31 C
Mumbai
June 8, 2026
Mumbai News Kannada
ಪ್ರಕಟಣೆ

ಮಾ. 29 ರಂದು ಕನ್ನಡ ಸಾಂಸ್ಕೃತಿಕ ಕೇಂದ್ರ, ಕಲ್ಯಾಣ್ ನ ವತಿಯಿಂದ ಮಹಿಳಾ ದಿನಾಚರಣೆ





ಕನ್ನಡ ಸಾಂಸ್ಕೃತಿಕ ಕೇಂದ್ರ ಕಲ್ಯಾಣ್ (ರಿ) ಇದರ ಆಡಳಿತ ಸಮಿತಿಯ ಮಾರ್ಗದರ್ಶನದೊಂದಿಗೆ ಮಹಿಳಾ ವಿಭಾಗದ ನೇತೃತ್ವದಲ್ಲಿ ಮಹಿಳಾ ದಿನಾಚರಣೆ ದಿನಾಂಕ : 29-3-2024ರ ಶುಕ್ರವಾರ ಅಪರಾಹ್ನ 3.00 ರಿಂದ ಮಾತೋಶ್ರಿ ಹವಾನಿಯಂತ್ರಿತ ಹಾಲ್, ಮೆಕ್ಸಿ ಗ್ರಾಂಡ್ ಎದುರುಗಡೆ, ಪಟೇಲ್ ಮಾರ್ಟ್ ಮೇಲ್ಗಡೆ, ಸಂತೋಷಿ ಮಾತಾ ರೋಡ್, ಕಲ್ಯಾಣ್ ಪಶ್ಚಿಮ ಇಲ್ಲಿ ನಡೆಯಲಿದೆ.

ಕನ್ನಡ ಸಾಂಸ್ಕೃತಿಕ ಕೇಂದ್ರ, ಕಲ್ಯಾಣ್ ನ ಅದ್ಯಕ್ಷಿ ಜ್ಯೋತಿ ಪ್ರಕಾಶ್ ಹೆಗ್ಡೆ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ
ಶ್ರೀಮತಿ ರೇವತಿ ಸದಾನಂದ ಶೆಟ್ಟಿ, (ಮಾಜಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ, ಥಾಣೆ ಬಂಟ್ಸ್ ಅಸೋಸಿಯೇಶನ್, ಥಾಣೆ) ಗೌರವ ಅತಿಥಿಯಾಗಿ ಶ್ರೀಮತಿ ಮಂಜುಳಾ ಶೇಖರ್ ಶೆಟ್ಟಿ (ಮಾಜಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ, ಬಂಟರ ಸಂಘ ಮುಂಬಯಿ ಡೊಂಬಿವಲಿ ಪ್ರಾದೇಶಿಕ ಸಮಿತಿ) ಉಪಸ್ಥಿತರಿರುವರು.

ಈ ಸಂದರ್ಭದಲ್ಲಿ ಸಂಸ್ಥೆಯ ಹಿರಿಯ ಸದಸ್ಯೆ, ಸಾಹಿತಿ, ಲೇಖಕಿ ಡಾ. ದಾಕ್ಷಾಯಿಣಿ ಯಡಹಳ್ಳಿ ಯವರನ್ನು ಸನ್ಮಾನಿಸಲಾಗುವುದು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನಗರದ ವಿವಿಧ ಕನ್ನಡ ಕಲಾ ತಂಡಗಳಿಂದ ಕನ್ನಡ ಜನಪದ ನೃತ್ಯ ಸ್ಪರ್ಧೆ ಮತ್ತು ಸಂಸ್ಥೆಯ ಸದಸ್ಯೆಯರಿಂದ ವಿವಿಧ ವಿನೋದಾವಳಿಗಳು ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಜ್ಯೋತಿ ಪ್ರಕಾಶ್‌ ಹೆಗ್ಡೆ (ಅಧ್ಯಕ್ಷರು) ಮತ್ತು ಪದಾಧಿಕಾರಿಗಳು, ಗೌರವ ಅಧ್ಯಕ್ಷರು, ಸಲಹೆಗಾರರು, ಆಡಳಿತ ಸಮಿತಿ ಸದಸ್ಯರು ಹಾಗೂ
ಭಾರತಿ ಬಿ. ಶೆಟ್ಟಿ (ಕಾರ್ಯಾಧ್ಯಕ್ಷೆ : ಮಹಿಳಾ ವಿಭಾಗ)
ಮತ್ತು ಪದಾಧಿಕಾರಿಗಳು ಮಹಿಳಾ ವಿಭಾಗದ ಕಾರ್ಯಕಾರಿ ಸಮಿತಿ ಸದಸ್ಯೆಯರು ಪ್ರಕಟಣೆಯಲ್ಲಿ ಸರ್ವರಿಗೂ ಆದರದ ಸ್ವಾಗತ ಬಯಸಿದ್ದಾರೆ.



Related posts

ಡಿ. 8 ಗೋರೆಗಾಂವ್ ಪೂರ್ವ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದ ವಜ್ರ ಮಹೋತ್ಸವ ಉದ್ಘಾಟನಾ ಸಮಾರಂಭದ, ಆಮಂತ್ರಣ ಪತ್ರಿಕೆ ಬಿಡುಗಡೆ, ನಾಟಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಅ. 20 ರಂದು ಮದರ್ ಇಂಡಿಯಾ ಹಳೆ ವಿದ್ಯಾರ್ಥಿಗಳ ಪೌಂಡೇಶನಿನ ಮಹಾಸಭೆ, ಸ್ನೇಹ ಮಿಲನ

Mumbai News Desk

ಮಾ 16 ; ಗೋರೆಗಾಂವ್ ಇರಾನಿ ಕೊಲನಿ ಶ್ರೀ ಶನಿಮಹಾತ್ಮಾ ಪೂಜಾ ಸಮಿತಿ ಯ 69ನೇ ವಾರ್ಷಿಕ ಮಹೋತ್ಸವ,

Mumbai News Desk

ಆ 18 ರಂದು ಪೂರ್ವದ ಮಲಾಡ್ ನ ಸ್ವಾಮಿ ನಾರಾಯಣ ಸಭಾಂಗಣದಲ್ಲಿ ಶ್ರೀ ವರ ಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ ನ ಸದಸ್ಯರಿಂದ ಯಕ್ಷಗಾನ ಶ್ರೀ ದೇವಿ ಮಹಾತ್ಮೆ 

Mumbai News Desk

ಆದೂರು ಶ್ರೀ ಭಗವತಿ ಕ್ಷೇತ್ರದಲ್ಲಿ ಜ. 19 ರಿಂದ 24ರ ತನಕ 351 ವರ್ಷದ ಬಳಿಕ ಪೆರುಂಕಳಿಯಾಟ್ಟ ಮಹೋತ್ಸವ

Mumbai News Desk

ಪಾಂಗಾಳ: ಮಾ. 2ರಿಂದ 4ರವರೆಗೆ ಸಿರಿ ಕುಮಾರ ಬ್ರಹ್ಮಲಿಂಗೇಶ್ವರ ಆದಿ ಆಲಡೆ ಆಯನ ಸಿರಿಜಾತ್ರೆ

Mumbai News Desk