28.4 C
Mumbai
March 7, 2026
Mumbai News Kannada
ಮುಂಬಯಿ

ಡೊಂಬಿವಲಿ ಮಂಜುನಾಥ ವಿದ್ಯಾಲಯ ಕನ್ನಡ, ಆಂಗ್ಲ ಮಾಧ್ಯಮ ಶಾಲೆ ಎಸ್. ಎಸ್. ಸಿ. ಪರೀಕ್ಷೆಯಲ್ಲಿ ಶೇ.100 ಫಲಿತಾಂಶ





ಈ ಬಾರಿಯ ಮಹಾರಾಷ್ಟ್ರ ಎಸ್ ಎಸ್ ಸಿ ಬೋರ್ಡ್ ಪರೀಕ್ಷೆಯಲ್ಲಿ ಹೊರನಾಡ ಕನ್ನಡಿಗರ ಹೆಮ್ಮೆಯ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಡೊಂಬಿವಲಿ ಕರ್ನಾಟಕ ಸಂಘ ಸಂಚಾಲಿತ ಮಂಜುನಾಥ ವಿದ್ಯಾಲಯ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗಳಿಗೆ ಉತ್ತಮ ಫಲಿತಾಂಶ ಬಂದಿದೆ

ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ಕನ್ನಡ ಮಾಧ್ಯಮದಲ್ಲಿ ಒಟ್ಟು 21 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರಲ್ಲಿ 3 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ,  12 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಕಳೆದ 5 ವರ್ಷಗಳಿಂದ ಕನ್ನಡ ಮಾಧ್ಯಮದ ಫಲಿತಾಂಶ ಶೇ.100 ಲಭಿಸುತ್ತಿರುವುದು ವಿಶೇಷತೆಯಾಗಿದೆ. ಕನ್ನಡ ಮಾಧ್ಯಮದಲ್ಲಿ  ಶೇ. 83.20 ಅಂಕಗಳೊಂದಿಗೆ ಅಮಿತ್ ತುಕರಾಮ್ ರಾಥೋಡ್  ಪ್ರಥಮ,   ನಂದಿನಿ ಸಂಜೀವ್ ರಾಠೋಡ್ ಶೇ. 82.60 ಅಂಕಗಳೊಂದಿಗೆ ದ್ವಿತೀಯ,   ರವಿ ರಾಕೇಶ್ ಕರ್ಕಲ್ ಶೇ. 82.60 ಅಂಕಗಳೊಂದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ.

*ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ*

ಆಂಗ್ಲ ಮಾಧ್ಯಮದಲ್ಲಿ ಒಟ್ಟು 135 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು  71 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ,  56 ವಿದ್ಯಾ ರ್ಥಿಗಳು ಪ್ರಥಮ ಶ್ರೇಣಿ ಹಾಗೂ  8 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಕಳೆದ 14 ವರ್ಷಗಳಿಂದ ಆಂಗ್ಲ ಮಾಧ್ಯಮ ಶಾಲೆಯ ಫಲಿತಾಂಶ ಶೇ 100 ಲಭಿಸುತ್ತಿರುವುದು ಪ್ರಶಂಸನೀಯ. ಆಂಗ್ಲ ಮಾಧ್ಯಮದಲ್ಲಿ       ಶೇ  95.80 ಅಂಕಗಳೊಂದಿಗೆ ಪ್ರಣೀತ ಕೈಲಾಶ್ ಕುರ್ಹಡೆ ಪ್ರಥಮ, ಶೇ 95.00 ಅಂಕಗಳೊಂದಿಗೆ ಗೌರವ್ ಸಂಜಯ್ ಗುಪ್ತ ದ್ವಿತೀಯ, ಹಾಗೂ ಶೇ 94.80 ಅಂಕಗಳೊಂದಿಗೆ ಪ್ರಣವ್ ಕೈಲಾಶ್ ಕುರ್ಹಡೆ ತೃತೀಯ ಸ್ಥಾನ ಪಡೆದಿದ್ದಾರೆ.

ತಮ್ಮ ಸಾಧನೆಯ ಮೂಲಕ ಶಾಲೆಯ ಕೀರ್ತಿಯನ್ನು ಉತ್ತುಂಗ ಶಿಖರಕ್ಕೇರಿಸಿದ ವಿದ್ಯಾರ್ಥಿಗಳಿಗೆ, ಅವರ ಯಶಸ್ಸಿಗೆ ಕಾರಣರಾದ ಮುಖ್ಯ ಶಿಕ್ಷಕರಾದ ಸುರೇಖಾ ಪಂಡಿತ್, ಪ್ರಭು ಕೋತಾಲಿ ಹಾಗೂ ಶಿಕ್ಷಕ/ಶಿಕ್ಷಕಿ ವೃಂದ, ಪಾಲಕರು, ಶಿಕ್ಷಕೇತರ ಸಿಬ್ಬಂದಿಯನ್ನು ಡೊಂಬಿವಲಿ ಕರ್ನಾಟಕ ಸಂಘದ ಅಧ್ಯಕ್ಷರಾದ ಸುಕುಮಾರ ಎನ್ ಶೆಟ್ಟಿ , ಉಪಾಧ್ಯಕ್ಷರಾದ ಲೋಕನಾಥ ಎ ಶೆಟ್ಟಿ, ಕಾರ್ಯಾಧ್ಯಕ್ಷರಾದ ಡಾ! ಇಂದ್ರಾಳಿ ದಿವಾಕರ್ ಟಿ ಶೆಟ್ಟಿ ಉಪಕಾರ್ಯಾಧ್ಯಕ್ಷರಾದ ದೇವದಾಸ ಎಲ್ ಕುಲಾಲ್, ಗೌರವ ಕಾರ್ಯದರ್ಶಿ ಪ್ರೊ! ಅಜಿತ್  ಬಿ ಉಮ್ರಾಣಿ, ಜತೆ ಕಾರ್ಯದರ್ಶಿ ದಿನೇಶ್ ಬಿ ಕುಡ್ವ, ಕೋಶಾಧಿಕಾರಿ ತಾರಾನಾಥ ಸೂರು ಅಮೀನ್ , ಜತೆ ಕೋಶಾಧಿಕಾರಿ ವಿಮಲಾ ವಿ ಶೆಟ್ಟಿ ಹಾಗೂ ಕಾರ್ಯಕಾರಿ ಮಂಡಳಿಯ ಸರ್ವ ಸದಸ್ಯರು ಅಭಿನಂದಿಸಿದ್ದಾರೆ.

1st Rank -ಕು. ಪ್ರಣೀತ  ಕೈಲಾಸ್ ಕುಹರ್ಡೆ 95.80% ಮಂಜುನಾಥ ವಿದ್ಯಾಲಯ ಅಂಗ್ಲ ಮಾಧ್ಯಮ

2 nd Rank -ಗುರವ್ ಗುಪ್ತ 95.00 % ಮಂಜುನಾಥ ವಿದ್ಯಾಲಯ ಅಂಗ್ಲ ಮಾಧ್ಯಮ

3rd Rank -ಪ್ರಣವ್ ಕೈಲಾಶ್ ಕುರ್ಹಡೆ 94.80% ಮಂಜುನಾಥ ವಿದ್ಯಾಲಯ ಅಂಗ್ಲ ಮಾಧ್ಯಮ



Related posts

ಭಾರತ್ ಕೋ-ಆಪರೇಟಿವ್ ಬ್ಯಾಂಕ್ (ಮುಂಬಯಿ) ಲಿಮಿಟೆಡ್ -ಖೋಪರ್‌ಖೈರ್ನೆ ಶಾಖೆಯಲ್ಲಿ ವಿಜೃಂಭಣೆಯಿಂದ ಜರಗಿದ ದಶಮಾನೋತ್ಸವ ಆಚರಣೆ

Mumbai News Desk

ಪಡುಬಿದ್ರಿ ನಡಿಪಟ್ಣ ಮೊಗವೀರ ಸಭಾ ಮುಂಬಯಿ – ವಾರ್ಷಿಕ ವಿಹಾರ ಕೂಟ

Mumbai News Desk

ಮುಂಬಯಿ ಬಂಟರ ಸಂಘ, ಜೋಗೇಶ್ವರಿ – ದಹಿಸರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದಿಂದ ಧಾರ್ಮಿಕ ಮತ್ತು ಪ್ರೇಕ್ಷಣೀಯ ಸ್ಥಳಗಳ ಪ್ರವಾಸ

Mumbai News Desk

ವೀರಕೇಸರಿ ಮೀರಾಭಾಯಂದರ್ ವತಿಯಿಂದ ಬಹುಮಾನ ವಿತರಣೆ, ಸನ್ಮಾನ ಕಾರ್ಯಕ್ರಮ.

Mumbai News Desk

ಭಾಯಂದ‌ರ್  ಶ್ರೀ ಹನುಮಾನ್ ಭಜನಾ ಮಂಡಳಿ ವತಿಯಿಂದ ಸುಧಾಕರ್  ಶೆಟ್ಟಿ ಬಿಯಾಳಿ ಮಂದಾರ್ತಿಯವರ ಮುಂದಾಳತ್ವದಲ್ಲಿ  ಯಕ್ಷಗಾನ ‘ನಾಗಶ್ರೀ’ 

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿಯ 2025 – 2028ರ ಅವಧಿಗೆ  ಆಡಳಿತ ಮಂಡಳಿಗೆ ಪದಾಧಿಕಾರಿಗಳು ಆಯ್ಕೆ

Mumbai News Desk