32 C
Mumbai
March 7, 2026
Mumbai News Kannada
ಸುದ್ದಿ

ಡಹಾಣು ಶ್ರೀ ಮಹಾಲಕ್ಷ್ಮೀ ಮಂದಿರದಲ್ಲಿ ವಾರ್ಷಿಕ ಜಾತ್ರೆ ಆರಂಭ





      ದೇಶದ 61 ಶಕ್ತಿಪೀಠಗಳಲ್ಲಿ ಒಂದಾಗಿದ್ದು ಮಹಾರಾಷ್ಟ್ರ ಹಾಗೂ ಗುಜರಾತ್ ನ ಅಸಂಖ್ಯ ಭಾವಿಕರ ಶೃದ್ಧಾಸ್ಥಾನವಾಗಿರುವ ಡಹಾಣೂವಿನ ಶ್ರೀ ಮಹಾಲಕ್ಶ್ಮೀ ಮಂದಿರದಲ್ಲಿನ ವಾರ್ಷಿಕ ಜಾತ್ರೆಯು ಇದೇ ಎಪ್ರಿಲ್ 23 ರ ಹನುಮಾನ್ ಜಯಂತಿಯಂದು ಆರಂಭವಾಗಿದೆ. 

      ಮುಂಬೈ ಅಹಮದಾಬಾದ್ ರಾಜಮಾರ್ಗದಲ್ಲಿನ ಚಾರೋಟಿಯ ಡಹಾಣೂ ನಾಸಿಕ್ ಕೂಡುರಸ್ತೆಯಲ್ಲಿಂದ ಸುಮಾರು ಮೂರು ಕಿ.ಮೀ.ದೂರದಲ್ಲಿನ  ವಿವಲ್ ವೇಡೆ ಯಲ್ಲಿ ಹೈವೇ ಬದಿಯಲ್ಲಿಯೇ ಇರುವ ಈ ಪ್ರಸಿದ್ಧ ಮಂದಿರದಲ್ಲಿ ಚೈತ್ರ ಪೂರ್ಣಿಮೆಯಂದು ಆರಂಭವಾಗಿ ಕೃಷ್ಣ ಪಕ್ಷದ ಅಷ್ಟಮಿಯ ತನಕ ಸುಮಾರು 15 ರಿಂದ 20 ದಿನ  ಜರಗುವ  ಈ ಜಾತ್ರೆಗೆ ದೂರದ ಊರುಗಳಿಂದ ಅಸಂಖ್ಯ ಭಕ್ತಾದಿಗಳು ಆಗಮಿಸುತ್ತಾರೆ.

 

ಸ್ಥಳೀಯ ಆದಿವಾಸಿಗಳಾದ ‘ವಾರಲಿ ‘ ಯವರ ಕುಲದೇವಿ ( ರಾಣಿ ಆಯೀ) ಎಂದೇ ನಂಬಿಕೊಂಡು ಪೂಜಿಸಲ್ಪಡುವ ಈ ಮಂದಿರದ ಆಡಳಿತ ಹಾಗೂ ಪೂಜಾ ವಿಧಿವಿಧಾನಗಳನ್ನು ಇಲ್ಲಿನ ಸಾತವೀ ಕುಟುಂಬಸ್ಥರು ನಡೆಸಿಕೊಂಡು ಬರುತ್ತಾರೆ. 

   ಒಂದು ಗ್ರಾಮದ ಜಾತ್ರೆಯ ಪರಿಪೂರ್ಣ ಸ್ವರೂಪವುಳ್ಳ   ಈ ಜಾತ್ರೆಯಲ್ಲಿ ಭಾಗವಹಿಸಿ ಆನಂದಿಸಲು ಸ್ಥಳೀಯರು ಹಾಗೂ ಪರವೂರಿನ ಅಸಂಖ್ಯ  ಭಕ್ತರು ಬರುತ್ತಾರೆ.

  ಕೆಳಗೆ ಭವ್ಯ ದೇವೀ ಮಂದಿರವಿದ್ದು ಪೂರ್ಣಿಮೆಯಂದು ಜರಗುವ ಹೋಮದಲ್ಲಿ ಭಾಗವಹಿಸಲು   ಹಾಗೂ  ಅನತಿ ದೂರದಲ್ಲಿರುವ ಬೆಟ್ಟದ ಶಿಖರದ  1400 ಅಡಿ ಎತ್ತರದ ( ಮುಸಳ್ಯಾ ಡೋಂಗರ್) ಮೇಲೆ ರಾತ್ರಿಯಲ್ಲಿ     ಜರಗುವ ಧ್ವಜಾರೋಹಣವನ್ನು ವೀಕ್ಢಿಸಲು ಸಾವಿರಾರು ಜನರು ಆಗಮಿಸುತ್ತಾರೆ.

ಮಾಧ್ಯಮ ವರದಿ

ಪಿ.ಆರ್.ರವಿಶಂಕರ್ ಡಹಾಣೂರೋಡ್

8483980035



Related posts

ಪಳ್ಳಿ “ಫಿಶ್ ಮೀಲ್“ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ, ತಹಶೀಲ್ದಾರ್ ರಿಂದ ಸೂಕ್ತ ಕ್ರಮದ ಭರವಸೆ.

Mumbai News Desk

ಕತಾರ್ ಬಂಟರ ಸಂಘದ ಪದಾಧಿಕಾರಿಗಳಿಗೆ ಒಕ್ಕೂಟದಿಂದ ಗೌರವ. 

Mumbai News Desk

ಮಂಗಳೂರಿನಲ್ಲಿ ಕುಲಾಲ ಭವನ ಲೋಕಾರ್ಪಣೆ: ಸಮಾಜ ಬಾಂಧವರ ಕನಸು ನನಸು

Mumbai News Desk

ಬಟ್ಟೆ ಕುದ್ರು ದುರ್ಗಿ ಶ್ರೀಯಾನ್ ನಿಧನ.

Mumbai News Desk

” ಕನ್ನಡಿಗರ ಉನ್ನತ ಮಹಾವಿದ್ಯಾಲಯ ಐರೋಲಿ ಯ ಜ್ಞಾನ ವಿಕಾಸ ಮಂಡಳದ ಮೆಹತಾ ಮಹಾವಿದ್ಯಾಲಯ”

Mumbai News Desk

ಪ್ಯಾರಿಸ್ ಫ್ಯಾಶನ್ ವೇದಿಕೆಯಲ್ಲಿ ಮುಂಬೈಯ ಪ್ರಭಾ ಸುವರ್ಣ ಮಿಂಚಿನ ಸಂಚಲನ:

Mumbai News Desk