32 C
Mumbai
March 7, 2026
Mumbai News Kannada
ಕರಾವಳಿ

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾದಿ ಶಕ್ತಿ ಕ್ಷೇತ್ರ ಸಂಭ್ರಮದ ನಿಧಿಕುಂಬ ಪ್ರತಿಷ್ಠಾಪನೆ.. ರುದ್ರ ಯಾಗ 





 ಉಡುಪಿ :ದೊಡ್ಡನ ಗುಡ್ಡಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳಲಿರುವ ವೇದ ಮಾತೆ ಗಾಯತ್ರಿ ದೇವಿಯ ಶಿಲಾಮಯ ಗುಡಿಗೆ ನಿಧಿ ಕುಂಭ ಪ್ರತಿಷ್ಠಾಪನ ಮಹೋತ್ಸವವು ಕ್ಷೇತ್ರದ ಧರ್ಮದ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಭಕ್ತರ ಸಮಕ್ಷಮದಲ್ಲಿ ಋತ್ವಿಜರ ಸಹಕಾರದೊಂದಿಗೆ ಬಹು ಸಂಭ್ರಮದಿಂದ ಸಂಪನ್ನಗೊಂಡಿತು.. 

 ಪ್ರಾತಃಕಾಲ ಸಗ್ರಿ ವೇದವ್ಯಾಸ ಐತಾಳ್ ಅವರು ರುದ್ರಯಾಗದ ಸಾಮೂಹಿಕ ಪ್ರಾರ್ಥನೆ ನೆರವೇರಿಸಿದರು ಕ್ಷೇತ್ರ ಉಸ್ತುವಾರಿ  ಕುಸುಮ ನಾಗರಾಜ್ ದೀಪ ಪ್ರಜ್ವಲಿಸುವುದರೊಂದಿಗೆ ಯಾಗಕ್ಕೆ ಚಾಲನೆಯನ್ನು ನೀಡಿದರು.

 ವೇದಮೂರ್ತಿ ಕೊಲಕಾಡಿ ವಾದಿರಾಜ ಉಪಾಧ್ಯಾಯ ಅವರು ರುದ್ರ ಯಾಗವನ್ನು ನೆರವೇರಿಸಿದರು.. ವೇದಮೂರ್ತಿ ಗಣೇಶ್ ಸರಾಳಯ ಅವರು ಸಾಂಕೇತಿಕ ವಾಸ್ತು ಪೂಜೆ ಸಹಿತ  ನಿಧಿ ಕುಂಭ ಪ್ರತಿಷ್ಠಾಪನ ಪೂಜಾ ವಿಧಿ ವಿಧಾನ  ನೆರವೇರಿಸಿದರು…

 ಶ್ರೀ ರಮಾನಂದ ಗುರೂಜಿಯವರು ನಿಧಿ ಕುಂಭ ಪ್ರತಿಷ್ಠಾಪಿಸಿದರು..

 ಕ್ಷೇತ್ರದ ಭಕ್ತರುಗಳು ಶಿಲಾ ಕುಂಬದಲ್ಲಿ ಚಿನ್ನ ಬೆಳ್ಳಿ ನವರತ್ನ ಪಂಚರತ್ನ ಹಾಗೂ ವಿವಿಧ ಆಭರಣಗಳನ್ನು ತಮ್ಮ ಕೈಯಿಂದಲೇ  ಸಮರ್ಪಿಸಿದರು.

 ವೇದ ಮಾತೆ ಗಾಯತ್ರಿ ದೇವಿಯ ಪ್ರತಿಷ್ಠಾಪನ ಪೂರ್ವ ಪ್ರಾಯಶ್ಚಿತ್ತವಾಗಿ ಸಂಪನ್ನಗೊಂಡ ರುದ್ರಯಾಗದಲ್ಲಿ ಕಳತ್ತೂರು ಅಶೋಕ್ ತಂತ್ರಿ, ಶ್ರೀವಸ್ತಾ, ರಿಷಿಕೇಶ್ಐತಾಳ ವರದರಾಜ ಐತಾಳ, ದೆಂದಡ್ಕ ಸುಬ್ರಹ್ಮಣ್ಯ ಭಟ್, ಕೃಷ್ಣ ಭಟ್ ಶೃಂಗೇರಿ, ಆದರ್ಶ ಸಾಮಗ, ಸ್ವಸ್ತಿಕ್ ಆಚಾರ್ಯ ಹಾಗೂ ನಾಗಶಯನ, ಅನಿಶಾಚಾರ್ಯ ಅವರು ಸಹಕರಿಸಿದರು.. ದೇವಿಯನ್ನು ವಿಶೇಷವಾಗಿ ಕ್ಷೇತ್ರದ ಆನಂದಬಾರಿ ಅವರು ಅಲಂಕರಿಸಿದ್ದರು.  ಯಾಗದ ಪ್ರಯುಕ್ತ ಬ್ರಾಹ್ಮಣ ಸುವಾಸಿನಿ ಆರಾಧನೆ ಬ್ರಾಹ್ಮಣರಾಧನೆ ನೆರವೇರಿತು.. ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನೆರವೇರಿತು ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ



Related posts

ಇಷ್ಟಾರ್ಥ ಸಿದ್ಧಿಯಿಂದ ಕಾಪು ಮಾರಿಯಮ್ಮನಿಗೆ ಶಿಲಾಸೇವೆ ಅರ್ಪಣೆ ಮಾಡಿದ ಪೌರಕಾರ್ಮಿಕರು ಮತ್ತು ಚಾಲಕರು

Mumbai News Desk

ಮುಂಡ್ಕೂರು ಕಜೆ ಶ್ರೀ ಮಹಾಮ್ಮಾಯಿ ದೇವಸ್ಥಾನ, . 22 ರಿಂದ 28ರ ತನಕ ಬ್ರಹ್ಮಕಳಸಾಭಿಷೇಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಕೊಡೆತ್ತೂರು ಶ್ರೀ ಅರಸು ಕುಂಜರಾಯ ದೈವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶದ ಮನವಿ ಬಿಡುಗಡೆ

Mumbai News Desk

ಡಿ.12 ರಿಂದ 23 ರ ವರಗೆ ಸೂಡ ಶ್ರೀ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವ

Mumbai News Desk

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ‘ಸಂಸ್ಕೃತಿ ಸೌಧದ ಉಗ್ರಾಣ ತುಂಬಲಿ’: ಭಾಸ್ಕರ ರೈ ಕುಕ್ಕುವಳ್ಳಿ

Mumbai News Desk

ಶ್ರೀ ಧರ್ಮ ಜಾರಂದಾಯ ದೈವಸ್ಥಾನ, ಕರ್ನಿರೆ ಎ 1 ರಿಂದ 3 ವರೆಗೆ    ಜಾರಂದಾಯ ದೈವದ ಕಾಲಾವಧಿ ನೇಮೋತ್ಸವ,

Mumbai News Desk