32 C
Mumbai
April 24, 2026
Mumbai News Kannada
ಮಹಾರಾಷ್ಟ್ರ

ಶ್ರೀ ದುರ್ಗಾ ಕಾಳಿ ಮಂದಿರದಲ್ಲಿ ನವರಾತ್ರಿ ಉತ್ಸವ.





ಚಿತ್ರ, ವರದಿ : ಸತೀಶ್ ಶೆಟ್ಟಿ.

ಶ್ರೀ ದುರ್ಗಾ ಕಾಳಿ ಮಂದಿರ, ಸ್ವರ್ಗೀಯ ಪರಮ ಪೂಜ್ಯ ಶ್ರೀ ಬಾಲಗಂಗಾಧರ್ ಸ್ವಾಮೀಜಿಯವರ ಆಶ್ರಮದಲ್ಲಿ ನವರಾತ್ರಿ ಉತ್ಸವ ಜರಗುತ್ತಿದ್ದು, ಅಕ್ಟೋಬರ್ 15 ರ ಮಂಗಳವಾರದಿಂದ ನವರಾತ್ರಿ ಉತ್ಸವವು ಆರಂಭಗೊಂಡಿದ್ದು, ಪ್ರತಿದಿನ ನೂರಾರು ಭಕ್ತರು ಬಂದು ದೇವಿಯ ದರ್ಶನ ಪಡೆದು ತೀರ್ಥ ಪ್ರಸಾದ ಸ್ವೀಕರಿಸಿ ಪುನೀತರಾಗುತ್ತಿದ್ದಾರೆ.

ಅಕ್ಟೋಬರ್ 15ರ ಮಂಗಳವಾರ ಬೆಳಿಗ್ಗೆ ಗಣ ಹೋಮ, ಪಂಚಾಮೃತ ಅಭಿಷೇಕ, ಕಳಸ ಪ್ರತಿಷ್ಠಾಪನೆ, ಭಜನೆ ಮಂಗಳಾರತಿ ನಡೆದು ತೀರ್ಥ ಪ್ರಸಾದ ವಿತರಣೆ ನಡೆಯಿತು. ಅಕ್ಟೋಬರ್ 20 ಶುಕ್ರವಾರದಂದು ಬೆಳಿಗ್ಗೆ ದುರ್ಗಾ ಹೋಮ, ಮಂಗಳಾರತಿ ನಡೆದು ಸಂಜೆ ಶ್ರೀ ಸ್ವಾಮೀಜಿಯ ಪಾದಪೂಜೆ ನಡೆದು ಭಜನೆ, ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು.

ಅಕ್ಟೋಬರ್ 21 ರ ಶನಿವಾರದಂದು ಬೆಳಿಗ್ಗೆ ಸತ್ಯನಾರಾಯಣ ಮಹಾಪೂಜೆ ನಂತರ ಶ್ರೀ ಶನೇಶ್ವರ ಭಕ್ತವೃಂದ ಮಿತ್ರ ಮಂಡಳಿ ಬಾಂಡುಪ್ ಇವರಿಂದ ಶನಿ ಗ್ರಂಥ ಪಾರಾಯಣ, ರಾತ್ರಿ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಅಕ್ಟೋಬರ್ 24 ರ ದಸರಾದಂದು ಬೆಳಿಗ್ಗೆ ಅಲಂಕಾರ ಪೂಜೆ ಮಹಾಮಂಗಳಾರತಿಯ ನಂತರ ಮಾತ ಅನ್ನಪೂರ್ಣೇಶ್ವರಿ ಮಾತಾಜಿ ಆಶೀರ್ವಾದ ಅನುಸಾರ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ. ಪರಿಸರದ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ದೇವರ ತೀರ್ಥ ಪ್ರಸಾದ ಸ್ವೀಕರಿಸಬೇಕಾಗಿ ಮಂದಿರದ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಮಹಾರಾಷ್ಟ್ರ ಮತಾಂತರ ವಿರೋಧಿ ಕರಡು ಕಾನೂನು 2026ಕ್ಕೆ ಸಚಿವ ಸಂಪುಟದ ಅನುಮೋದನೆ: ತಪ್ಪಿತಸ್ಥರಿಗೆ 7 ವರ್ಷ ಜೈಲು ಮತ್ತು 5 ಲಕ್ಷ ರೂ. ದಂಡದ ಪ್ರಸ್ತಾಪ.

Mumbai News Desk

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ ನೇತಾರ ಮನೋಹರ್ ಜೋಷಿ ವಿಧಿವಶ

Mumbai News Desk

ಕಲಂಬೋಲಿ  ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ದ  34 ನೆ  ವಾರ್ಷಿಕ ಮಹಾಪೂಜೆ .

Mumbai News Desk

ಮಾಹಾರಾಷ್ಟ್ರ ವಿಧಾನ ಸಭಾ ಚುನಾವಣೆ : “ಎಣ್ಣೆ” ಪ್ರಿಯರಿಗೆ ವಿಶೇಷ ಮಾಹಿತಿ.

Mumbai News Desk

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣ ವಚನ

Mumbai News Desk

ಬೊಯಿಸರ್   ಶ್ರೀ ಸೋಮೇಶ್ವರ ಮಂದಿರದಲ್ಲಿ 15ನೇ ವಾರ್ಷಿಕ ಮಹಾಪೂಜೆ, ಸಂಪನ್ನ,

Mumbai News Desk