28.4 C
Mumbai
March 7, 2026
Mumbai News Kannada
ಸುದ್ದಿ

ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ – ಬಿಜೆಪಿಯ ಡಾ. ಧನಂಜಯ ಸರ್ಜಿ ಗೆ ಭಾರಿ ಗೆಲುವು ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಗೆ ಸೋಲು.






ಎಲ್ಲರ ಕುತೂಹಲ ಕೆರಳಿಸಿದ್ದ ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರಕ್ಕಾಗಿ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾಕ್ಟರ್ ಧನಂಜಯ್ ಸರ್ಜಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಗುರುವಾರ ಆರಂಭವಾದ ಮತ ಎಣಿಕೆ ಶುಕ್ರವಾರ ಬೆಳಿಗ್ಗೆ ತನಕ ನಡೆಯಿತು.


ಮತ ಏಣಿಕೆಯ ಆರಂಭದ ಸುತ್ತಿನಿಂದಲೇ ಧನಂಜಯ ಸರ್ಜಿ ಅವರು ಮುನ್ನಡೆ ಕಾಯ್ದುಕೊಂಡಿದ್ದರು. ಕೊನೆಗೆ ಡಾ. ಸರ್ಜಿ ಅವರು ಕಾಂಗ್ರೇಸ್ ನ ಆಯನೂರು ಮಂಜುನಾಥ್ ಅವರನ್ನು 24,112 ಮತಗಳ ಅಂತರದಲ್ಲಿ ಸೋಲಿಸುವ ಮೂಲಕ ಮೇಲ್ಮನೆ ಪ್ರವೇಶಿಸಿದರು. ಈ ಮೂಲಕ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಮಾಡಿದ್ದ ಬಿ. ಜೆ. ಪಿ – ಜೆ. ಡಿ. ಎಸ್ ಕೂಟ ಮೂರು ಕ್ಷೇತಗಳಲ್ಲಿ ಗೆಲುವು ಸಾಧಿಸಿದೆ.


ಬಿ. ಜೆ. ಪಿ ಯಿಂದ ಬಂಡಾಯ ಸ್ಪರ್ಧೆ ಮಾಡಿದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಅವರು ಸೋತು ಮುಖಭಂಗವಾಗಿದೆ.
ಡಾ. ಧನಂಜಯ ಸರ್ಜಿ ಅವರಿಗೆ 37,627, ಕಾಂಗ್ರೇಸ್ ನ ಆಯನೂರು ಮಂಜುನಾಥ್ ಗೆ 13,516, ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ ಗೆ 7039, ಹಾಗೂ ಎಸ್. ಪಿ. ದಿನೇಶ್ 2518 ಮತಗಳನ್ನು ಪಡೆದರು.
ಚುನಾವಣೆಯಲ್ಲಿ ಸೋತಿರುವ ರಘುಪತಿ ಭಟ್ ಅವರನ್ನು ಪಕ್ಷ ಉಚ್ಚಾಟಿಸಿದ್ದು, ಅವರ ಮುಂದಿನ ನಡೆ ಏನು ಎಂಬ ಪ್ರಶ್ನೆ ಎದುರಾಗಿದೆ. ಚುನಾವಣೆಯಲ್ಲಿ ಗೆದ್ದು ಮತ್ತೆ ಬಿ ಜೆ ಪಿ ಗೆ ಮರಳುವೆ ಎಂದು ಭಟ್ ಚುನಾವಣೆಗೂ ಮುನ್ನ ತಿಳಿಸಿದ್ದು, ಇದೀಗ ಬಿ. ಜೆ. ಪಿ. ಹೈಕಮಾಂಡ್ ಯಾವ ನಿರ್ದಾರ ತೆಗೆದುಕೊಳ್ಳಲಿದೆ ಎಂದು ಕಾದು ನೋಡಬೇಕಿದೆ.



Related posts

ಪೊಲಿಪು ಶ್ರೀಧರ್ ಕಾಂಚನ್ ನಿಧನ

Mumbai News Desk

ಚಿತ್ರರಂಗದ ಮಿನುಗು ತಾರೆ ರೀಟಾ ಆರ್. ಅಂಚನ್ ವಿಧಿವಶ

Mumbai News Desk

ಉಡುಪಿ : ತೋನ್ಸೆ ಗರೋಡಿ ಜೀರ್ಣೋದ್ಧಾರಕ್ಕೆ ಭಾರತ್ ಬ್ಯಾಂಕ್ ಕಾರ್ಯಧ್ಯಕ್ಷ ಸೂರ್ಯಕಾಂತ್ ಸುವರ್ಣ ಅವರಿಗೆ ಮನವಿ ಸಲ್ಲಿಕೆ

Mumbai News Desk

ಥಾಣೆ  :ಜಯರಾಮ ಸಾಂತ ನಿಧನ

Mumbai News Desk

ಕ್ರೀಡಾ ಪ್ರತಿಭೆಗಳಿಗೆ ಉದ್ಯೋಗ ಭದ್ರತೆ ಕಲ್ಪಿಸುವುದು ಅವಶ್ಯ : ಅಂತಾರಾಷ್ಟ್ರೀಯ ದೇಹದಾಡ್ಯ ಪಟು ರೇಮಂಡ್ ಡಿಸೋಜಾ

Mumbai News Desk

ತುಳು ಸಂಘ ಬೊರಿವಲಿ, ವಿಹಾರ ಕೂಟ, ಸ್ನೇಹ ಮಿಲನ

Mumbai News Desk