32 C
Mumbai
April 24, 2026
Mumbai News Kannada
ಸುದ್ದಿ

ಯಕ್ಷಗಾನದ ಮಧುರ ದ್ವನಿ, ಕರಾವಳಿ ಕೋಗಿಲೆ ಸುಬ್ರಮಣ್ಯ ಧಾರೇಶ್ವರ್ ಇನ್ನಿಲ್ಲ






ಬಡಗುತಿಟ್ಟಿನ ಶೇಷ್ಠ ಭಾಗವತ, ಯಕ್ಷ ರಂಗದ ತಜ್ಞ ಭಾಗವತರೆಂದು ಗುರುತಿಸಲ್ಪಟ್ಟ ಸುಭ್ರಮಣ್ಯ ಧಾರೇಶ್ವರ್ ಇಂದು (ಏ.25)ಬೆಳ್ಳಿಗೆ ಬೆಂಗಳೂರಿನಲ್ಲಿ ನಿಧನ ಹೊಂದಿದರು, ಅವರಿಗೆ 67 ವರ್ಷ ಪ್ರಾಯವಾಗಿತ್ತು.
ಅವರು ಪತ್ನಿ, ಪುತ್ರ ಹವ್ಯಾಸಿ ಕಲಾವಿದ ಕಾರ್ತಿಕ್, ಪುತ್ರಿ, ಹಾಗೂ ಅಸಂಖ್ಯಾತ ಅಭಿಮಾನಿಗಳನ್ನು ಅಗಲಿರುವರು.

ಕೋಟ ಅಮೃತೇಶ್ವರಿ, ಶ್ರೀ ಪೆರ್ಡೂರು ಮೇಳದಲ್ಲಿ ಅವರು ಭಾಗವತರಾಗಿ, ಹೊಸ ರಾಗಗಳನ್ನು ಯಕ್ಷರಂಗದಲ್ಲಿ ಯಶಸ್ವಿಯಾಗಿ ಬಳಸಿರುವರು. ಅವರು ಸುಮಾರು 400ಕ್ಕೂ ಅಧಿಕ ಯಕ್ಷಗಾನದ ಅಡಿಯೋ ಕ್ಯಾಸೆಟ್ ಗೆ ದ್ವನಿಯಗಿದ್ದಾರೆ. ಪೆರ್ಡೂರು ಮೇಳದಲ್ಲಿ 26 ವರ್ಷ 300ಕ್ಕೂ ಅಧಿಕ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಪ್ರಸಂಗಗಳನ್ನು ಅವರು ನಿರ್ದೇಶಿಸಿದ್ದು, ಎಲ್ಲಾ ಪ್ರಸಂಗಗಳೂ ಸೂಪರ್ ಹಿಟ್ ಆಗಿವೆ.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದ ಅವರ ನಿಧನ ಯಕ್ಷರಂಗಕ್ಕೆ ತುಂಬಲಾರದ ನಷ್ಟ.
ಮೃತರ ಅಂತ್ಯಕ್ರಿಯೆ ಇಂದು ಸಂಜೆ ಕುಂದಾಪುರ ತಾಲೂಕಿನ ನಾಗೂರಿನ ಅವರ ಸ್ವಗ್ರಹದಲ್ಲಿ ನಡೆಯಲಿದೆ.



Related posts

ಹೆಗ್ಗಡೆ ಸೇವಾ ಸಂಘ ಮುಂಬಯಿ ಇದರ ಮಾಜಿ ಅಧ್ಯಕ್ಷ ವಿಜಯ್ ಬಿ ಹೆಗ್ಡೆ ನಿಧನ

Mumbai News Desk

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ರಂಗಸಾರಥಿ ಶ್ರೀವಿಶ್ವನಾಥ್ ಶೆಟ್ಟಿ ಅಯ್ಕೆ

Mumbai News Desk

ತಮಿಳುನಾಡು : ನಟ-ರಾಜಕಾರಣಿ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತಕ್ಕೆ 31 ಮಂದಿ ಬಲಿ, 40 ಜನರ ಸ್ಥಿತಿ ಚಿಂತಾಜನಕ

Mumbai News Desk

ರಂಗ ನಟ, ಕಲಾ ಪೋಷಕ, ಸಂಘಟಕ ಸದಾಶಿವ ಡಿ ತುಂಬೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ತಶಸ್ತಿ

Mumbai News Desk

ಕನ್ಯಾನ ಸದಾಶಿವ ಶೆಟ್ಟಿ, ಐಕಳ ಹರೀಶ್ ಶೆಟ್ಟಿ ವಿವಾದಕ್ಕೆ ತೆರೆ:ಸಮಾಜದ ಉನ್ನತಿಗೆ, ಒಗ್ಗಟ್ಟಿನ ಬದ್ಧತೆಗೆ ನಿರ್ಧಾರ.

Mumbai News Desk

ಭಾಂಡೂಪ್ : ಚಿಕ್ಕು ಅಣ್ಣಪ್ಪ ಪುತ್ರನ್ ನಿಧನ

Mumbai News Desk