30.9 C
Mumbai
June 8, 2026
Mumbai News Kannada
ಸುದ್ದಿ

ಬಿಲ್ಲವರ ಎಸೋಸಿಯೇಶನ್ ನ ಸೇವಾದಳದ ಕಾರ್ಯಧ್ಯಕ್ಷ ನಾಗೇಶ್ ಎಂ ಕೋಟ್ಯಾನ್ ನಿಧನ.





ಮುಂಬಯಿ : ಬಿಲ್ಲವರ ಎಸೋಸಿಯೇಶನ್ ಮುಂಬಯಿ, ಇದರ ಸೇವಾದಳದ ಕಾರ್ಯಧ್ಯಕ್ಷ, ಹೋಟೆಲ್ ಉದ್ಯಮಿ, ನಾಗೇಶ್ ಎಂ ಕೋಟ್ಯಾನ್ ಇಂದು ರಾತ್ರಿ (ಮೇ.19)ಹೃದಯಘಾತದಿಂದ ನಿಧನ ಹೊಂದಿದರು.
ಮೂಲತಃ ಬಂಟ್ವಾಳ, ಪರಂಗಿಪೇಟೆಯವರಾಗಿದ್ದ ನಾಗೇಶ್ ಅವರಿಗೆ 64 ವರ್ಷ ವಯಸ್ಸಾಗಿತ್ತು.
ಮೃತರು ಪುತ್ರರನ್ನು, ಮೂವರು ಸಹೋದರರನ್ನು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವರು.
ಮುಂಬಯಿ ಬಿಲ್ಲವರ ಪ್ರತಿಷ್ಟಿತ ಸಂಘಟನೆ ಬಿಲ್ಲವರ ಎಸೋಸೋಸಿಯೇಶನ್ ನ ಸಕ್ರಿಯ ಸದಸ್ಯರಾಗಿದ್ದ ಅವರು ಯುವ ಅಭ್ಯುದಯ ಸಮಿತಿಯ ಮಾಜಿ ಅಧ್ಯಕ್ಷರಾಗಿದ್ದರು, ಪ್ರಸ್ತುತ ಸೇವಾದಳದ ಕಾರ್ಯಧ್ಯಕ್ಷ ರಾಗಿ ಸೇವೆ ಸಲ್ಲಿಸುತ್ತಿದ್ದರು.
ಸದಾ ನಗುಮುಖದ, ಸರಳ, ಮೃದು ಸ್ವಭಾವದವರಾಗಿದ್ದ ಅವರು ಎಲ್ಲರೊಂದಿಗೆ ಆತ್ಮೀಯರಾಗಿದ್ದರು. ಅವರ ಅಂತ್ಯಕ್ರಿಯೆ ನಾಳೆ, ಮೇ.20ರಂದು ಪರಂಗಿಪೇಟೆಯ ಸ್ವಗ್ರ ಹದಲ್ಲಿ ನಡೆಯಲಿದೆ.
ನಾಗೇಶ್ ಅವರ ನಿಧನಕ್ಕೆ ಬಿಲ್ಲವರ ಎಸೋಸಿಯೇಶನ್ ನ ಅಧ್ಯಕ್ಷ ಹರೀಶ್ ಜಿ ಅಮೀನ್ ಹಾಗೂ ಪದಾಧಿಕಾರಿಗಳು, ಉಪ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣ, ಹಾಗೂ ನಿರ್ದೇಶಕರುಗಳು, ಜಯ ಸುವರ್ಣ ಅವರ ಅಭಿಮಾನಿಗಳು ಮತ್ತು ಬಿಲ್ಲವರ ಹಿತ ಚಿಂತಕರು ಸಂತಾಪ ವ್ಯಕ್ತ ಪಡಿಸಿದ್ದಾರೆ.



Related posts

ರಂಗನಟ, ದೂರದರ್ಶನ ಕಲಾವಿದ ರಮೇಶ ಶಿವಪುರ ಅವರಿಗೆ ಮಾತೃ ವಿಯೋಗ

Mumbai News Desk

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ-2025ಕ್ಕೆ ಚಾಲನೆ

Mumbai News Desk

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್; ಧಾರ್ಮಿಕ ಮುಂದಾಳುಗಳಿಗೆ ಸನ್ಮಾನ, ಗೌರವಾರ್ಪಣೆ

Mumbai News Desk

ಶಾಲಾ ಹಂತದಲ್ಲೇ ಈಜು ಕಲಿಕೆ – ಮೂಲತ್ವ ವಿಶ್ವ ಪ್ರಶಸ್ತಿ ಸ್ವೀಕರಿಸಿದ ಮುಳುಗು ತಜ್ಞ ಈಶ್ವರ ಮಲ್ಪೆ ಸಲಹೆ

Mumbai News Desk

ದ್ವಿತೀಯ ಪಿಯುಸಿ ಫಲಿತಾಂಶ : ವಾಣಿಜ್ಯ ವಿಭಾಗದಲ್ಲಿ ಕುಮಾರಿ ಖುಷಿ ಲಕ್ಷ್ಮಣ್ ಕುಕ್ಯಾನ್ ಗೆ 91% ಅಂಕ.

Mumbai News Desk

ಮಹಾರಾಷ್ಟ್ರ ದಲ್ಲಿ ಭೀಕರ ರೈಲು ಅಪಘಾತ – ರೈಲಿನಡಿ ಸಿಲುಕಿ 7 ಜನರ ದುರಂತ ಸಾವು

Mumbai News Desk