September 6, 2026
Mumbai News Kannada
ಕರ್ನಾಟಕ

ಕರ್ನಾಟಕದಲ್ಲಿ ನಾಳೆಯಿಂದ ಜೂನ್ 6ರ ವರೆಗೆ ಮದ್ಯ ಮಾರಾಟ ಬಂದ್





ಬೆಂಗಳೂರು, ಮೇ 31: ಕರ್ನಾಟಕದಾದ್ಯಂತ ಜೂನ್ 1ರಿಂದ ಐದು ದಿನಗಳ ಕಾಲ ಮದ್ಯ ಮಾರಾಟ ಭಾಗಶಃ ಬಂದ್ ಆಗಲಿದೆ. ಜೂನ್ 2, 4 ಮತ್ತು 6 ರಂದು ಮದ್ಯ ಮಾರಾಟ ಸಂಪೂರ್ಣ ಸ್ಥಗಿತವಾಗಿರಲಿದೆ. ಜೂನ್ 1 ಮತ್ತು ಜೂನ್ 3 ರಂದು ಭಾಗಶಃ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗುತ್ತದೆ. ವಿಧಾನಪರಿಷತ್ ಚುನಾವಣೆ ಮತ್ತು ಲೋಕಸಭೆ ಚುನಾವಣೆಯ ಮತ ಎಣಿಕೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಏಪ್ರಿಲ್ 24 ರಿಂದ 26 ರವರೆಗೆ ಮದ್ಯ ಮಾರಾಟ ನಿಷೇಧ ಹೇರಲಾಗಿತ್ತು. ಇದೀಗ ಮತ್ತೆ ಮದ್ಯ ಮಾರಾಟ ನಿಷೇಧದಿಂದ ವಹಿವಾಟಿಗೆ ದೊಡ್ಡ ಹೊಡೆತ ಬೀಳಲಿದೆ ಎಂದು ಬೆಂಗಳೂರಿನ ಮದ್ಯ ಮಾರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

ನಾವು ಕಾರ್ಪೊರೇಟ್ ಪಾರ್ಟಿಗಳು ಮತ್ತು ಇತರ ಕಾರ್ಯಕ್ರಮಗಳನ್ನು ಆಯೋಜಿಸುವ ಶನಿವಾರ ಸಂಜೆಯೇ ಮದ್ಯ ಮಾರಾಟದ ಮೇಲಿನ ನಿಷೇಧವು ಪ್ರಾರಂಭವಾಗುತ್ತದೆ. ಇದರಿಂದ ದಿನಕ್ಕೆ 30 ಲಕ್ಷ ರೂ.ಗೂ ಅಧಿಕ ನಷ್ಟ ಉಂಟಾಗಲಿದೆ ಎಂದು ಮಾರತಹಳ್ಳಿಯಲ್ಲಿರುವ ದೊಡ್ಡ ರೆಸ್ಟೋಬಾರ್‌ಗಳ ಕಾರ್ಯಾಚರಣೆಯ ಮುಖ್ಯಸ್ಥರೊಬ್ಬರು ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ. ನಾವು ಅತಿಹೆಚ್ಚು ತೆರಿಗೆ ಪಾವತಿದಾರರಾಗಿದ್ದೇವೆ. ಆದರೂ ಮದ್ಯ ಮಾರಾಟಕ್ಕೆ ಪದೇಪದೆ ಅಡ್ಡಿಯುಂಟು ಮಾಡಲಾಗುತ್ತಿದೆ. ಮದ್ಯ ಮಾರಾಟ ನಿಷೇಧದಿಂದ nಮಗೆ ಭಾರಿ ಹಿನ್ನಡೆಯಾಗಲಿದೆ. ವಾರಾಂತ್ಯದಲ್ಲಿ ಶೇ 60 ವರೆಗೆ ಮದ್ಯ ಮಾರಾಟವಾಗುತ್ತದೆ. ಇದೀಗ ನಿಷೇಧದಿಂದ ಸರಿಸುಮಾರು ಶೇ 40 ರಷ್ಟು ನಷ್ಟವಾಗಲಿದೆ ಎಂದು ಅವರು ಹೇಳಿದ್ದಾರೆ.

ಆಹಾರ ಪೂರೈಸಲು ಪಬ್‌ಗಳು ಮತ್ತು ರೆಸ್ಟೋಬಾರ್‌ಗಳಿಗೆ ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿರುವುದಾಗಿ ಭಾರತೀಯ ರಾಷ್ಟ್ರೀಯ ರೆಸ್ಟೋರೆಂಟ್‌ಗಳ ಸಂಘದ (ಎನ್‌ಆರ್‌ಎಐ) ಪ್ರತಿನಿಧಿಗಳು ತಿಳಿಸಿದ್ದಾರೆ. ಆದರೆ, ಈ ಬಗ್ಗೆ ಅಧಿಕಾರಿಗಳು ಇನ್ನೂ ನಿರ್ಧಾರ ಕೈಗೊಂಡಿಲ್ಲ. ಈ ಸಂಬಂಧ ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಜೂನ್ 4 ರಂದು ಮತ ಎಣಿಕೆ ಮುಗಿದ ನಂತರ (ಮುಂಬಯಿ ಮಾದರಿಯಲ್ಲಿ) ಮದ್ಯ ಮಾರಾಟಕ್ಕೆ ಅವಕಾಶ ನೀಡುವಂತೆ ಮತ್ತು ಸಂಸ್ಥೆಗಳಿಗೆ ನಿರ್ಬಂಧಗಳನ್ನು ಮಿತಿಗೊಳಿಸುವಂತೆ ಸಂಘವು ಅಬಕಾರಿ ಆಯುಕ್ತರಿಗೆ ಪತ್ರ ಬರೆದಿದೆ ಎಂದು ಬೃಹತ್ ಬೆಂಗಳೂರು ಹೊಟೇಲ್ ಮಾಲೀಕರ ಸಂಘದ (ಬಿಬಿಎಚ್‌ಎ) ಅಧ್ಯಕ್ಷ ಪಿಸಿ ರಾವ್ ತಿಳಿಸಿದ್ದಾರೆ.

ಜೂನ್ 1 ರಂದು ಸಂಜೆ 4 ರಿಂದ ಜೂನ್ 3 ರ ಸಂಜೆ 4 ರವರೆಗೆ ವಿಧಾನ ಪರಿಷತ್ ಚುನಾವಣೆಯ ಕಾರಣ ಮದ್ಯ ಮಾರಾಟಕ್ಕೆ ನಿಷೇಧ.
ಜೂನ್ 1 ರಂದು ಸಂಜೆ 4 ರ ಒಳಗೆ ಮತ್ತು ಜೂನ್ 3 ರ ಸಂಜೆ 4 ರ ನಂತರ ಮದ್ಯ ಮಾರಾಟಕ್ಕೆ ಅವಕಾಶವಿದೆ.
ಲೋಕಸಭೆ ಚುನಾವಣೆಯ ಮತ ಎಣಿಕೆಯ ಕಾರಣ ಜೂನ್ 3 ರ ಮಧ್ಯರಾತ್ರಿಯಿಂದ ಜೂನ್ 4 ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟಕ್ಕೆ ನಿಷೇಧ.
ಜೂನ್ 6 ರಂದು ಬೆಳಿಗ್ಗೆ 6 ರಿಂದ ಮಧ್ಯರಾತ್ರಿಯವರೆಗೆ ಎಂಎಲ್‌ಸಿ ಚುನಾವಣೆಯ ಮತ ಎಣಿಕೆಯ ಕಾರಣ ಮದ್ಯ ಮಾರಾಟ ಬಂದ್.



Related posts

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ 2025 ಪ್ರಕಟ : ಮುಂಬೈ ಯ ಡಾ ಪಿ. ವಿ. ಶೆಟ್ಟಿ ಸೇರಿದಂತೆ, 70 ಮಂದಿಗೆ ಗೌರವ

Mumbai News Desk

ಶಿವಮೊಗ್ಗದಲ್ಲಿ 10ನೇ ತರಗತಿ ವಿದ್ಯಾರ್ಥಿಯ ಕೊಲೆ, ಇಬ್ಬರು ಅಪ್ರಾಪ್ತ ವಯಸ್ಕರ ಬಂಧನ

Mumbai News Desk

ಸರಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ

Mumbai News Desk

ಕರ್ನಾಟಕ : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ದಾಖಲೆಯ ಶೇ.86 ಫಲಿತಾಂಶ : ಆಳ್ವಾಸ್ ಕಾಲೇಜ್ ನ ದಿಶಾ ರಾಜ್ಯಕ್ಕೆ ಪ್ರಥಮ

Mumbai News Desk

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಸನ್ನಿಹಿತ: ಉಪಹಾರ ಸಭೆಯಲ್ಲಿ ರಾಜೀನಾಮೆ ಘೋಷಿಸಿದ ಸಿದ್ದರಾಮಯ್ಯ

Mumbai News Desk

ಬೆಳಗಾವಿ : ಸದನದಲ್ಲಿ ಗೃಹಲಕ್ಷ್ಮಿ ಗದ್ದಲ; ತಪ್ಪೊಪ್ಪಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Mumbai News Desk