. , ರಮೇಶ್ ಶೆಟ್ಟಿ ಕಲ್ಯ , ಯೊಗೀಶ್ ಆಚಾರ್ಯ , ಶಾಫಿ , ನಂದಕಿಶೊರ್ , ಶ್ರೀಮತಿ ಸುಜಾತ ಹಾಗೂ ಶ್ರೀಮತಿ ವಿಮಲ ಆಯ್ಕೆಯಾದರು. ಚುನಾವಣಾ ಅಧಿಕಾರಿಯಾಗಿ ಶ್ರೀಮತಿ ಜಯಂತಿ ಅವರು ಕರ್ತವ್ಯ ನಿರ್ವಹಿಸಿದರು.
ಅಕ್ಷಯಧಾರ ಕ್ರೆಡಿಟ್ ಸೊಸೈಟಿ ಕಳೆದ 14 ವರ್ಷಗಳಿಂದ ತನ್ನ ಉತ್ಕರ್ಷ ಸೇವೆ, ಹಾಗೂ ಆಕರ್ಷಕ ಬಡ್ಡಿದರದ ಸಾಲ, ಸೌಲ್ಯಭ್ಯದಿಂದ ಗ್ರಾಹಕರ, ಠೇವಣಿದಾರರ, ಉದ್ದಿಮೆದಾರರ ಮೆಚ್ಚಿನ ಆರ್ಥಿಕ ಸಂಸ್ಥೆಯಾಗಿದೆ.



Related posts

ಭಟ್ಕಳದಲ್ಲಿ ಮಹಾ ದುರಂತ: ನದಿಯಲ್ಲಿ ಮಲವಿ ಹೆಕ್ಕಲು ಹೋದ ಎಂಟು ಮಹಿಳೆಯರು ನೀರು ಪಾಲು

Mumbai News Desk

ಗುಜರಾತ್ ಭರುಚ್ ಶ್ರೀ ಗುಮನ್ ದೇವ್ ಮಂದಿರದಲ್ಲಿ ಅದ್ದೂರಿಯ ಶ್ರೀ ಬಾಲಾಜಿ ವೆಂಕಟೇಶ್ವರ ಸ್ವಾಮಿ ಪ್ರಾಣಪ್ರತಿಷ್ಠೆ , ಬ್ರಹ್ಮಕಲಶೋತ್ಸವ , ಶ್ರೀನಿವಾಸ ಕಲ್ಯಾಣ.

Mumbai News Desk

ಯಶ್ ಪಾಲ್ ಸುವರ್ಣ ಅಧ್ಯಕ್ಷತೆಯ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‍ಗೆ ಸತತ 8ನೇ ಬಾರಿಗೆ ಸಾಧನಾ ಪ್ರಶಸ್ತಿ.

Mumbai News Desk

ಬೊಯಿಸರ್ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಶ್ರೀ ದೇವೀ ಜಪಪಾರಾಯಣ ಸಂಪನ್ನ

Mumbai News Desk

ಮುತ್ತೂಟ್ ಫೈನಾನ್ಸ್ ‘ವಿವಾಹ ಸಮ್ಮಾನ 2026’: ಮಂಗಳೂರಿನ 10 ಅರ್ಹ ಹೆಣ್ಣುಮಕ್ಕಳ ಮದುವೆಗೆ ಆರ್ಥಿಕ ಆಸರೆ

Mumbai News Desk

ಧರ್ಮಪಾಲ್ ದೇವಾಡಿಗ ಮತ್ತು ಚಂದ್ರಶೇಖರ್ ಬೆಳ್ಚಡ ಇವರಿಂದ ಡಾ. ವೀರೇಂದ್ರ ಹೆಗ್ಗಡೆ ಭೇಟಿ: ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಬಗ್ಗೆ ಸಮಾಲೋಚನೆ

Mumbai News Desk