April 23, 2026
Mumbai News Kannada
ಮುಂಬಯಿ

ನಾಲಾಸೋಪಾರ ದ ಉದ್ಯಮಿ, ಸಮಾಜ ಸೇವಕ. ಸಂಘಟಕ,  ಶಶಿಧರ. ಕೆ ಶೆಟ್ಟಿ ಇನ್ನಂಜೆಯವರಿಗೆ ಪೋಲಿಸ್ ಇಲಾಖೆಯ ಅತ್ಯುತ್ತಮ  ಸೇವಕರ್ತ ಪ್ರಶಸ್ತಿ ಪ್ರದಾನ .





   ನಾಲಾಸೋಪಾರ   ಮೇ 23.ವಸಯಿ ತಾಲೂಕಿನ ಹೋಟೆಲ್ ಉದ್ಯಮಿ. ತುಳುಕುಟ ಫೌಂಡೇಶನ್ ನಾಲಾಸೋಪಾರಸಂಸ್ಥೆಯ ಸಂಸ್ಥಾಪಕರು  ಅಧ್ಯಕ್ಷರು. ಶ್ರೀದೇವಿ ಯಕ್ಷಕಲಾ ನಿಲಯ ನಾಲಾಸೋಪಾರ  -ವಿರಾರ್ ನ್ಅಧ್ಯಕ್ಷ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕ. ಮುಂಬೈ ಬಂಟರ ಸಂಘದ ಜೊತೆ ಕೋಶ ಧಿಕಾರಿ. ಸಂಘಟಕರು,  ಶಶಿಧರ. ಕೆ ಶೆಟ್ಟಿ ಇನ್ನಂಜೆ ಯವರು ಅವರ ಸಾಮಾಜಿಕ ಸೇವೆಗಳು ಮತ್ತು ಸಮಾಜದಲ್ಲಿ ಅಪರಾಧ ಕಾರ್ಯಗಳು ನಡೆಯದಂತೆ ಜನಜಾಗೃತಿಯ ಸೇವಾ ಕಾರ್ಯಗಳನ್ನು ಮಾಡುತ್ತಾ ಬಂದಿರುವುದನ್ನು ಗಮನಿಸಿ ನಾಲಾಸೋಪಾರ ಅಚೋಲೆ ಪೊಲೀಸ್ ಠಾಣೆಯ ವರಿಷ್ಟ ಪೊಲೀಸ್ ಅಧಿಕಾರಿ ಯವರು ಗೌರವ ಪ್ರಶಸ್ತಿ ಪತ್ರ ನೀಡಿ ಗೌರವಿಸಿದಾಗದೆ.

ಶಶಿಧರ್ ಕೆ ಶೆಟ್ಟಿಯವರು  ಪಾಲ್ಗರ್ ಜಿಲ್ಲೆಯಲ್ಲಿ ವಿವಿಧ ಭಾಷೆಯ ಸಂಘಟನೆಗಳ   ಸೇವಾ ಕಾರ್ಯಗಳಿಗೆ ಪ್ರೋತ್ಸಾಹಕಾರವನ್ನು ನೀಡುತ್ತಾ ಬಂದವರು.

 ಅಲ್ಲದೆ ವಸಯಿ ತಾಲೂಕಿನ ತುಳು ಕನ್ನಡಿಗರ ಸಂಘ ಸಂಸ್ಥೆಗಳಿಗೆ. ಧಾರ್ಮಿಕ ಕಾರ್ಯಗಳಿಗೆ. ಮತ್ತಿತರ ಸಮಾಜ ಪರ ಸೇವಾ ಕಾರ್ಯಗಳಿಗೆ ಆರ್ಥಿಕ ಸಹಾಯ ಹಾಗೂ ಪ್ರೋತ್ಸಾಹವನ್ನು ನೀಡುತ್ತಾ. ಪರಿಸರದ ಜನರಲ್ಲಿ ಒಗ್ಗಟ್ಟು. ಸಾಮರಸ್ಯ,  ಬೆಳೆಯುವಲ್ಲಿ ವಿಶೇಷವಾಗಿ ಶ್ರಮಿಸುತ್ತಾ ಬಂದವರು . 

ಇವರ ಸೇವಾ ಕಾರ್ಯಗಳನ್ನು ಗುರುತಿಸಿ ಹಲವಾರು ಸಂಘಟನೆಗಳು ಸನ್ಮಾನಿಸಿ ಗೌರವಿಸಿದೆ. 

ಇದೀಗ ಪೊಲೀಸ್ ಇಲಾಖೆ ಕೂಡ ಇವರ ಸೇವೆಯನ್ನು ಗುರುತಿಸಿ  ಪ್ರಶಸ್ತಿ ನೀಡಿ ಸನ್ಮಾನಿಸಿದೆ.

ಪೋಲಿಸ್ ಇಲಾಖೆಯ ಅತ್ಯುನ್ನತ ಗೌರವನ್ನು ಸ್ವೀಕರಿ ಶಶಿಧರ್ ಶೆಟ್ಟಿ ಅವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು. ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ ಮತ್ತು ಪದಾಧಿಕಾರಿಗಳು. ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಕಾರ್ಯಾಧ್ಯಕ್ಷ ಉಲ್ತೂರು ಮೋಹನ್ ದಾಸ್ ಶೆಟ್ಟಿ ಮತ್ತು  ನಿರ್ದೇಶಕರು. ಮೀರಾ ಭಯಂದರ್ ನ ಸಂಘಟಕ ಬಂಟರ ಸಂಘದ ಜೊತೆ  ಕಾರ್ಯದರ್ಶಿ ಗಿರೀಶ್ ಶೆಟ್ಟಿ ತೆಳ್ಳಾರ್.

ಬಂಟರ ಸಂಘದ ವಸಾಯಿ- ದಹಣೂ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಮಂಜುನಾಥ್ ಶೆಟ್ಟಿ ಕೊಡ್ಲಾ ಡಿ ಮತ್ತು ಪದಾಧಿಕಾರಿಗಳು ಮತ್ತು ವಸಯಿ ತಾಲೂಕಿನ ತುಳು ಕನ್ನಡಿಗರು.ಅಭಿನಂದಿಸಿದ್ದಾರೆ..



Related posts

ಬಿಲ್ಲವರ ಅಸೋಸಿಯೇಶನಿನ ಭಾಂಡುಪ್ ಸ್ಥಳೀಯ ಕಚೇರಿಯ ವತಿಯಿಂದ ಶೈಕ್ಷಣಿಕ ನೆರವು, ಸನ್ಮಾನ.

Mumbai News Desk

ಶ್ರೀಮದ್ಭಾರತ ಮಂಡಳಿಯ ವಾರ್ಷಿಕ ಮಂಗಳೋತ್ಸವ : ಜಗನಾಥ ಆರ್ ಕಾಂಚನ್ ಗೆ ಅತ್ಯುತ್ತಮ ಕಾರ್ಯಕರ್ತ ಪುರಸ್ಕಾರ.

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಆಯುಷ್ ಬಿ ಸನಿಲ್ ಗೆ ಶೇ. 88.40 ಅಂಕ.

Mumbai News Desk

ಮುಂಬಯಿಯಲ್ಲಿ “ಕುಲಾಲ ಭವನ ಮಂಗಳೂರು” ಲೋಕಾರ್ಪಣೆ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಮುಂಬಯಿ ಕನ್ನಡ ಸಂಘದ ದತ್ತಿ ಉಪನ್ಯಾಸ ಕಾರ್ಯಕ್ರಮ

Mumbai News Desk

ಮುಂಬೈ: ಐದು ವರ್ಷದ ಮಗುವನ್ನು ಅಪಹರಿಸಿ, 6 ಲಕ್ಷ ರೂ.ಗೆ ಮಾರಾಟ : ವೈದ್ಯರ ಮನೆಯಿಂದ ಮಗುವಿನ ರಕ್ಷಣೆ

Mumbai News Desk