July 23, 2026
Mumbai News Kannada
ಸುದ್ದಿ

ಯಕ್ಷಗಾನದ ಮಧುರ ದ್ವನಿ, ಕರಾವಳಿ ಕೋಗಿಲೆ ಸುಬ್ರಮಣ್ಯ ಧಾರೇಶ್ವರ್ ಇನ್ನಿಲ್ಲ








ಬಡಗುತಿಟ್ಟಿನ ಶೇಷ್ಠ ಭಾಗವತ, ಯಕ್ಷ ರಂಗದ ತಜ್ಞ ಭಾಗವತರೆಂದು ಗುರುತಿಸಲ್ಪಟ್ಟ ಸುಭ್ರಮಣ್ಯ ಧಾರೇಶ್ವರ್ ಇಂದು (ಏ.25)ಬೆಳ್ಳಿಗೆ ಬೆಂಗಳೂರಿನಲ್ಲಿ ನಿಧನ ಹೊಂದಿದರು, ಅವರಿಗೆ 67 ವರ್ಷ ಪ್ರಾಯವಾಗಿತ್ತು.
ಅವರು ಪತ್ನಿ, ಪುತ್ರ ಹವ್ಯಾಸಿ ಕಲಾವಿದ ಕಾರ್ತಿಕ್, ಪುತ್ರಿ, ಹಾಗೂ ಅಸಂಖ್ಯಾತ ಅಭಿಮಾನಿಗಳನ್ನು ಅಗಲಿರುವರು.

ಕೋಟ ಅಮೃತೇಶ್ವರಿ, ಶ್ರೀ ಪೆರ್ಡೂರು ಮೇಳದಲ್ಲಿ ಅವರು ಭಾಗವತರಾಗಿ, ಹೊಸ ರಾಗಗಳನ್ನು ಯಕ್ಷರಂಗದಲ್ಲಿ ಯಶಸ್ವಿಯಾಗಿ ಬಳಸಿರುವರು. ಅವರು ಸುಮಾರು 400ಕ್ಕೂ ಅಧಿಕ ಯಕ್ಷಗಾನದ ಅಡಿಯೋ ಕ್ಯಾಸೆಟ್ ಗೆ ದ್ವನಿಯಗಿದ್ದಾರೆ. ಪೆರ್ಡೂರು ಮೇಳದಲ್ಲಿ 26 ವರ್ಷ 300ಕ್ಕೂ ಅಧಿಕ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಪ್ರಸಂಗಗಳನ್ನು ಅವರು ನಿರ್ದೇಶಿಸಿದ್ದು, ಎಲ್ಲಾ ಪ್ರಸಂಗಗಳೂ ಸೂಪರ್ ಹಿಟ್ ಆಗಿವೆ.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದ ಅವರ ನಿಧನ ಯಕ್ಷರಂಗಕ್ಕೆ ತುಂಬಲಾರದ ನಷ್ಟ.
ಮೃತರ ಅಂತ್ಯಕ್ರಿಯೆ ಇಂದು ಸಂಜೆ ಕುಂದಾಪುರ ತಾಲೂಕಿನ ನಾಗೂರಿನ ಅವರ ಸ್ವಗ್ರಹದಲ್ಲಿ ನಡೆಯಲಿದೆ.



Related posts

ಅಜಿತ್ ಪವಾರ್ ವಿಮಾನ ಅಪಘಾತ : ಘಟನೆ ಹೇಗೆ ನಡೆಯಿತು? ‘ಕಳಪೆ ಗೋಚರತೆ… ನಂತರ ಅಪಘಾತ’

Mumbai News Desk

“ಪ್ರೇರಣಾ – ಲಿಯೋ PST ಸ್ಕೂಲಿಂಗ್ 2025-26: ಲಿಯೋ ಜಿಲ್ಲಾ 317D ಯಲ್ಲಿ ನಾಯಕತ್ವಕ್ಕೆ ನೂತನ ಪ್ರೇರಣೆ”

Mumbai News Desk

ಬೊಳ್ನಾಡು ಶ್ರೀ ಚಿರುಂಭ ಭಗವತಿ ಕ್ಷೇತ್ರದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆ

Mumbai News Desk

ಜೀವನ್ ಸೇವಾ ಬ್ರಿಗೇಡ್‌ ಪಡುಬಿದ್ರಿ: ವೈದ್ಯಕೀಯ ಆರ್ಥಿಕ ನೆರವು ವಿತರಣೆ

Mumbai News Desk

ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ ಮುಂಬಯಿ ವಿಭಾಗದ ಕಾರ್ಯದರ್ಶಿಯಾಗಿ ಮಹಾದೇವ ಪೂಜಾರಿ ಆಯ್ಕೆ

Mumbai News Desk

ಲೇಖಕ,ಪ್ರಸಿದ್ಧ ರಂಗ ನಟ   ಸುಂದರ ಮೂಡಬಿದ್ರಿ ಯವರಿಗೆಅಮೂಲ್ಯ   ಪತ್ರಿಕೆ ಯ  ಬೆಳ್ಳಿ ಹಬ್ಬದ ವಿಶೇಷ  ಸನ್ಮಾನ

Mumbai News Desk