32 C
Mumbai
April 24, 2026
Mumbai News Kannada
ಮುಂಬಯಿ

ಪೇಜಾವರ ಮಠದಲ್ಲಿ ಮನಸೂರೆಗೊಂಡ ಪುತ್ತೂರು ನರಸಿಂಹ ನಾಯಕ್ ಭಕ್ತಿ ಸಂಗೀತ ಕಚೇರಿ





ಮುಂಬಯಿ, ಅ.23- ಭಕ್ತಿ ಸಂಗೀತ ಕ್ಷೇತ್ರದಲ್ಲಿ ಪ್ರಖ್ಯಾತ ಗಾಯಕರಾದ ಶ್ರೀ ಪುತ್ತೂರು ನರಸಿಂಹ ನಾಯಕ್ ಅವರಿಂದ ದಾಸರ ಪದಗಳ ಭಕ್ತಿ ಸಂಗೀತ ಕಾರ್ಯಕ್ರಮವು ಅ.21 ರಂದು ಶನಿವಾರ ಸಂಜೆ ಸಾಂತಾಕ್ರೂಜ್ ಪೂರ್ವದ ಪ್ರಭಾತ್ ಕಾಲನಿಯಲ್ಲಿರುವ ಶ್ರೀ ಪೇಜಾವರ ಮಠದಲ್ಲಿ ಭಕ್ತಿಸಂಭ್ರಮದಿಂದ ಜರಗಿತು.

ಮುಂಬಯಿಗೆ ಕಳೆದ ಹಲವಾರು ವರ್ಷಗಳಿಂದ  ಪುತ್ತೂರು ನರಸಿಂಹ ನಾಯಕ್ ಅವರನ್ನು  ಬರಮಾಡಿಸಿ ಭಕ್ತಿ ಸಂಗೀತದ ಉಚಿತ ರಸದೌತಣ ನೀಡುತ್ತಾ ಬಂದಿರುವ ಪ್ರಫುಲ್ಲಾ ಎಸ್ ಕೆ  ಉರ್ವಲ್ ಕುಟುಂಬ ಮತ್ತು ಬಿ ಆರ್ ಶೆಟ್ಟಿ ಕುಟುಂಬ ಈ ವರ್ಷವೂ  ಮುಂಬಯಿಯ ಭಕ್ತಿಸಂಗೀತ ಪ್ರೇಮಿಗಳಿಗೆ ಶನಿವಾರ  ಪೇಜಾವರ ಮಠದಲ್ಲಿ ಉಚಿತವಾಗಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು. 

ಈ ಸಂದರ್ಭದಲ್ಲಿ ಗಾಯಕರಾದ ಪುತ್ತೂರು ನರಸಿಂಹ ನಾಯಕ್ ಅವರಿಗೆ ಶಾಲು ಹೊದೆಸಿ  ಪೇಜಾವರ ಮಠದ ನಿರ್ವಾಹಕರಾದ ಶ್ರೀ ಹರಿ ಭಟ್ ಗೌರವಿಸಿದರು. ವೇದಿಕೆಯಲ್ಲಿ ಮುರಳಿ ಭಟ್ ಡೊಂಬಿವಿಲಿ, ಹರಿ ಭಟ್, ಕಾರ್ಯಕ್ರಮ ಆಯೋಜಕರಾದ ಐಐಟಿಸಿ ಯ ವಿಕ್ರಾಂತ್ ಉರ್ವಲ್,  ಸುಧೀರ್ ಶೆಟ್ಟಿ, ಶ್ರೀಧರ್ ರಾವ್ ಗೊರಾಯಿ, .. ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.



Related posts

ಬಿಎಂಸಿ ಚುನಾವಣೆ 2026: ಮುಂಬೈ ಮಹಾಸಮರಕ್ಕೆ ಕ್ಷಣಗಣನೆ; ನಾಳೆ ಮತದಾನ

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬಯಿ ಇದರ ಅಧ್ಯಕ್ಷರಾಗಿ ಹರೀಶ್ ಜಿ ಅಮೀನ್ ಆಯ್ಕೆ

Mumbai News Desk

ಶಹಾಡ್: ಶ್ರೀ ಮೂಕಾಂಬಿಕಾ ದೇವಿ ಸನ್ನಿಧಿಯಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ.

Mumbai News Desk

ಭಾರತ್ ಬ್ಯಾಂಕ್ ವಿರಾರ್ ಶಾಖೆಯ 47ನೇ ಸಂಸ್ಥಾಪನಾ ದಿನಾಚರಣೆ ಸಂಭ್ರಮ

Mumbai News Desk

ಬಂಟರ ಸಂಘ ಮುಂಬಯಿ, ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯ ಅಶ್ರಯದಲ್ಲಿ ಉಚಿತ ನೇತ್ರ ಪರೀಕ್ಷೆ ಹಾಗೂ ರಕ್ತದಾನ ಶಿಬಿರ

Mumbai News Desk

ಶ್ರೀ ಮೂಕಾಂಬಿಕ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ : ಮಹಾ ಶಿವರಾತ್ರಿಯ ಅಂಗವಾಗಿ ಏಕಹಾ ಭಜನೆ

Mumbai News Desk