32 C
Mumbai
April 23, 2026
Mumbai News Kannada
ಕರಾವಳಿ

ಶ್ರೀ ದ್ವಾರಕಾಮಾಯಿ ಮಠ ಶಂಕರಪುರ : ಅರ್ಥಪೂರ್ಣವಾಗಿ ಜರಗಿದ ವಿಶ್ವ ಪ್ರಾಣಿ, ಪಕ್ಷಿಗಳ ಮೋಕ್ಷ ದಿನಾಚರಣೆ





ಶ್ರೀ ದ್ವಾರಕಾಮಾಯಿ ಮಠ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ಶ್ರೀ ಕ್ಷೇತ್ರ ಶಂಕರಪುರ ಇದರ ವತಿಯಿಂದ ವಿಶ್ವ ಪ್ರಾಣಿ ಪಕ್ಷಿಗಳ ಮೋಕ್ಷ ದಿನಾಚರಣೆ ಕಾರ್ಯಕ್ರಮ ಮಾರ್ಚ್ 16ರಂದು ದೇವಾಲಯದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಮೋಕ್ಷಕಟ್ಟೆಯಲ್ಲಿ ಪೂಜೆ ನೆರವೇರಿಸುವ ಮೂಲಕ ಉದ್ಘಾಟಿಸಿದ ಶ್ರೀ ಸಾಯಿ ಈಶ್ವರ ಗುರೂಜಿ ಮುಂದಿನ ದಿನಗಳಲ್ಲಿ ಪ್ರಾಣಿ-ಪಕ್ಷಿಗಳ ಮೋಕ್ಷ ದಿನಾಚರಣೆಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಈ ದಿನಕ್ಕೆ ಮಾನ್ಯತೆ ದೊರೆಯುವಂತೆ ಸಂತ ಸಮಿತಿಯ ವತಿಯಿಂದ ಲೋಕಸಭಾ ಸದಸ್ಯರ ನೆರವಿನೊಂದಿಗೆ ಪ್ರಧಾನಿಗಳೊಂದಿಗೆ ಈ ಕುರಿತು ಚರ್ಚಿಸುವ ಉದ್ದೇಶವಿದೆ ಎಂದು ತಿಳಿಸಿದರು .
ಪ್ರತಿಯೊಂದು ಪ್ರಾಣಿ ಪಕ್ಷಿಗಳಿಗೂ ಕೂಡ ಆತ್ಮವಿದೆ ಈ ಆತ್ಮಕ್ಕೆ ಅವುಗಳು ಸತ್ತ ಬಳಿಕ ಮೋಕ್ಷ ದೊರಕುವ ನಿಟ್ಟಿನಲ್ಲಿ ಈ ರೀತಿಯ ವಿಭಿನ್ನವಾದ ಕಾರ್ಯಕ್ರಮವನ್ನು ನೆರವೇರಿಸಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ರಸ್ತೆ ಬದಿಯಲ್ಲಿ ಸತ್ತ ಪ್ರಾಣಿ ಪಕ್ಷಿಗಳನ್ನು ಮಣ್ಣು ಮಾಡುವ ಕಾಯಕವನ್ನು ಮಾಡುತ್ತಿರುವ ಅಜಯ್ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಸುವರ್ಣ, ಸಾಮಾಜಿಕ ಮುಂದಾಳು ಸತೀಶ್ ವೇಣೂರು, ಮಹಿಳಾ ಸಂಚಾಲಕಿ ವಾರಿಜಾ ಕಲ್ಮಾಡಿ , ವಿಜಯ್ ಕುಂದರ್, ಸತೀಶ್ ದೇವಾಡಿಗ ,ವಿಘ್ನೇಶ್, ಸುಪ್ರೀತಾ, ಲಕ್ಷ್ಮಿ, ನೀಲೇಶ್ ಪ್ರದೀಪ್ ಮುಂತಾದವರಿದ್ದರು. ರಾಘವೇಂದ್ರ ಕರ್ವಾಲು ನಿರೂಪಿಸಿದರು ಈ ಸಂದರ್ಭದಲ್ಲಿ ಮೋಕ್ಷ ಕಟ್ಟೆಯಲ್ಲಿ ಅಭಿಷೇಕ ನೆರವೇರಿಸಲಾಯಿತು.



Related posts

ಉಳಿಯ ಕ್ಷೇತ್ರ ಬ್ರಹ್ಮಕಲಶೋತ್ಸವಕ್ಕೆ50,000 ರೂ. ದೇಣಿಗೆ ಘೋಷಣೆ

Mumbai News Desk

ಅಯೋಧ್ಯೆ ಶ್ರೀ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಶಂಕರಪುರ ಶ್ರೀ ಸಾಯಿ ಈಶ್ವರ್ ಗುರೂಜಿಗೆ ಆಹ್ವಾನ.

Mumbai News Desk

ಮಂಗಳೂರಿನ ನಗರ ಸೇವಕ ಜಗದೀಶ್ ಶೆಟ್ಟಿ ಆತ್ಮ ಹತ್ಯೆಗೆ ಯತ್ನ.

Mumbai News Desk

“ಕಲಾವಿದರನ್ನು ಗುರುತಿಸುವ ರಂಗಚಾವಡಿಯ ಉದ್ದೇಶ ಶ್ಲಾಘನೀಯ” -ಕನ್ಯಾನ ಸದಾಶಿವ ಶೆಟ್ಟಿ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ. ಜಿಲ್ಲೆಯ ಅಧ್ಯಕ್ಷರಾಗಿ ಡಿ ಆರ್ ರಾಜು. ಕಾರ್ಯದರ್ಶಿಯಾಗಿ ಅರುಣ್ ಪ್ರಕಾಶ್ ಶೆಟ್ಟಿಯ ವರಿಗೆ ಅಧಿಕಾರ ಹಸ್ತಾಂತರ.

Mumbai News Desk

ಗಂಗೊಳ್ಳಿಯಲ್ಲಿ ಮೀನುಗಾರಿಕೆ ಬೋಟುಗಳಿಗೆ ಬೆಂಕಿ, ಕೋಟ್ಯಾಂತರ ರೂಪಾಯಿ ನಷ್ಟ.

Mumbai News Desk