34 C
Mumbai
March 6, 2026
Mumbai News Kannada
ಸುದ್ದಿ

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ, ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ





ಮಂಗಳೂರು / ಮುಂಬಯಿ : ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ ಎರುಂಬು – ಅಳಿಕೆ ಬಂಟ್ವಾಳ ತಾಲೂಕು ಇದರ ಸಂಪೂರ್ಣ ಜೀರ್ಣೋದ್ದಾರ ಕಾರ್ಯವು ಅಂತಿಮ ಹಂತದಲ್ಲಿದ್ದು ಮೇ. ೧೦ ರಂದು ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆಯು ನಡೆಯಿತು.

ಮುಂಬಯಿಯ ಉದ್ಯಮಿ, ಕೊಡುಗೈ ದಾನಿ, ತೀಯಾ ಸಮಾಜ ಮುಂಬಯಿಯ ಅಧ್ಯಕ್ಷ, ಬೊಳ್ನಾಡು ಶ್ರೀ ಭಗವತೀ ತೀಯಾ ಸಮಾಜ ಸೇವಾ ಸಮಿತಿಯ ಆಡಳಿತ ಮೊಕ್ತೇಸರರಾದ ಕೃಷ್ಣ ಎನ್. ಉಚ್ಚಿಲ್ ಇವರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ದ ಜೀರ್ಣೋದ್ದಾರ ಕಾರ್ಯವು ನಡೆಯುತ್ತಿದ್ದು ಇವರ ನೇತೃತ್ವದಲ್ಲಿ ಬ್ರಹ್ಮಶ್ರೀ ತಂತ್ರಿವರ್ಯ ಉಳಿಯತ್ತಾಯ ವಿಷ್ಣು ಅಸ್ರರ ಮಾರ್ಗದರ್ಶನದಲ್ಲಿ ತೀಯಾ ಸಮುದಾಯದ ವಿವಿಧ ಕ್ಷೇತ್ರಗಳ ಆಚಾರಪಟ್ಟವರ ದಿವ್ಯ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಮೇ. ೧೦ ರಂದು ಪೂರ್ವಾಹ್ನ ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆಯು ನಡೆಯಿತು.

ಕಾರ್ಯಕ್ರಮದ ಯಶಸ್ಸಿಗೆ ಬೊಳ್ನಾಡು ಶ್ರೀ ಭಗವತೀ ತೀಯಾ ಸಮಾಜ ಸೇವಾ ಸಮಿತಿ, ಬೊಳ್ನಾಡು ಶ್ರೀ ಭಗವತೀ ಯುವಜನ ಸಂಘ, ಬೊಳ್ನಾಡು ಶ್ರೀ ಭಗವತೀ ಮಹಿಳಾ ಸಂಘ, ಬೊಳ್ನಾಡು ಶ್ರೀ ಭಗವತೀ ಭಜನಾ ಸಂಘ, ತೀಯಾ ಲಿಟಲ್ ಟೈಗರ್ಸ್ ಬೊಳ್ನಾಡು ನ ಎಲ್ಲಾ ಸದಸ್ಯರು ಹಾಗೂ ಭಕ್ತರು ಸಹಕರಿಸಿದರು.

  • ಈಶ್ವರ ಎಂ. ಐಲ್


Related posts

ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ನಗರಕ್ಕೆ ಭವ್ಯ ಸ್ವಾಗತ

Mumbai News Desk

ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳನ್ನು ದಾಟಿದ ಮೊದಲ ವಿಶ್ವ ನಾಯಕ ಪ್ರಧಾನಿ ಮೋದಿ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಮುನಿರಾಜ್ ಜೈನ್ ಮತ್ತು ದಿ. ನ್ಯಾ. ಸುಭಾಷ್ ಶೆಟ್ಟಿ ಯವರಿಗೆ ನುಡಿ ನಮನ.

Mumbai News Desk

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ವಸಯಿಯ ಮೋಹಿತ್ ಆನಂದ ಪೂಜಾರಿಗೆ ಶೇ 86.50%

Mumbai News Desk

ಯಕ್ಷಗಾನದ ಮಧುರ ದ್ವನಿ, ಕರಾವಳಿ ಕೋಗಿಲೆ ಸುಬ್ರಮಣ್ಯ ಧಾರೇಶ್ವರ್ ಇನ್ನಿಲ್ಲ

Mumbai News Desk

ನಿಟ್ಟೆಗುತ್ತು ಸುಮಿತ್ರಾ ಆರ್. ಶೆಟ್ಟಿ ನಿಧನ

Mumbai News Desk