30.9 C
Mumbai
June 8, 2026
Mumbai News Kannada
ಮುಂಬಯಿ

ವಡಾಲದ ರಾಷ್ಟ್ರೀಯ ಕನ್ನಡ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಗೆ ಎಸ್ ಎಸ್ ಸಿ ಯಲ್ಲಿ ಶೇಕಡ 100% ಫಲಿತಾಂಶ.





ವರದಿ : ಪ್ರಕಾಶ್ಚಂದ್ರ ಎಂ. ಆರ್ (7021931365)

ವಡಾಲದ ರಾಷ್ಟ್ರೀಯ ಕನ್ನಡ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಗೆ ಎಸ್ ಎಸ್ ಸಿ ಯಲ್ಲಿ ಶೇಕಡ 100% ಫಲಿತಾಂಶ
ವಡಾಲ : 2023- 24ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ವಡಲಾದ ರಾಷ್ಟ್ರೀಯ ಕನ್ನಡ ಸಂಸ್ಥೆಯ ಪ್ರೌಢಶಾಲೆಗೆ ಶೇಕಡ 100% ಫಲಿತಾಂಶ ದೊರಕಿದೆ.
ಪರೀಕ್ಷೆಗೆ ಹಾಜರಾದ 144 ವಿದ್ಯಾರ್ಥಿಗಳಲ್ಲಿ 46 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಗೊಂಡಿದ್ದು ಅದರಲ್ಲಿ ನಾಲ್ಕು ವಿದ್ಯಾರ್ಥಿಗಳು ಅತೀ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. 62 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 36 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಯಾಗುವುದರಿಂದ ಶಾಲೆಗೆ ಶೇಕಡ 100 ಫಲಿತಾಂಶ ದೊರೆಯಲು ಕಾರಣರಾದರು.
ಕಾರ್ತಿಕ್ ಜೈ ರಾಜ್ ಕುಮಾರ್ ಶೆಟ್ಟಿ ಇವರು ಶೇಕಡ 93.6 ಅಂಕಗಳೊಂದಿಗೆ ಶಾಲೆಯಲ್ಲಿ ಪ್ರಥಮ ಸ್ಥಾನ ಪಡೆದರೆ ಪ್ರಿಯಾಂಶು ಗುಪ್ತಾರವರು 93.4% ಹಾಗೂ ಶ್ವೇತ ವಿಶ್ವಕರ್ಮರವರು ಶೇ 92.6 ಅಂಕಗಳೊಂದಿಗೆ ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನು ಪಡೆದಿರುತ್ತಾರೆ.
ವಿದ್ಯಾರ್ಥಿಗಳ ಅದ್ವಿತೀಯ ಸಾಧನೆಗೆ ಶಾಲಾ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಪಾರ್ಥಸಾರಥಿ ನಾಯ್ಕ, ಉಪಾಧ್ಯಕ್ಷರುಗಳಾದ ಕೆ ಕಮಲ ಹಾಗೂ ಗಣಪತಿ ಶಂಕರಲಿಂಗ, ಶಾಲಾ ವಿಶ್ವಸ್ಥರಾದ ಡಾ.ಬಿ.ಆರ್. ಮಂಜುನಾಥ್, ಮಂಜುನಾಥಯ್ಯ, ಹಾಗೂ ಅನಂತ ಬನವಾಸಿ, ಶಾಲಾ ಗೌರವ ಕಾರ್ಯದರ್ಶಿಗಳಾದ ಶಶಿಕಾಂತ ಜೋಶಿ, ಪದ್ಮಜಾ ಬನವಾಸಿ, ಖಜಾಂಜಿಗಳಾದ ಭವಾನಿ ಭಾರ್ಗವ, ಶಾಲಾ ಕಾರ್ಯತಂತ್ರದ ಸಲಹೆಗಾರ್ತಿ ಸರೋಜ ರಾವ್, ಶಾಲಾ ಮುಕ್ಯೋಪಾಧ್ಯಾಯಿನಿ ಉಮಾಮಹೇಶ್ವರಿ
ಹಾಗೂ ಶಾಲಾ ಪರಿವೀಕ್ಷಕ ಪ್ರಕಾಶ್ಚಂದ್ರ ಎಂ. ಆರ್. ಬಂಗೇರರವರು ತೇರ್ಗಡೆಗೊಂಡ ವಿದ್ಯಾರ್ಥಿಗಳನ್ನು ಮುಕ್ತಕಂಠದಿಂದ ಶ್ಲಾಘಿಸುತ್ತಾ ಫಲಿತಾಂಶವು ಉತ್ತಮವಾಗಿ ಬರಲು ಕಾರಣರಾದ ಭೋದಕ ಹಾಗೂ ಭೋದಕೇತರ ವರ್ಗ ಹಾಗೂ ಪಾಲಕರನ್ನು ಮನದುಂಬಿ ಅಭಿನಂದಿಸಿದ್ದಾರೆ.



Related posts

ನಮೋ ರಾಮೋ ರಾಮಜತ್ ಶರದ್ ಪೂರ್ಣಿಮಾ ಗರ್ಬಾ ಉತ್ಸವದಲ್ಲಿ ಜಗದಂಬಾ ಗ್ರೂಪ್ ದ್ವಿತೀಯ ಸ್ಥಾನ

Mumbai News Desk

ಬಂಟರ ಸಂಘ ಮುಂಬೈ ಅಂಧೇರಿ- ಬಾಂದ್ರಾ ಪ್ರಾದೇಶಿಕ ಸಮಿತಿ ಆಟಿಡೊಂಜಿ ಪೊರ್ಲು- ತಿರ್ಲ್, ಸಂಜೀವನಿ ಉದ್ಘಾಟನೆ.

Mumbai News Desk

ಭಾರತ್ ಕೋ-ಆಪರೇಟಿವ್ ಬ್ಯಾಂಕ್ (ಮುಂಬಯಿ) ಲಿಮಿಟೆಡ್ -ಖೋಪರ್‌ಖೈರ್ನೆ ಶಾಖೆಯಲ್ಲಿ ವಿಜೃಂಭಣೆಯಿಂದ ಜರಗಿದ ದಶಮಾನೋತ್ಸವ ಆಚರಣೆ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ   ಚಂದನ್ ಗೌಡ ಶೇ.89.80  ಅಂಕ.

Mumbai News Desk

ಭಾರತ್ ಬ್ಯಾಂಕಿನ ಬೈಕುಲ್ಲಾ ಶಾಖೆಯಲ್ಲಿ 49ನೇ ಸಂಸ್ಥಾಪನಾ ದಿನಾಚರಣೆ: ಯಶಸ್ವಿ ಆಚರಣೆ

Mumbai News Desk

ಬಂಟರ ಸಂಘ ಮುಂಬಯಿ,  ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿಯ ಯುವ ವಿಭಾಗ ರಕ್ತದಾನ ಶಿಬಿರ.

Mumbai News Desk