30.9 C
Mumbai
June 8, 2026
Mumbai News Kannada
ಪ್ರಕಟಣೆ

ಶ್ರೀ ಮಹಾವಿಷ್ಣು ಮಂದಿರದಲ್ಲಿ ಮಾರ್ಚ್ 16 ಶನಿವಾರ ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಸಾಮೂಹಿಕ ಶನಿ ಪೂಜೆ





ಡೊಂಬಿವಲಿಯ ಮುಂಬ್ರಾ ಮಿತ್ರ ಭಜನಾ ಮಂದಿರದ ಸಂಚಾಳತ್ವದ ಡೊಂಬಿವಲಿ ಪಶ್ಚಿಮದ ಶ್ರೀ ಮಹಾವಿಷ್ಣು ಮಂದಿರದಲ್ಲಿ ಮಾರ್ಚ್ 16 ಶನಿವಾರ ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಸಾಮೂಹಿಕ ಶನಿ ಪೂಜೆ ಜರಗಲಿದೆ. ಬೆಳಿಗ್ಗೆ 6 ರಿಂದ 7 ರ ತನಕ ಗಣ ಹೋಮ ; 9 ರಿಂದ 10.30 ರ ತನಕ ಸತ್ಯನಾರಾಯಣ ಮಹಾಪೂಜೆ ಮಧ್ಯಾಹ್ನ 12. 30 ಕ್ಕೆ ಕಳಸ ಪ್ರತಿಷ್ಠೆ ಹಾಗು ಶನಿಗ್ರಂಥ ಪಾರಾಯಣ .12. 30 ರಿಂದ 3.00 ರ ತನಕ ಅನ್ನ ಸಂತರ್ಪಣೆ . 6.30 ರಿಂದ 7 ರ ತನಕ ಭಜನೆ , 7 ರಿಂದ 7.30 ರ ತನಕ ಧಾರ್ಮಿಕ ಸಭೆ ; 7.30 ಕ್ಕೆ ಮಹಾ ಮಂಗಳಾರತಿ ತೀರ್ಥ ಪ್ರಸಾದ ವಿತರಣೆ ಹಾಗು ಅನ್ನ ಸಂತರ್ಪಣೆ. ಶನಿ ಗ್ರಂಥ ಪಾರಾಯಣದ ದೀಪ ಪ್ರಜ್ವಲಣೆಯನ್ನು ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬೈ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀಯುತ ಶೇಖರ್ ಮೆಂಡನ್ ಹಾಗು ಕರ್ನಾಟಕ ಸಂಘ ಡೊಂಬಿವಲಿ ಇದರ ಗೌರವ ಪ್ರಧಾನ ಕೋಶಾಧಿಕಾರಿ ಶ್ರೀಯುತ ತಾರಾನಾಥ್ ಅಮೀನ್ , ಹಾಗು ಸಮಾಜ ಸೇವಕಿ ಶ್ರೀಮತಿ ಲಕ್ಷ್ಮಿ ಶೆಟ್ಟಿಗಾರ್ ಉಪಸ್ಥಿತರಿರುವರು. ರಾತ್ರಿ 7.00 ಗಂಟೆಗೆ ಶ್ರೀ ಮಹಾವಿಷ್ಣು ಮಂದಿರದ ಅಧ್ಯಕ್ಷರಾದ ಶ್ರೀಯುತ ಇಂದುಶೇಖರ್ ಸುವರ್ಣರವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾಕಾರ್ಯಕ್ರಮ ಜರಗಲಿದ್ದು ಅತಿಥಿ ಗಣ್ಯರಾಗಿ ಬಂಟರ ಸಂಘ ಮುಂಬೈ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀಯುತ ಆನಂದ್ ಶೆಟ್ಟಿ ಎಕ್ಕಾರ್, ಬಂಟರ ಸಂಘ ಮುಂಬೈ ಇದರ ಸಮಾಜ ಕಲ್ಯಾಣ ಉಪ ಸಮಿತಿಯ ಉಪ ಕಾರ್ಯಾದ್ಯಕ್ಷರಾದ ಶ್ರೀಯುತ ಸುಬ್ಬಯ್ಯ ಶೆಟ್ಟಿ, ಬಂಟರ ಸಂಘ ಮುಂಬೈ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಉಪ ಕಾರ್ಯಾಧ್ಯಕ್ಷರಾದ ಶ್ರೀಯುತ ಪ್ರಭಾಕರ್ ಶೆಟ್ಟಿ, ಕರ್ನಾಟಕ ಸಂಘ ಡೊಂಬಿವಲಿ ಇದರ ವಾಚನಾಲಯ ಉಪ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀಯುತ ರಾಜೀವ ಬಂಡಾರಿ , ಹೋಟೆಲ್ ಉದ್ಯಮಿ , ಸಮಾಜ ಸೇವಕರಾದ ಶ್ರೀಯುತ ಲಕ್ಷ್ಮಣ್ ಪೂಜಾರಿ, ಹಾಗು ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬೈ ಇದರ ಉಪಾಧ್ಯಕ್ಷರಾದ ಶ್ರೀಯುತ ಅರವಿಂದ್ ಕಾಂಚನ್ ಮೊದಲಾದವರು ಉಪಸ್ಥಿತರಿರುವರು. ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಹಿತೈಷಿಗಳು , ಭಕ್ತಾಭಿಮಾನಿಗಳು , ಕಾರ್ಯಕ್ರಮವನ್ನು ಯಶಸ್ವಿಗೊಳಿಸಲೆಂದು ಮಂದಿರದ ಗೌರವ ಅಧ್ಯಕ್ಷರಾದ ಶ್ರೀಯುತ ನಿತಿನ್ ಪ್ರಕಾಶ್ ಪುತ್ರನ್ , ಉಪಾಧ್ಯಕ್ಷರಾದ ಶ್ರೀಯುತ ಅರವಿಂದ್ ಪದ್ಮಶಾಲಿ, ಕಾರ್ಯದರ್ಶಿ ಶ್ರೀಯುತ ಸಚಿನ್ ಪೂಜಾರಿ , ಕೋಶಾಧಿಕಾರಿ ಶ್ರೀಯುತ ಪ್ರವೀಣ್ ಶೆಟ್ಟಿ ಹಾಗು ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಶ್ರೀಮತಿ ಸವಿತಾ ಸಾಲಿಯಾನ್ ಹಾಗು ಸರ್ವ ಕಾರ್ಯಕಾರಿ ಸಮಿತಿಯ ಸದಸ್ಯರು ,ಅರ್ಚಕ ವರ್ಗ , ಸದಸ್ಯರುಗಳು ಪ್ರಕಟಣೆಯ ಮೂಲಕ ವಿನಂತಿಸಿರುತ್ತಾರೆ.



Related posts

ಯುವ ಮಿತ್ರ ಮಂಡಳಿ ಮೀರಾ ರೋಡ್ 28ನೇ ವರ್ಷದ ಗಣೇಶ ಉತ್ಸವ ಸಂಭ್ರಮ.

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ : ದೀಪಾವಳಿ ಹಬ್ಬದ ಪ್ರಯುಕ್ತ ಭಜನಾ ಸಂಕೀರ್ತನೆ

Mumbai News Desk

ನವೆಂಬರ್ 24. ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿ ಅಂಧೇರಿ ಪಶ್ಚಿಮ : 36ನೇ ವಾರ್ಷಿಕ ಮಹಾಪೂಜೆ ಮತ್ತು ಭಜನಾ ಮಂಗಳೋತ್ಸವ

Mumbai News Desk

ದಹಿಸರ್ ಪೂರ್ವ :ಶ್ರೀ ಜಯಸ್ವಾಮಿ ದಹಿಸರ್ ಅತ್ತೂರು ಗುಂಡ್ಯಡ್ಕ ಇವರ ಆಯೋಜನೆಯಲ್ಲಿ, ಡಿ. 1ರಂದು 18ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಹಾಪೂಜೆ,

Mumbai News Desk

ಜು.21, ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್ ವತಿಯಿಂದ ಗುರುಪೂರ್ಣಿಮೆ ಆಚರಣೆ.

Mumbai News Desk

ಡಿ14. ಯುಎಇ ಬಂಟ್ಸ್‌ನ 48ನೇ ವರ್ಷದ “ಭಾವೈಕ್ಯ ಬಂಟರ ಮಹಾಸಮಾಗಮ”

Mumbai News Desk