30.9 C
Mumbai
June 8, 2026
Mumbai News Kannada
ಮುಂಬಯಿ

ಡೊಂಬಿವಲಿ ಮಂಜುನಾಥ ವಿದ್ಯಾಲಯ ಕನ್ನಡ, ಆಂಗ್ಲ ಮಾಧ್ಯಮ ಶಾಲೆ ಎಸ್. ಎಸ್. ಸಿ. ಪರೀಕ್ಷೆಯಲ್ಲಿ ಶೇ.100 ಫಲಿತಾಂಶ





ಈ ಬಾರಿಯ ಮಹಾರಾಷ್ಟ್ರ ಎಸ್ ಎಸ್ ಸಿ ಬೋರ್ಡ್ ಪರೀಕ್ಷೆಯಲ್ಲಿ ಹೊರನಾಡ ಕನ್ನಡಿಗರ ಹೆಮ್ಮೆಯ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಡೊಂಬಿವಲಿ ಕರ್ನಾಟಕ ಸಂಘ ಸಂಚಾಲಿತ ಮಂಜುನಾಥ ವಿದ್ಯಾಲಯ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗಳಿಗೆ ಉತ್ತಮ ಫಲಿತಾಂಶ ಬಂದಿದೆ

ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ಕನ್ನಡ ಮಾಧ್ಯಮದಲ್ಲಿ ಒಟ್ಟು 21 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರಲ್ಲಿ 3 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ,  12 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಕಳೆದ 5 ವರ್ಷಗಳಿಂದ ಕನ್ನಡ ಮಾಧ್ಯಮದ ಫಲಿತಾಂಶ ಶೇ.100 ಲಭಿಸುತ್ತಿರುವುದು ವಿಶೇಷತೆಯಾಗಿದೆ. ಕನ್ನಡ ಮಾಧ್ಯಮದಲ್ಲಿ  ಶೇ. 83.20 ಅಂಕಗಳೊಂದಿಗೆ ಅಮಿತ್ ತುಕರಾಮ್ ರಾಥೋಡ್  ಪ್ರಥಮ,   ನಂದಿನಿ ಸಂಜೀವ್ ರಾಠೋಡ್ ಶೇ. 82.60 ಅಂಕಗಳೊಂದಿಗೆ ದ್ವಿತೀಯ,   ರವಿ ರಾಕೇಶ್ ಕರ್ಕಲ್ ಶೇ. 82.60 ಅಂಕಗಳೊಂದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ.

*ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ*

ಆಂಗ್ಲ ಮಾಧ್ಯಮದಲ್ಲಿ ಒಟ್ಟು 135 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು  71 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ,  56 ವಿದ್ಯಾ ರ್ಥಿಗಳು ಪ್ರಥಮ ಶ್ರೇಣಿ ಹಾಗೂ  8 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಕಳೆದ 14 ವರ್ಷಗಳಿಂದ ಆಂಗ್ಲ ಮಾಧ್ಯಮ ಶಾಲೆಯ ಫಲಿತಾಂಶ ಶೇ 100 ಲಭಿಸುತ್ತಿರುವುದು ಪ್ರಶಂಸನೀಯ. ಆಂಗ್ಲ ಮಾಧ್ಯಮದಲ್ಲಿ       ಶೇ  95.80 ಅಂಕಗಳೊಂದಿಗೆ ಪ್ರಣೀತ ಕೈಲಾಶ್ ಕುರ್ಹಡೆ ಪ್ರಥಮ, ಶೇ 95.00 ಅಂಕಗಳೊಂದಿಗೆ ಗೌರವ್ ಸಂಜಯ್ ಗುಪ್ತ ದ್ವಿತೀಯ, ಹಾಗೂ ಶೇ 94.80 ಅಂಕಗಳೊಂದಿಗೆ ಪ್ರಣವ್ ಕೈಲಾಶ್ ಕುರ್ಹಡೆ ತೃತೀಯ ಸ್ಥಾನ ಪಡೆದಿದ್ದಾರೆ.

ತಮ್ಮ ಸಾಧನೆಯ ಮೂಲಕ ಶಾಲೆಯ ಕೀರ್ತಿಯನ್ನು ಉತ್ತುಂಗ ಶಿಖರಕ್ಕೇರಿಸಿದ ವಿದ್ಯಾರ್ಥಿಗಳಿಗೆ, ಅವರ ಯಶಸ್ಸಿಗೆ ಕಾರಣರಾದ ಮುಖ್ಯ ಶಿಕ್ಷಕರಾದ ಸುರೇಖಾ ಪಂಡಿತ್, ಪ್ರಭು ಕೋತಾಲಿ ಹಾಗೂ ಶಿಕ್ಷಕ/ಶಿಕ್ಷಕಿ ವೃಂದ, ಪಾಲಕರು, ಶಿಕ್ಷಕೇತರ ಸಿಬ್ಬಂದಿಯನ್ನು ಡೊಂಬಿವಲಿ ಕರ್ನಾಟಕ ಸಂಘದ ಅಧ್ಯಕ್ಷರಾದ ಸುಕುಮಾರ ಎನ್ ಶೆಟ್ಟಿ , ಉಪಾಧ್ಯಕ್ಷರಾದ ಲೋಕನಾಥ ಎ ಶೆಟ್ಟಿ, ಕಾರ್ಯಾಧ್ಯಕ್ಷರಾದ ಡಾ! ಇಂದ್ರಾಳಿ ದಿವಾಕರ್ ಟಿ ಶೆಟ್ಟಿ ಉಪಕಾರ್ಯಾಧ್ಯಕ್ಷರಾದ ದೇವದಾಸ ಎಲ್ ಕುಲಾಲ್, ಗೌರವ ಕಾರ್ಯದರ್ಶಿ ಪ್ರೊ! ಅಜಿತ್  ಬಿ ಉಮ್ರಾಣಿ, ಜತೆ ಕಾರ್ಯದರ್ಶಿ ದಿನೇಶ್ ಬಿ ಕುಡ್ವ, ಕೋಶಾಧಿಕಾರಿ ತಾರಾನಾಥ ಸೂರು ಅಮೀನ್ , ಜತೆ ಕೋಶಾಧಿಕಾರಿ ವಿಮಲಾ ವಿ ಶೆಟ್ಟಿ ಹಾಗೂ ಕಾರ್ಯಕಾರಿ ಮಂಡಳಿಯ ಸರ್ವ ಸದಸ್ಯರು ಅಭಿನಂದಿಸಿದ್ದಾರೆ.

1st Rank -ಕು. ಪ್ರಣೀತ  ಕೈಲಾಸ್ ಕುಹರ್ಡೆ 95.80% ಮಂಜುನಾಥ ವಿದ್ಯಾಲಯ ಅಂಗ್ಲ ಮಾಧ್ಯಮ

2 nd Rank -ಗುರವ್ ಗುಪ್ತ 95.00 % ಮಂಜುನಾಥ ವಿದ್ಯಾಲಯ ಅಂಗ್ಲ ಮಾಧ್ಯಮ

3rd Rank -ಪ್ರಣವ್ ಕೈಲಾಶ್ ಕುರ್ಹಡೆ 94.80% ಮಂಜುನಾಥ ವಿದ್ಯಾಲಯ ಅಂಗ್ಲ ಮಾಧ್ಯಮ



Related posts

ಬಾಂಬೆ ಬಂಟ್ಸ್ ಅಸೋಸಿಯೇಶನ್ ಉನ್ನತ ಶಿಕ್ಷಣ ಸಂಸ್ಥೆಯ 11 ನೇ ವಾರ್ಷಿಕೋತ್ಸವ ಸಂಭ್ರಮ.

Mumbai News Desk

ಮಲಾಡ್ : ತಥಾಸ್ತು ಫೌಂಡೇಶನ್ ಅಯ್ಯಪ್ಪ ಭಕ್ತ ವೃಂದದ 20 ನೇ ವರ್ಷದ ವಾರ್ಷಿಕ ಅಯ್ಯಪ್ಪ

Mumbai News Desk

ಕೊಂಕಣಿ ವೆಲ್ಫೇರ್ ಅಸೋಸಿಯೇಷನ್ ಸಯನ್ : ಕನ್ಯಾ ಮರಿಯಮ್ಮನವರ ಜನ್ಮದಿನೋತ್ಸವ ಮೋಂತಿ ಪೆಸ್ತ್

Mumbai News Desk

ಕುಲಾಲ ಸಂಘ ಮುಂಬೈ  ಕಾರ್ಯಾಲಯದಲ್ಲಿ ಮಕರ  ಸಂಕ್ರಾಂತಿ ಆಚರಣೆ.

Mumbai News Desk

ಭಾರತ್ ಬ್ಯಾಂಕಿನ ಬೈಕುಲ್ಲಾ ಶಾಖೆಯಲ್ಲಿ 49ನೇ ಸಂಸ್ಥಾಪನಾ ದಿನಾಚರಣೆ: ಯಶಸ್ವಿ ಆಚರಣೆ

Mumbai News Desk

ಮುಂಬೈ : ಬ್ರೇಕ್ ಫೇಲ್ ಆಗಿ ಎದುರಿದ್ದ ವಾಹನಗಳು, ಜನರ ಮೇಲೆ ಹರಿದ ಬಸ್, 7 ಸಾವು, 49 ಮಂದಿಗೆ ಗಂಭೀರ ಗಾಯ

Mumbai News Desk