29 C
Mumbai
March 6, 2026
Mumbai News Kannada
ಮುಂಬಯಿ

ಪೇಜಾವರ ಮಠದಲ್ಲಿ ಮನಸೂರೆಗೊಂಡ ಪುತ್ತೂರು ನರಸಿಂಹ ನಾಯಕ್ ಭಕ್ತಿ ಸಂಗೀತ ಕಚೇರಿ





ಮುಂಬಯಿ, ಅ.23- ಭಕ್ತಿ ಸಂಗೀತ ಕ್ಷೇತ್ರದಲ್ಲಿ ಪ್ರಖ್ಯಾತ ಗಾಯಕರಾದ ಶ್ರೀ ಪುತ್ತೂರು ನರಸಿಂಹ ನಾಯಕ್ ಅವರಿಂದ ದಾಸರ ಪದಗಳ ಭಕ್ತಿ ಸಂಗೀತ ಕಾರ್ಯಕ್ರಮವು ಅ.21 ರಂದು ಶನಿವಾರ ಸಂಜೆ ಸಾಂತಾಕ್ರೂಜ್ ಪೂರ್ವದ ಪ್ರಭಾತ್ ಕಾಲನಿಯಲ್ಲಿರುವ ಶ್ರೀ ಪೇಜಾವರ ಮಠದಲ್ಲಿ ಭಕ್ತಿಸಂಭ್ರಮದಿಂದ ಜರಗಿತು.

ಮುಂಬಯಿಗೆ ಕಳೆದ ಹಲವಾರು ವರ್ಷಗಳಿಂದ  ಪುತ್ತೂರು ನರಸಿಂಹ ನಾಯಕ್ ಅವರನ್ನು  ಬರಮಾಡಿಸಿ ಭಕ್ತಿ ಸಂಗೀತದ ಉಚಿತ ರಸದೌತಣ ನೀಡುತ್ತಾ ಬಂದಿರುವ ಪ್ರಫುಲ್ಲಾ ಎಸ್ ಕೆ  ಉರ್ವಲ್ ಕುಟುಂಬ ಮತ್ತು ಬಿ ಆರ್ ಶೆಟ್ಟಿ ಕುಟುಂಬ ಈ ವರ್ಷವೂ  ಮುಂಬಯಿಯ ಭಕ್ತಿಸಂಗೀತ ಪ್ರೇಮಿಗಳಿಗೆ ಶನಿವಾರ  ಪೇಜಾವರ ಮಠದಲ್ಲಿ ಉಚಿತವಾಗಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು. 

ಈ ಸಂದರ್ಭದಲ್ಲಿ ಗಾಯಕರಾದ ಪುತ್ತೂರು ನರಸಿಂಹ ನಾಯಕ್ ಅವರಿಗೆ ಶಾಲು ಹೊದೆಸಿ  ಪೇಜಾವರ ಮಠದ ನಿರ್ವಾಹಕರಾದ ಶ್ರೀ ಹರಿ ಭಟ್ ಗೌರವಿಸಿದರು. ವೇದಿಕೆಯಲ್ಲಿ ಮುರಳಿ ಭಟ್ ಡೊಂಬಿವಿಲಿ, ಹರಿ ಭಟ್, ಕಾರ್ಯಕ್ರಮ ಆಯೋಜಕರಾದ ಐಐಟಿಸಿ ಯ ವಿಕ್ರಾಂತ್ ಉರ್ವಲ್,  ಸುಧೀರ್ ಶೆಟ್ಟಿ, ಶ್ರೀಧರ್ ರಾವ್ ಗೊರಾಯಿ, .. ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.



Related posts

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ನಮಿತ್ ಉಮೇಶ್ ಪೂಜಾರಿಗೆ ಶೇ 87.40 ಅಂಕ.

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ, ಕಿಸಾನ್ ನಗರ ಥಾಣೆ ಇವರ ಇರುಮುಡಿ ಪೂಜೆ ಸಂಪನ್ನ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಅಂಕಿತಾ ಭಾಸ್ಕರ್ ಭಂಡಾರಿ ಗೆ ಶೇ 82.60 ಅಂಕ.

Mumbai News Desk

ಬಿ.ಎಸ್.ಕೆ.ಬಿ. ಎಸೋಸಿಯೇಶನ್, ಗೋಕುಲ, ಶತಮಾನೋತ್ಸವಾಚರಣೆಗೆ ಪಾದಯಾತ್ರೆಯ ಮೂಲಕ ಚಾಲನೆ. 

Mumbai News Desk

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಶಹಡ್ ಬಿರ್ಲಾಗೇಟ್ 63 ನೇ ವಾರ್ಷಿಕ ಮಹಾಪೂಜೆ ಸಂಪನ್ನ

Mumbai News Desk

ಕನಕದಾಸ ಜಯಂತಿ-ಕುವೆಂಪು ಜಯಂತಿ, ಕರ್ನಾಟಕ ರಾಜ್ಯೋತ್ಸವ ಸಂಭ್ರಮ-ಕರುನಾಡ ಡಿಂಡಿಮ ಸಮಾರೋಪ. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸಂಘ ಸಂಸ್ಥೆಗಳಿಗೆ, ಪ್ರಶಸ್ತಿ ಸನ್ಮಾನ

Mumbai News Desk