July 23, 2026
Mumbai News Kannada
ಮುಂಬಯಿ

ಡೊಂಬಿವಲಿ ಮಂಜುನಾಥ ವಿದ್ಯಾಲಯ ಕನ್ನಡ, ಆಂಗ್ಲ ಮಾಧ್ಯಮ ಶಾಲೆ ಎಸ್. ಎಸ್. ಸಿ. ಪರೀಕ್ಷೆಯಲ್ಲಿ ಶೇ.100 ಫಲಿತಾಂಶ







ಈ ಬಾರಿಯ ಮಹಾರಾಷ್ಟ್ರ ಎಸ್ ಎಸ್ ಸಿ ಬೋರ್ಡ್ ಪರೀಕ್ಷೆಯಲ್ಲಿ ಹೊರನಾಡ ಕನ್ನಡಿಗರ ಹೆಮ್ಮೆಯ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಡೊಂಬಿವಲಿ ಕರ್ನಾಟಕ ಸಂಘ ಸಂಚಾಲಿತ ಮಂಜುನಾಥ ವಿದ್ಯಾಲಯ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗಳಿಗೆ ಉತ್ತಮ ಫಲಿತಾಂಶ ಬಂದಿದೆ

ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ಕನ್ನಡ ಮಾಧ್ಯಮದಲ್ಲಿ ಒಟ್ಟು 21 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರಲ್ಲಿ 3 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ,  12 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಕಳೆದ 5 ವರ್ಷಗಳಿಂದ ಕನ್ನಡ ಮಾಧ್ಯಮದ ಫಲಿತಾಂಶ ಶೇ.100 ಲಭಿಸುತ್ತಿರುವುದು ವಿಶೇಷತೆಯಾಗಿದೆ. ಕನ್ನಡ ಮಾಧ್ಯಮದಲ್ಲಿ  ಶೇ. 83.20 ಅಂಕಗಳೊಂದಿಗೆ ಅಮಿತ್ ತುಕರಾಮ್ ರಾಥೋಡ್  ಪ್ರಥಮ,   ನಂದಿನಿ ಸಂಜೀವ್ ರಾಠೋಡ್ ಶೇ. 82.60 ಅಂಕಗಳೊಂದಿಗೆ ದ್ವಿತೀಯ,   ರವಿ ರಾಕೇಶ್ ಕರ್ಕಲ್ ಶೇ. 82.60 ಅಂಕಗಳೊಂದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ.

*ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ*

ಆಂಗ್ಲ ಮಾಧ್ಯಮದಲ್ಲಿ ಒಟ್ಟು 135 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು  71 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ,  56 ವಿದ್ಯಾ ರ್ಥಿಗಳು ಪ್ರಥಮ ಶ್ರೇಣಿ ಹಾಗೂ  8 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಕಳೆದ 14 ವರ್ಷಗಳಿಂದ ಆಂಗ್ಲ ಮಾಧ್ಯಮ ಶಾಲೆಯ ಫಲಿತಾಂಶ ಶೇ 100 ಲಭಿಸುತ್ತಿರುವುದು ಪ್ರಶಂಸನೀಯ. ಆಂಗ್ಲ ಮಾಧ್ಯಮದಲ್ಲಿ       ಶೇ  95.80 ಅಂಕಗಳೊಂದಿಗೆ ಪ್ರಣೀತ ಕೈಲಾಶ್ ಕುರ್ಹಡೆ ಪ್ರಥಮ, ಶೇ 95.00 ಅಂಕಗಳೊಂದಿಗೆ ಗೌರವ್ ಸಂಜಯ್ ಗುಪ್ತ ದ್ವಿತೀಯ, ಹಾಗೂ ಶೇ 94.80 ಅಂಕಗಳೊಂದಿಗೆ ಪ್ರಣವ್ ಕೈಲಾಶ್ ಕುರ್ಹಡೆ ತೃತೀಯ ಸ್ಥಾನ ಪಡೆದಿದ್ದಾರೆ.

ತಮ್ಮ ಸಾಧನೆಯ ಮೂಲಕ ಶಾಲೆಯ ಕೀರ್ತಿಯನ್ನು ಉತ್ತುಂಗ ಶಿಖರಕ್ಕೇರಿಸಿದ ವಿದ್ಯಾರ್ಥಿಗಳಿಗೆ, ಅವರ ಯಶಸ್ಸಿಗೆ ಕಾರಣರಾದ ಮುಖ್ಯ ಶಿಕ್ಷಕರಾದ ಸುರೇಖಾ ಪಂಡಿತ್, ಪ್ರಭು ಕೋತಾಲಿ ಹಾಗೂ ಶಿಕ್ಷಕ/ಶಿಕ್ಷಕಿ ವೃಂದ, ಪಾಲಕರು, ಶಿಕ್ಷಕೇತರ ಸಿಬ್ಬಂದಿಯನ್ನು ಡೊಂಬಿವಲಿ ಕರ್ನಾಟಕ ಸಂಘದ ಅಧ್ಯಕ್ಷರಾದ ಸುಕುಮಾರ ಎನ್ ಶೆಟ್ಟಿ , ಉಪಾಧ್ಯಕ್ಷರಾದ ಲೋಕನಾಥ ಎ ಶೆಟ್ಟಿ, ಕಾರ್ಯಾಧ್ಯಕ್ಷರಾದ ಡಾ! ಇಂದ್ರಾಳಿ ದಿವಾಕರ್ ಟಿ ಶೆಟ್ಟಿ ಉಪಕಾರ್ಯಾಧ್ಯಕ್ಷರಾದ ದೇವದಾಸ ಎಲ್ ಕುಲಾಲ್, ಗೌರವ ಕಾರ್ಯದರ್ಶಿ ಪ್ರೊ! ಅಜಿತ್  ಬಿ ಉಮ್ರಾಣಿ, ಜತೆ ಕಾರ್ಯದರ್ಶಿ ದಿನೇಶ್ ಬಿ ಕುಡ್ವ, ಕೋಶಾಧಿಕಾರಿ ತಾರಾನಾಥ ಸೂರು ಅಮೀನ್ , ಜತೆ ಕೋಶಾಧಿಕಾರಿ ವಿಮಲಾ ವಿ ಶೆಟ್ಟಿ ಹಾಗೂ ಕಾರ್ಯಕಾರಿ ಮಂಡಳಿಯ ಸರ್ವ ಸದಸ್ಯರು ಅಭಿನಂದಿಸಿದ್ದಾರೆ.

1st Rank -ಕು. ಪ್ರಣೀತ  ಕೈಲಾಸ್ ಕುಹರ್ಡೆ 95.80% ಮಂಜುನಾಥ ವಿದ್ಯಾಲಯ ಅಂಗ್ಲ ಮಾಧ್ಯಮ

2 nd Rank -ಗುರವ್ ಗುಪ್ತ 95.00 % ಮಂಜುನಾಥ ವಿದ್ಯಾಲಯ ಅಂಗ್ಲ ಮಾಧ್ಯಮ

3rd Rank -ಪ್ರಣವ್ ಕೈಲಾಶ್ ಕುರ್ಹಡೆ 94.80% ಮಂಜುನಾಥ ವಿದ್ಯಾಲಯ ಅಂಗ್ಲ ಮಾಧ್ಯಮ



Related posts

ಅತ್ಯಂತ ಸಂಭ್ರಮ ಸಡಗರದಿಂದ ಸಂಪನ್ನಗೊಂಡ ಶ್ರೀ ಕೃಷ್ಣ ಜನ್ಮಾಷ್ಟಮಿ -ಶ್ರೀ ಕೃಷ್ಣ ಲೀಲೋತ್ಸವ /ಮೊಸರು ಕುಡಿಕೆ ಹಬ್ಬ /ಪಲ್ಲಕ್ಕಿ ಉತ್ಸವ 

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬೈ: ತುಳು ನಾಟಕ ಸ್ಪರ್ಧೆ ಯಶಸ್ವಿ ಸಂಪನ್ನ:

Mumbai News Desk

ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಮಲಾಡ್ ಕೊಂಕಣಿ ಪಾಡದಶಾಖೆಯಲ್ಲಿ 46ನೇ ಸಂಸ್ಥಾಪನಾ ದಿನಾಚರಣೆ .

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬಯಿ: ಶಿಕ್ಷಣ ಮತ್ತು ಪ್ರಗತಿಯ ಸಂಭ್ರಮ – ವಿದ್ಯಾರ್ಥಿ ದತ್ತು ಸ್ವೀಕಾರ, ಪ್ರತಿಭಾ ಪುರಸ್ಕಾರ ಹಾಗೂ ನೂತನ ವೆಬ್‌ಸೈಟ್ ಲೋಕಾರ್ಪಣಾ ಸಮಾರಂಭ

Mumbai News Desk

ವಿದ್ಯಾ ವಿಹಾರದ ಶ್ರೀ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ ಹಾಗೂ ಸಮ್ಮಾನ ಕಾರ್ಯಕ್ರಮ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯಿಂದ ಮಲಾಡ್ ನಲ್ಲಿ ಉಚಿತ ವೈದ್ಯಕೀಯ ಶಿಬಿರ,

Mumbai News Desk