28.4 C
Mumbai
March 7, 2026
Mumbai News Kannada
ಸುದ್ದಿ

ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣರಿಗೆ ಅತ್ಯುತ್ತಮ ಬ್ಯಾಂಕ್ ಕಾರ್ಯಧ್ಯಕ್ಷ ಪ್ರಶಸ್ತಿ.





ಸಹಕಾರಿ ರಂಗದ ಅಗ್ರಗಣ್ಯ ಬ್ಯಾಂಕ್ ಗಳಲ್ಲಿ ಒಂದಾದ ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷ ಸೂರ್ಯಕಾಂತ ಜಯ ಸುವರ್ಣ ಅವರು ಕೋ ಆಪರೇಟಿವ್ ಸಮ್ಮಿತ್ ಕೊಡ ಮಾಡುವ ಅತ್ಯುತ್ತಮ ಬ್ಯಾಂಕ್ ಕಾರ್ಯಧ್ಯಕ್ಷ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕೋ ಆಪರೇಟಿವ್ ಬ್ಯಾಂಕ್ ಸಮ್ಮಿತ್ ಮೇ 22ರಂದು ಮುಂಬಯಿಯ ದಿ ಗ್ರಾಂಡ್ ಲಲಿತ್ ಹೋಟೆಲ್ ನ ಸಭಾಗ್ರಹದಲ್ಲಿ ಆಯೋಜಿಸಿದ ಸಮಾರಂಭದಲ್ಲಿ, ಭಾರತ ಸರಕಾರದ ಮಿನಿಸ್ಟ್ರಿ ಅಪ್ ಕಮ್ಯುನಿಕೇಶನ್ ನ ನಿರ್ದೇಶಕರಾದ ಸುಮ್ನೇಶ್ ಜೋಶಿ ಅವರು ಸೂರ್ಯಕಾಂತ್ ಸುವರ್ಣರಿಗೆ ಪ್ರಶಸ್ತಿಯನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಭಾರತ್ ಬ್ಯಾಂಕ್ ನ ಜಂಟಿ ಆಡಳಿತ ನಿರ್ದೇಶಕ ದಿನೇಶ್ ಸಾಲ್ಯಾನ್, ಚೀಫ್ ಇನ್ಫಾರ್ಮಶನ್ ಸೆಕ್ಯೂರಿಟಿ ಆಫೀಸರ್ (CISO) ಭಾಸ್ಕರ್ ರಾವ್, ಮುಖ್ಯ ಮಾರ್ಕೆಟಿಂಗ್ ಅಧಿಕಾರಿ ರೋಹಿತ್ ಉದ್ಯಾವರ ಉಪಸ್ಥಿತರಿದ್ದರು.
ಸೂರ್ಯಕಾಂತ ಸುವರ್ಣ ಅವರು ಭಾರತ್ ಬ್ಯಾಂಕ್ ನ ಕಾರ್ಯದ್ಯಕ್ಷರಾದ ಬಳಿಕ ಬ್ಯಾಂಕ್ ನ ಅಭಿವೃದ್ಧಿ ಮತ್ತೆ ವೇಗವನ್ನು ಪಡೆದುಕೊಂಡಿದ್ದು ಆಡಳಿತ ಮಂಡಳಿಯ ಸಹಕಾರ, ಹಿರಿಯ – ಕಿರಿಯ ಅಧಿಕಾರಿಗಳ ಕಾರ್ಯ ಕ್ಷಮತೆ, ಸಿಬ್ಬಂದಿ ವರ್ಗದ ನಗುಮೊಗದ ಸೇವೆ, ಈ ಎಲ್ಲಾ ಅಂಶಗಳು ಬ್ಯಾಂಕ್ ನ ಅಭಿವೃದ್ಧಿಗೆ ಪೂರಕವಾಗಿದೆ.

ಭಾರತ್ ಬ್ಯಾಂಕ್ 2023-24ರ ಆರ್ಥಿಕ ವರ್ಷದಲ್ಲಿ ಇಷ್ಟರತನಕ ಇಂಡಿಯನ್ ಬ್ಯಾಂಕ್ಸ್ ಎಸೋಸಿಯೇಶನ್ ನಿಂದ “ಬೆಸ್ಟ್ ಐಟಿ ರಿಸ್ಕ್ ಮ್ಯಾನೇಜ್ಮೆಂಟ್ ಹಾಗೂ “ಬೆಸ್ಟ್ ಸೆಕ್ಯೂರಿಟಿ ಇನಿಶಿಟಿವ್ ಪ್ರಶಸ್ತಿ”, 17ನೇ ಆಲ್ ಇಂಡಿಯ ಕೋ ಆಪರೇಟಿವ್ ಬ್ಯಾಂಕ್ ಸಮ್ಮಿತ್ ನಿಂದ “ಬೆಸ್ಟ್ ಎಚ್ ಆರ್ ಮೆನೇಜಮೆಂಟ್ ಪ್ರಶಸ್ತಿ”, ಬ್ಯಾಂಕೋ ಬ್ಲೂ ರಿಬ್ಬನ್ ನಿಂದ ಐಟಿ ಎಕ್ಸಲೆನ್ಸಿಯಿಂದ “ಐಟಿ ಎಕ್ಸಲೆನ್ಸಿ ಪ್ರಶಸ್ತಿ ” ಪಡೆದಿರುತ್ತದೆ.



Related posts

ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ- ಪಟ್ಲ ಸತೀಶ್ ಶೆಟ್ಟಿ

Mumbai News Desk

ನಮೋ ಮೋಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಉದ್ಯಾವರ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗುವ ಮುದ್ರಣ ಯಂತ್ರ ಕೊಡುಗೆ

Mumbai News Desk

ಉದ್ಯಮಿ, ಸಂಘಟಕ ಗೋಪಾಲ ಪುತ್ರನ್ ಅವರಿಗೆ ಪಿತೃ ವಿಯೋಗ

Mumbai News Desk

ಭಾರತ್ ಬ್ಯಾಂಕ್ ಗೆ “ಅತ್ಯುತ್ತಮ ಐಟಿ ರಿಸ್ಕ್ ಮ್ಯಾನೇಜ್ಮೆಂಟ್ ಪ್ರಶಸ್ತಿ” ಯ ಗರಿ

Mumbai News Desk

ಇಂದು ಭಾರತ್ ಬಂದ್ : ದೇಶಾದ್ಯಂತ ವ್ಯಾಪಕ ಪ್ರತಿಭಟನೆ! ಏನೇನಿರುತ್ತೆ, ಏನಿರಲ್ಲ?: ಇಲ್ಲಿದೆ ಸಂಪೂರ್ಣ ಮಾಹಿತಿ

Mumbai News Desk

ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ಜಗನ್ನಾಥ ಚೌಟ ಬದಿಗುಡ್ಡೆ ನೇಮಕ

Mumbai News Desk