30.5 C
Mumbai
June 8, 2026
Mumbai News Kannada
ಸುದ್ದಿ

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ, ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ





ಮಂಗಳೂರು / ಮುಂಬಯಿ : ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ ಎರುಂಬು – ಅಳಿಕೆ ಬಂಟ್ವಾಳ ತಾಲೂಕು ಇದರ ಸಂಪೂರ್ಣ ಜೀರ್ಣೋದ್ದಾರ ಕಾರ್ಯವು ಅಂತಿಮ ಹಂತದಲ್ಲಿದ್ದು ಮೇ. ೧೦ ರಂದು ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆಯು ನಡೆಯಿತು.

ಮುಂಬಯಿಯ ಉದ್ಯಮಿ, ಕೊಡುಗೈ ದಾನಿ, ತೀಯಾ ಸಮಾಜ ಮುಂಬಯಿಯ ಅಧ್ಯಕ್ಷ, ಬೊಳ್ನಾಡು ಶ್ರೀ ಭಗವತೀ ತೀಯಾ ಸಮಾಜ ಸೇವಾ ಸಮಿತಿಯ ಆಡಳಿತ ಮೊಕ್ತೇಸರರಾದ ಕೃಷ್ಣ ಎನ್. ಉಚ್ಚಿಲ್ ಇವರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ದ ಜೀರ್ಣೋದ್ದಾರ ಕಾರ್ಯವು ನಡೆಯುತ್ತಿದ್ದು ಇವರ ನೇತೃತ್ವದಲ್ಲಿ ಬ್ರಹ್ಮಶ್ರೀ ತಂತ್ರಿವರ್ಯ ಉಳಿಯತ್ತಾಯ ವಿಷ್ಣು ಅಸ್ರರ ಮಾರ್ಗದರ್ಶನದಲ್ಲಿ ತೀಯಾ ಸಮುದಾಯದ ವಿವಿಧ ಕ್ಷೇತ್ರಗಳ ಆಚಾರಪಟ್ಟವರ ದಿವ್ಯ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಮೇ. ೧೦ ರಂದು ಪೂರ್ವಾಹ್ನ ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆಯು ನಡೆಯಿತು.

ಕಾರ್ಯಕ್ರಮದ ಯಶಸ್ಸಿಗೆ ಬೊಳ್ನಾಡು ಶ್ರೀ ಭಗವತೀ ತೀಯಾ ಸಮಾಜ ಸೇವಾ ಸಮಿತಿ, ಬೊಳ್ನಾಡು ಶ್ರೀ ಭಗವತೀ ಯುವಜನ ಸಂಘ, ಬೊಳ್ನಾಡು ಶ್ರೀ ಭಗವತೀ ಮಹಿಳಾ ಸಂಘ, ಬೊಳ್ನಾಡು ಶ್ರೀ ಭಗವತೀ ಭಜನಾ ಸಂಘ, ತೀಯಾ ಲಿಟಲ್ ಟೈಗರ್ಸ್ ಬೊಳ್ನಾಡು ನ ಎಲ್ಲಾ ಸದಸ್ಯರು ಹಾಗೂ ಭಕ್ತರು ಸಹಕರಿಸಿದರು.

  • ಈಶ್ವರ ಎಂ. ಐಲ್


Related posts

ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”

Mumbai News Desk

ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ ಗೆ ಶಿಲಾನ್ಯಾಸ* ಉತ್ತಮ ನಾಯಕತ್ವ ಇದ್ದರೆ ಎಲ್ಲವೂ ಸಾಧ್ಯ: ತೋನ್ಸೆ ಆನಂದ ಶೆಟ್ಟಿ*

Mumbai News Desk

ಡಹಾಣೂವಿನ ಉದ್ಯಮಿ ಸಮಾಜಸೇವಕ ಅಶೋಕ್ ಎಸ್‌. ಶೆಟ್ಟಿ ಉಳೆಪಾಡಿ ಇವರಿಗೆ ವಿಶೇಷ ಸನ್ಮಾನ

Mumbai News Desk

ವಿಧಾನ ಪರಿಷತ್ ಉಪಚುನಾವಣೆ – ಬಿಜಿಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು

Mumbai News Desk

ಬಿಲ್ಲವರ ಅಸೋಸಿಯೇಶನ್ ಮುಂಬಯಿ ಕಾಂದಿವಲಿ ‌ ಸ್ಥಳೀಯ ಕಚೇರಿಯ ಕಾರ್ಯಕರ್ತರಿಂದ ದಿ. ನಾಗೇಶ್ ಕೋಟ್ಯಾನ್ ರವರಿಗೆ ಶ್ರದ್ಧಾಂಜಲಿ.

Mumbai News Desk

ಸಂಘಟಕ, ಕಲಾ ಪೋಷಕ ರಾಜು ಮೆಂಡನ್ ವಂಡ್ಸೆ ಅವರಿಗೆ ಮಾತೃ ವಿಯೋಗ.

Mumbai News Desk