30 C
Mumbai
April 24, 2026
Mumbai News Kannada
ಸುದ್ದಿ

ಬಿಲ್ಲವರ ಎಸೋಸಿಯೇಶನ್ ನ ಸೇವಾದಳದ ಕಾರ್ಯಧ್ಯಕ್ಷ ನಾಗೇಶ್ ಎಂ ಕೋಟ್ಯಾನ್ ನಿಧನ.





ಮುಂಬಯಿ : ಬಿಲ್ಲವರ ಎಸೋಸಿಯೇಶನ್ ಮುಂಬಯಿ, ಇದರ ಸೇವಾದಳದ ಕಾರ್ಯಧ್ಯಕ್ಷ, ಹೋಟೆಲ್ ಉದ್ಯಮಿ, ನಾಗೇಶ್ ಎಂ ಕೋಟ್ಯಾನ್ ಇಂದು ರಾತ್ರಿ (ಮೇ.19)ಹೃದಯಘಾತದಿಂದ ನಿಧನ ಹೊಂದಿದರು.
ಮೂಲತಃ ಬಂಟ್ವಾಳ, ಪರಂಗಿಪೇಟೆಯವರಾಗಿದ್ದ ನಾಗೇಶ್ ಅವರಿಗೆ 64 ವರ್ಷ ವಯಸ್ಸಾಗಿತ್ತು.
ಮೃತರು ಪುತ್ರರನ್ನು, ಮೂವರು ಸಹೋದರರನ್ನು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವರು.
ಮುಂಬಯಿ ಬಿಲ್ಲವರ ಪ್ರತಿಷ್ಟಿತ ಸಂಘಟನೆ ಬಿಲ್ಲವರ ಎಸೋಸೋಸಿಯೇಶನ್ ನ ಸಕ್ರಿಯ ಸದಸ್ಯರಾಗಿದ್ದ ಅವರು ಯುವ ಅಭ್ಯುದಯ ಸಮಿತಿಯ ಮಾಜಿ ಅಧ್ಯಕ್ಷರಾಗಿದ್ದರು, ಪ್ರಸ್ತುತ ಸೇವಾದಳದ ಕಾರ್ಯಧ್ಯಕ್ಷ ರಾಗಿ ಸೇವೆ ಸಲ್ಲಿಸುತ್ತಿದ್ದರು.
ಸದಾ ನಗುಮುಖದ, ಸರಳ, ಮೃದು ಸ್ವಭಾವದವರಾಗಿದ್ದ ಅವರು ಎಲ್ಲರೊಂದಿಗೆ ಆತ್ಮೀಯರಾಗಿದ್ದರು. ಅವರ ಅಂತ್ಯಕ್ರಿಯೆ ನಾಳೆ, ಮೇ.20ರಂದು ಪರಂಗಿಪೇಟೆಯ ಸ್ವಗ್ರ ಹದಲ್ಲಿ ನಡೆಯಲಿದೆ.
ನಾಗೇಶ್ ಅವರ ನಿಧನಕ್ಕೆ ಬಿಲ್ಲವರ ಎಸೋಸಿಯೇಶನ್ ನ ಅಧ್ಯಕ್ಷ ಹರೀಶ್ ಜಿ ಅಮೀನ್ ಹಾಗೂ ಪದಾಧಿಕಾರಿಗಳು, ಉಪ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣ, ಹಾಗೂ ನಿರ್ದೇಶಕರುಗಳು, ಜಯ ಸುವರ್ಣ ಅವರ ಅಭಿಮಾನಿಗಳು ಮತ್ತು ಬಿಲ್ಲವರ ಹಿತ ಚಿಂತಕರು ಸಂತಾಪ ವ್ಯಕ್ತ ಪಡಿಸಿದ್ದಾರೆ.



Related posts

ಇನ್ನಂಜೆ ಹಾಲು ಉತ್ಪಾದಕರ ಸಂಘ ದ ನೂತನ ಅಧ್ಯಕ್ಷರಾಗಿ ಶಿವರಾಮ್ ಜೆ ಶೆಟ್ಟಿ ಮಂಡೇಡಿ ಆಯ್ಕೆ,

Mumbai News Desk

ಭಾಯಂದರ್ (ಪೂ) ಕ್ರೌನ್ ಬಿಸಿನೆಸ್ ಹೋಟೆಲ್ ಉದ್ಘಾಟನೆ.

Mumbai News Desk

ಯಕ್ಷಗಾನದ ಮಧುರ ದ್ವನಿ, ಕರಾವಳಿ ಕೋಗಿಲೆ ಸುಬ್ರಮಣ್ಯ ಧಾರೇಶ್ವರ್ ಇನ್ನಿಲ್ಲ

Mumbai News Desk

ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ 1981-82 ರ ಹಳೆ ವಿದ್ಯಾರ್ಥಿಗಳ ಸಮ್ಮಿಲನ:

Mumbai News Desk

ಉಡುಪಿ ರೈಲು ನಿಲ್ದಾಣದಲ್ಲಿ ನಿರ್ಮಿಸಿದ ಪ್ರಯಾಣಿಕರ ಸೌಲಭ್ಯಗಳ ಉದ್ಘಾಟನೆ

Mumbai News Desk

ಶ್ರೀ ಸುಬ್ರಮಣ್ಯ ಮಹಾಗಣಪತಿ ಸ್ಪೋರ್ಟ್ ಕ್ಲಬ್ ತೋಕೂರು ಗೆ, ಅರಸು ಪ್ರಶಸ್ತಿ 2024

Mumbai News Desk