27.7 C
Mumbai
July 23, 2026
Mumbai News Kannada
ಕ್ರೀಡೆ

ಡಬ್ಲ್ಯೂ ಐ ಎಫ್ ಎ ಅಂತರ್ ಜಿಲ್ಲಾ ಸಬ್ ಜ್ಯೂನಿಯರ್ ಫುಟ್ಬಾಲ್ ಪಂದ್ಯಾಟ, ಸಮರ್ಥ್ ರೈ ಅವರ ಅದ್ಬುತ ಆಟದಿಂದ ಮುಂಬಯಿ ತಂಡಕ್ಕೆ ಜಯ.







ಡಬ್ಲ್ಯೂ ಐಎಫ್ಎ (WIFA) ಅಂತರ್ ಜಿಲ್ಲಾ ಸಬ್ ಜೂನಿಯರ್ ಫುಟ್ಬಾಲ್ ಟೂರ್ನಮೆಂಟ್ ಗೆ ಸಮರ್ಥ್ ಸಿ ರೈ ಅವರು ಮುಂಬಯಿ ಜಿಲ್ಲೆಯಿಂದ ಆಯ್ಕೆಯಾಗಿದ್ದು ಮೇ 22 ರಂದು ಆರಂಭಗೊಂಡು ಮೇ 29 ರ ವರೆಗೆ ಶಿರ್ಪುರ್, ಧುಲೆ, ಇಲ್ಲಿ ನಡೆದ ಡಬ್ಲ್ಯೂ ಐಎಫ್ಎ ಅಂತರ ಜಿಲ್ಲಾ ಸಬ್ ಜೂನಿಯರ್ ಬಾಲಕರ ಪಂದ್ಯಾವಳಿ (Inter-District Sub Junior Boys Tournament ) ಅಂಡರ್13 ಸ್ಪರ್ಧೆಯಲ್ಲಿ ಮುಂಬಯಿ ತಂಡವನ್ನು ಸಮರ್ಥ್ ಸಿ. ರೈ ಪ್ರತಿನಿಧಿಸಿದ್ದಾರೆ.

ಮಹಾರಾಷ್ಟ್ರ ದ 32 ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಮುಂಬೈ ಒಂದಾಗಿದೆ

ಅಂತರ ಜಿಲ್ಲಾ ಸಬ್ ಜೂನಿಯರ್ಸ್ ಬಾಲಕರ ಟೂರ್ನಮೆಂಟ್ ನಲ್ಲಿ ಆಯ್ಕೆಯಾಗಿರುವ ಸಮರ್ಥ್ ರೈ ಜಿಲ್ಲಾ ಮಟ್ಟದ ಫುಟ್ಬಾಲ್ ಟೂರ್ನಮೆಂಟ್ ಆಟವಾಡಿ ಥಾಣೆ ಜಿಲ್ಲೆ ಯನ್ನು 3-0 ಅಂತರದಿಂದ ಸೋಲಿಸಿ ಜಯಭೇರಿ ಸಾಧಿಸಿದ್ದಾರೆ. ಇದರಲ್ಲಿ ಸಮರ್ಥ್ ರೈ ಯವರು ಕೊನೆಯ 20 ನಿಮಿಷ ದಲ್ಲಿ ಎಂಟ್ರಿ ಮಾಡಿ ಒಂದು ಗೋಲ್ ಮತ್ತು ಒಂದು ಅಸಿಸ್ಟ ನಿಂದ 3-0 ಗೋಲನಲ್ಲಿ ಮುಂಬಯಿ ಯನ್ನು ಗೆಲ್ಲಿಸಲು ಸಹಾಯವಾದರು.

ಸಮರ್ಥ್ ರೈ ಕನಕಿಯಾ ಇಂಟರ್‌ನ್ಯಾಶನಲ್ ಮೀರಾ ಭಾಯಂದರ್‌ನಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿ. ಸಿಎಫ್ಸಿಐ ಕ್ಲಬ್ಬಿನಲ್ಲಿ ಫುಟ್ಬಾಲ್ ನ ತರಬೇತಿ ಪಡೆಯುತ್ತಿದ್ದಾರೆ

2011 ಜೂನ್ 21 ರಂದು ಮಂಗಳೂರಿನ ಮುಚ್ಚೂರು ಗ್ರಾಮದಲ್ಲಿ ಜನಿಸಿದ ಸಮರ್ಥ್ ರೈ ಮುಂಬಯಿ ನಿವಾಸಿಯಾಗಿದ್ದು ಮಿಾಂಜ ಮಂಜಲ್ತೋಡಿ ಪೊಸನಿಕೆ ಮನೆ ಚಂದ್ರಶೇಖರ್ ರೈ ಮತ್ತು ಮುಚ್ಚೂರು ಕಲ್ಕುಡೆ ಕೈದುಮಾರು ಗುತ್ತು ಕುಶಲ ರೈ ಅವರ ಪುತ್ರ .



Related posts

ರಾಜಸ್ತಾನ ರಾಯಲ್ಸ್ ತಂಡದ ವೈಭವ್ ಸೂರ್ಯವಂಶಿ ಐತಿಹಾಸಿಕ ಐಪಿಎಲ್ ದಾಖಲೆ: ಲಕ್ನೋ ವಿರುದ್ಧ ರಾಜಸ್ತಾನಕ್ಕೆ ಭರ್ಜರಿ ಜಯ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬೈ (ಮೀರಾ-ಭಾಯಂದರ್ ಶಾಖೆ): ಕ್ರೀಡಾಕೂಟ – 2026 ಸಂಭ್ರಮ

Mumbai News Desk

ಡಬ್ಲ್ಯೂ ಐಎಫ್ ಅಂತರ್ ಜಿಲ್ಲಾ ಸಬ್ ಜೂನಿಯರ್ ಫುಟ್ಬಾಲ್ ಟೂರ್ನಮೆಂಟ್ ಗೆ ಸಮರ್ಥ್ ಸಿ ರೈ ಆಯ್ಕೆ

Mumbai News Desk

ಸ್ಕೇಟಿಂಗ್ : ಅನಘಾ ಮತ್ತು ಆರ್ನಾ ಸಾಧನೆ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ, ಮುಂಬಯಿ : ವಾರ್ಷಿಕ ಕ್ರೀಡೋತ್ಸವದ ಉದ್ಘಾಟನೆ

Mumbai News Desk

ಸಾಗರ ವಿದ್ಯಾ ಮಂದಿರ ಶಾಲೆ ಪಡುಬಿದ್ರಿ : ಬಾಲಕಿಯರ ಕಬ್ಬಡ್ಡಿ ತಂಡ ಮೈಸೂರು ದಸರಾ ಕ್ರೀಡಾಕೂಟಕ್ಕೆ ಆಯ್ಕೆ

Mumbai News Desk