32 C
Mumbai
March 7, 2026
Mumbai News Kannada
ಕ್ರೀಡೆ

ಡಬ್ಲ್ಯೂ ಐ ಎಫ್ ಎ ಅಂತರ್ ಜಿಲ್ಲಾ ಸಬ್ ಜ್ಯೂನಿಯರ್ ಫುಟ್ಬಾಲ್ ಪಂದ್ಯಾಟ, ಸಮರ್ಥ್ ರೈ ಅವರ ಅದ್ಬುತ ಆಟದಿಂದ ಮುಂಬಯಿ ತಂಡಕ್ಕೆ ಜಯ.





ಡಬ್ಲ್ಯೂ ಐಎಫ್ಎ (WIFA) ಅಂತರ್ ಜಿಲ್ಲಾ ಸಬ್ ಜೂನಿಯರ್ ಫುಟ್ಬಾಲ್ ಟೂರ್ನಮೆಂಟ್ ಗೆ ಸಮರ್ಥ್ ಸಿ ರೈ ಅವರು ಮುಂಬಯಿ ಜಿಲ್ಲೆಯಿಂದ ಆಯ್ಕೆಯಾಗಿದ್ದು ಮೇ 22 ರಂದು ಆರಂಭಗೊಂಡು ಮೇ 29 ರ ವರೆಗೆ ಶಿರ್ಪುರ್, ಧುಲೆ, ಇಲ್ಲಿ ನಡೆದ ಡಬ್ಲ್ಯೂ ಐಎಫ್ಎ ಅಂತರ ಜಿಲ್ಲಾ ಸಬ್ ಜೂನಿಯರ್ ಬಾಲಕರ ಪಂದ್ಯಾವಳಿ (Inter-District Sub Junior Boys Tournament ) ಅಂಡರ್13 ಸ್ಪರ್ಧೆಯಲ್ಲಿ ಮುಂಬಯಿ ತಂಡವನ್ನು ಸಮರ್ಥ್ ಸಿ. ರೈ ಪ್ರತಿನಿಧಿಸಿದ್ದಾರೆ.

ಮಹಾರಾಷ್ಟ್ರ ದ 32 ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಮುಂಬೈ ಒಂದಾಗಿದೆ

ಅಂತರ ಜಿಲ್ಲಾ ಸಬ್ ಜೂನಿಯರ್ಸ್ ಬಾಲಕರ ಟೂರ್ನಮೆಂಟ್ ನಲ್ಲಿ ಆಯ್ಕೆಯಾಗಿರುವ ಸಮರ್ಥ್ ರೈ ಜಿಲ್ಲಾ ಮಟ್ಟದ ಫುಟ್ಬಾಲ್ ಟೂರ್ನಮೆಂಟ್ ಆಟವಾಡಿ ಥಾಣೆ ಜಿಲ್ಲೆ ಯನ್ನು 3-0 ಅಂತರದಿಂದ ಸೋಲಿಸಿ ಜಯಭೇರಿ ಸಾಧಿಸಿದ್ದಾರೆ. ಇದರಲ್ಲಿ ಸಮರ್ಥ್ ರೈ ಯವರು ಕೊನೆಯ 20 ನಿಮಿಷ ದಲ್ಲಿ ಎಂಟ್ರಿ ಮಾಡಿ ಒಂದು ಗೋಲ್ ಮತ್ತು ಒಂದು ಅಸಿಸ್ಟ ನಿಂದ 3-0 ಗೋಲನಲ್ಲಿ ಮುಂಬಯಿ ಯನ್ನು ಗೆಲ್ಲಿಸಲು ಸಹಾಯವಾದರು.

ಸಮರ್ಥ್ ರೈ ಕನಕಿಯಾ ಇಂಟರ್‌ನ್ಯಾಶನಲ್ ಮೀರಾ ಭಾಯಂದರ್‌ನಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿ. ಸಿಎಫ್ಸಿಐ ಕ್ಲಬ್ಬಿನಲ್ಲಿ ಫುಟ್ಬಾಲ್ ನ ತರಬೇತಿ ಪಡೆಯುತ್ತಿದ್ದಾರೆ

2011 ಜೂನ್ 21 ರಂದು ಮಂಗಳೂರಿನ ಮುಚ್ಚೂರು ಗ್ರಾಮದಲ್ಲಿ ಜನಿಸಿದ ಸಮರ್ಥ್ ರೈ ಮುಂಬಯಿ ನಿವಾಸಿಯಾಗಿದ್ದು ಮಿಾಂಜ ಮಂಜಲ್ತೋಡಿ ಪೊಸನಿಕೆ ಮನೆ ಚಂದ್ರಶೇಖರ್ ರೈ ಮತ್ತು ಮುಚ್ಚೂರು ಕಲ್ಕುಡೆ ಕೈದುಮಾರು ಗುತ್ತು ಕುಶಲ ರೈ ಅವರ ಪುತ್ರ .



Related posts

ಮುಂಬೈ ಮ್ಯಾರಥಾನ್‌ನಲ್ಲಿ ವೈದ್ಯನ ‘ಗೋಲ್ಡನ್’ ಓಟ: ಆರ್ಥೋಪೆಡಿಕ್ ಸರ್ಜನ್ ಕಾರ್ತಿಕ್ ಕರ್ಕೇರಗೆ ಚಿನ್ನದ ಪದಕ

Mumbai News Desk

ಬಹುಮುಖ ಪ್ರತಿಭೆಯ ಬಾಲ ಪ್ರತಿಭೆ ಬೆಳ್ತಂಗಂಡಿಯ ಶ್ರೇಯಸ್ ಯೋಗೇಶ್ ಪೂಜಾರಿ.

Mumbai News Desk

ಏಷ್ಯನ್ ಮಾಸ್ಟರ್ಸ್ ವೇಟ್‌ಲಿಫ್ಟಿಂಗ್ ಕಮಿಟಿ (AMW);    ಅಂತರಾಷ್ಟ್ರೀಯ ವೇಟ್ ಲಿಫ್ಟರ್ ಉದಯ  ಶೆಟ್ಟಿ  ಆಯ್ಕೆ

Mumbai News Desk

ಸಿಂಹ ಘರ್ಜನೆ 2025 : ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಮಂಗಳಾದೇವಿ ಕ್ಲಬ್

Mumbai News Desk

ವಿಶ್ವ ಬಂಟರ  ಕ್ರೀಡಾಕೂಟದಲ್ಲಿ ಮುಂಬೈ ಬಂಟರ ಸಂಘದ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಗೆ ಸಮಗ್ರ ಚಾಂಪಿಯನ್

Mumbai News Desk

ಕರ್ನಾಟಕ ಸಂಘ ಡೊಂಬಿವಲಿ ದಂಗಲ್ ಕ್ರೀಡಾ ಕೂಟ, : ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ ಪಾಲ್ಗೊಳ್ಳುವುದು ಮುಖ್ಯ- ಡ. ದಿವಾಕರ ಶೆಟ್ಟಿ ಇಂದ್ರಾಳಿ

Mumbai News Desk