30.9 C
Mumbai
June 8, 2026
Mumbai News Kannada
ಪ್ರಕಟಣೆ

ಸಾಫಲ್ಯ ಸೇವಾ ಸಂಘ.ಮುಂಬಯಿ ಮಾ 9;ಸಾಫಲ್ಯ ಸ್ತ್ರೀ ಶಕ್ತಿ ಕಾರ್ಯಕ್ರಮ





ಮುಂಬಯಿ ಮಾ 6.ಸಾಫಲ್ಸಾಫಲ್ಯ ಸಮಾಜ ಬಾಂಧವರ ಅಭಿವೃದ್ಧಿಗಾಗಿ ಸಾಫಲ್ಯ ಸೇವಾ ಸಂಘವು  ಮುಂಬಯಿ ಮಹಾನಗರದಲ್ಲಿ  ನಿರಂತರ ತನ್ನ ಕೊಡುಗೆಯನ್ನು ನೀಡುತ್ತಾ ಬಂದಿದೆ. ಇದರ ಮಹಿಳಾ ವಿಭಾಗದ ವತಿಯಿಂದಮಹಿಳಾ ದಿನಾಚರಣೆಯ ಪ್ರಯುಕ್ತ ಸಾಫಲ್ಯ ಸ್ತ್ರೀ ಶಕ್ತಿ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 

 ಮಾರ್ಚ್ 9 ರ ಶನಿವಾರ ಮಧ್ಯಾಹ್ನ   3.00 ರಿಂದ ಕುರ್ಲಾ  ಬಂಟರ ಭವನದ ಆನೆಕ್ಸ್ ಹಾಲ್ ನಲ್ಲಿ ಸಂಘದ ಅಧ್ಯಕ್ಷರಾದ ಶ್ರೀನಿವಾಸ ಸಪಲ್ಯರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ನಾಟ್ಯಗುರು ಕುಮಾರಿ ಲತಿಕಾ ಶ್ರೀಯಾನ್, ಸಮಾಜ ಸೇವಕಿ  ಶಕುಂತಲಾ ಪುತ್ರನ್, ಲೇಖಕಿ  ಸುಮಿತ್ರಾ ಬಿ ಗುಜರನ್, ಸಂಪಾದಕಿ, ಲೇಖಕಿ ಡಾ. ಜಿ ಪಿ ಕುಸುಮಾ, ಮತ್ತು ಸಮಾಜ ಸೇವಕಿ ಸುಮಿತ್ರ ವಿ ಕುಂಜರ್ ಅತಿಥಿಗಳಾಗಿ ಆಗಮಿಸಲಿದ್ದಾರೆ. 

  ಈ ಸಂದರ್ಭದಲ್ಲಿ ಸ  ಸಾಫಲ್ಯ ಸಮಾಜದ ಯಶಸ್ವಿ ಮಹಿಳೆಯರಾದ  ರತ್ನಾ ಕುಂದರ್, ಮಂಜುಳಾ ಅಮೀನ್, ಸುನೀತಾ ಬಂಗೇರ, ಉಷಾ  ವಿ. ಸಪಳಿಗ ಹಾಗೂ ದೀಪಾ ಸುವರ್ಣ ಇವರುಗಳಿಗೆ ಗೌರವಾರ್ಪಣೆ ನಡೆಯಲಿದೆ,

ಕಾರ್ಯಕ್ರಮವು ಲಲಿತಾ ಸಹಸ್ರನಾಮ , ಹಳದಿ ಕುಂಕುಮ, ದಿ ಆರ್ಟ್ ಆಫ್  ಲೀವಿಂಗ್  ವಿಶೇಷ  ಕಾರ್ಯಕ್ರಮ ಹೀಗೆ ವೈವಿಧ್ಯಮಯ ಕಾರ್ಯಕ್ರಮಗಳ ಜೊತೆಗೆ  ಮನೋರಂಜನೆಗಾಗಿ ಗೇಮ್ಸ್ ಗಳನ್ನೂ ಒಳಗೊಂಡಿದೆ.   

ಸಮಾಜ ಬಾಂಧವರೆಲ್ಲರೂ  ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗುವಂತೆ ಸಹಕರಿಸಬೇಕಾಗಿ  ಸಾಫಲ್ಯ ಸೇವಾ ಸಂಘದ  ಪದಾಧಿಕಾರಿಗಳು  ವಿನಂತಿಸಿದ್ದಾರೆ.,

ವಿ.ಸೂ: ಕಾರ್ಯಕ್ರಮ ಮುಗಿದ ಬಳಿಕ ಕುರ್ಲಾ ರೈಲ್ವೆ ಸ್ಟೇಷನ್ ಗೆ ಬಸ್ಸಿನ ವ್ಯವಸ್ಥೆ ಮಾಡಲಾಗಿದೆ.

💫 Subscribe, Like, Share



Related posts

ಬಿ.. ಎಸ್ ಕೆ.ಬಿ. ಎಸೋಸಿಯೇಶನ್, ಗೋಕುಲ – ಶತಮಾನೋತ್ಸವ ಸಂಭ್ರಮಾಚರಣೆಗೆ ಸರ್ವಸಿದ್ಧತೆ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ :

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ : ಮಾ. 9ರಂದು ಮೊಗವೀರ ಮಾಸಿಕದ 85ರ ಸಂಭ್ರಮ

Mumbai News Desk

ಪಾಂಗಾಳ: ಮಾ. 2ರಿಂದ 4ರವರೆಗೆ ಸಿರಿ ಕುಮಾರ ಬ್ರಹ್ಮಲಿಂಗೇಶ್ವರ ಆದಿ ಆಲಡೆ ಆಯನ ಸಿರಿಜಾತ್ರೆ

Mumbai News Desk

ಸೆ. 15 ರಂದು ಕನ್ನಡಿಗರ ಸ್ನೇಹ ಬಳಗ ಟ್ರಸ್ಟ್ ಡೊಂಬಿವಲಿಯ ಉದ್ಘಾಟನಾ ಕಾರ್ಯಕ್ರಮ.

Mumbai News Desk

ಡೊಂಬಿವಲಿ: “ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಆಶ್ರಯದಲ್ಲಿ ಜ. 3ರಂದು ಶ್ರೀ ಶನೀಶ್ವರ ಮಹಾಪೂಜೆ ಹಾಗೂ ಸತ್ಯನಾರಾಯಣ ಪೂಜೆ

Mumbai News Desk