28.4 C
Mumbai
March 7, 2026
Mumbai News Kannada
ಮುಂಬಯಿ

ಶ್ರೀ ಮಹಿಷಮರ್ದಿನಿ ದೇವಸ್ಥಾನ ಬೊರಿವಲಿ ವಾರ್ಷಿಕ ಪೂಜಾ ಮಹೋತ್ಸವ ಸಂಪನ್ನ ,





ತುಳುವರಿಗೆ ದೈವ ನಂಬಿಕೆಯೇ ಜೀವಾಳ : ಕಣಂಜಾರು ಕೊಳಕೆಬೈಲು ಪ್ರದೀಪ್ ಸಿ ಶೆಟ್ಟಿ.

ಬೊರಿವಲಿ, ಜೂ. 5:   ಶ್ರೀ ಕ್ಷೇತ್ರ ಜಯರಾಜ್ ನಗರ ಬೊರಿವಿಲಿ ಪಶ್ಚಿಮ ಇದರ 34ನೇ ವಾರ್ಷಿಕ ಮಹಾಪೂಜಾ ಮಹೋತ್ಸವದ ಅಂಗವಾಗಿ ಜೂ.  3ರಂದು ರಾತ್ರಿ ದೇವರ ಉತ್ಸವ ಪಲ್ಲಕ್ಕಿ ಶೋಭ ಯಾತ್ರೆ ಹಾಗೂ ಕೊಡಮಣಿತಾಯ ದೈವದೇವರ ಭೇಟಿಯೊಂದಿಗೆ ಸಂಪನ್ನಗೊಂಡಿತು. 

     ಬೆಳಿಗ್ಗೆ ಶ್ರೀ ಮಹಿಷಮರ್ದಿನಿ  ದೇವಸ್ಥಾನದ ಸನ್ನಿಧಾನದಲ್ಲಿ ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳವರ ನೇತೃತ್ವದಲ್ಲಿ ಕವಾಟೋದ್ಘಾಟನೆ ಪಂಚಾಮೃತ ಅಭಿಷೇಕ ಪ್ರಸನ್ನ ಪೂಜೆ ಜರುಗಿದ ಬಳಿಕ ಶ್ರೀ ಮಹಿಷ ಮರ್ದಿನಿ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಕಾರ್ಯಕ್ರಮ ಜರುಗಿತು. ಆ ಬಳಿಕ ಶ್ರೀದೇವಿ ಮಹಿಷಮರ್ದಿನಿ ಗೆ ಮಹಾಪೂಜೆ ಚೂರ್ಣೋತ್ಸವ ಹರಿವಾಣ ಕಾಣಿಕೆ ಸಮರ್ಪಿಸಿದ ಬಳಿಕ ಪಲ್ಲಪೂಜೆ ಅನ್ನ ಸಂತರ್ಪಣೆ ಜರುಗಿತು. ದೈವ ದೇವರ ಭೇಟಿಯ ಬಳಿಕ ಅವಭೃತ ಸ್ನಾನ ಧ್ವಜಾವರೋಹಣ ನೆರವೇರಿತು.

      ಬಳಿಕ ತುಳುನಾಡಿನ ಪರಂಪರೆಯ ದೈವ ದೇವರ ಬಗ್ಗೆ ಮಾತನಾಡಿದ ದೇವಸ್ಥಾನದ ಆಡಳಿತ ಮೊಕ್ತೇಸರ ರಾದ ಕಣಂಜಾರು  ಕೊಳಕೆ ಬೈಲು ಪ್ರದೀಪ್ ಸಿ ಶೆಟ್ಟಿ ಮಾತನಾಡುತ್ತಾ,  ಅನಾದಿಕಾಲದಿಂದಲೂ ತುಳುನಾಡು ದೈವದೇವರ ನೆಲೆವೀಡಾಗಿದೆ.  ದೈವದ ಮೇಲಿನ ಶಕ್ತಿಯಿಂದ ಹಿರಿಯರು ಸಮಾಜಕ್ಕೆ ತುಳು ಮಣ್ಣಿಗೆ ನೀಡಿದ ಗೌರವ ಅಪಾರ.  ತುಳು ನಾಡಿನ ಮಣ್ಣಿನ ಪರಿಮಳದಲ್ಲಿ ನಾಡಿನ ಸಂಸ್ಕಾರ ಸಂಸ್ಕೃತಿ ಬೆಳೆದು ನಿಂತಿದೆ. ಬೆಳೆಯುವ ಪೈರು ಪ್ರಕೃತಿಯ ದೈವ ದೇವರ ಕೊಡುಗೆ ಎಂದು ನಂಬಿದವರು.  ಆ ಮೂಲಕ  ಕೋಲ, ಆಯನ ನಾಗರಾಧನೆ ದೈವಗಳ ನಂಬಿಕೆಗೆ ಜೀವ ತುಂಬಿದ ತುಳುನಾಡ ಜನರು ದೈವದ  ಈ ಮಣ್ಣಿನ ಶಕ್ತಿಗೆ ತಮ್ಮನ್ನು ಅರ್ಪಣೆ ಮಾಡುವ ಮೂಲಕ ನಮ್ಮ ಜೀವನ ಪಾಠವಾಗಿ ಬೆಳೆದು ಬಂದ ನಾಡಾಗಿದೆ ಎಂದು ಹೇಳಿದರು. 

     ಕಾರ್ಯಕ್ರಮದಲ್ಲಿ ದೇವಸ್ಥಾನದ ವಂಶಸ್ಥ ಸ್ಥಾಪಕ ಮೊಕ್ತೇಸರರಾದ ಕಲ್ಲಮುಂಡ್ಕೂರು ಹರಿಯಾಳಗುತ್ತು ಜಯರಾಜ್ ಶ್ರೀಧರ್ ಶೆಟ್ಟಿ ದಂಪತಿಗಳು,  ಶಾಲಿನಿ ಪ್ರದೀಪ್ ಶೆಟ್ಟಿ,  ಧನ್ಯ ಶೆಟ್ಟಿ, ಅಶೋಕ್ ಶೆಟ್ಟಿ ಜಯಪಾಲಿ ಶೆಟ್ಟಿ, ಟಿಯಾರ ಶೆಟ್ಟಿ ಬಾಲಕೃಷ್ಣ ರೈ ರಜನಿ ರೈ ಪೇಟೆಮನೆ ಪ್ರಕಾಶ್ ಶೆಟ್ಟಿ ಪ್ರೇಮ್ ನಾಥ್ ಶೆಟ್ಟಿ ರವೀಂದ್ರ ಶೆಟ್ಟಿ,  ವೆಜ್ ಟ್ರೀಟ್ ಗ್ರೂಪ್   ಆಪ್ ಹೋಟೆಲ್ಸ್, ಪಟೇಲ್ ಸದಾನಂದ ಶೆಟ್ಟಿ, ಕಸ್ತೂರಿ ಸದಾನಂದ ಶೆಟ್ಟಿ ಉದ್ಯಮಿ ಸದಾಶಿವ ಶೆಟ್ಟಿ, ಉದ್ಯಮಿ ರಘುನಾಥ ಶೆಟ್ಟಿ ದಂಪತಿ, ಅಂಕಲೇಶ್ವರ್,  ಪದ್ಮನಾಭ ಎಸ್ ಪಯ್ಯಡೆ ಮುಂಡಪ್ಪ ಎಸ್ ಪಯ್ಯಡೆ ಪೇಟೆಮನೆ ರವೀಂದ್ರ ಶೆಟ್ಟಿ ದಿವಾಕರ್ ಮ್ಹಾತ್ರೆ ಕುಟುಂಬಸ್ಥರು ಕಮಲೇಶ್ ಶೆಟ್ಟಿ ಶಿವಾನಂದ ಶೆಟ್ಟಿ ದೇವರಾಜ್ ನೆಲ್ಲಿಕಾರು, ಕೃಷ್ಣ ಹೊಳ್ಳ , ಆದರ್ಶ್ ಹಾಗೂ ಸಮಸ್ತ ಅರ್ಚಕ ವೃಂದ ಪ್ರಕಾಶ್ ಹೊಳ್ಳ, (ಬಲಿಮೂರ್ತಿ) ಸುನಿಲ್ ಶೆಟ್ಟಿ ಮಾರೂರು (ದೈವದ ಪಾತ್ರಿ) ಭಾಗವಹಿಸಿದರು.  ಹಾಗೂ ಬಹು ಸಂಖ್ಯೆಯಲ್ಲಿ ತುಳು ಕನ್ನಡಿಗರು  ಉಪಸ್ಥಿತರಿದ್ದರು.



Related posts

ಕರ್ನಾಟಕ ಸಂಘ ಪನ್ವೆಲ್ ಗಣೇಶೋತ್ಸವ, ಸತ್ಯನಾರಾಯಣ ಮಹಾಪೂಜೆ,ಮಾತಾ ಕಿ ಚೌಕಿ, ಭಕ್ತಿ ಸಂಭ್ರಮದೊಂದಿಗೆ ಆಚರಣೆ .

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸ ಮಂಡಳಿ ಮಂಗಳವಾರದ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಬಿಲ್ಲವರ ಅಸೋಸಿಯೇಶನ್ ಮೀರಾ ರೋಡ್ ಸ್ಥಳೀಯ ಕಚೇರಿಯಿಂದ ಅದ್ಧೂರಿ ಸ್ನೇಹ ಸಮ್ಮಿಲನ;

Mumbai News Desk

ಭಾರತ್ ಬ್ಯಾಂಕ್ ಧಾರಾವಿ ಶಾಖೆ –ಸಂಸ್ಥಾಪನಾ ದಿನಾಚರಣೆ ಸಂಭ್ರಮ

Mumbai News Desk

ಮುಂಬೈ ಬಿಲ್ಲವರು ಆಯೋಜನೆಯಲ್ಲಿ ಅರಶಿನ ಕುಂಕುಮ, ವಿಧವೆಯರಿಗೆ  ಸೀರೆ, ಧನ ಸಹಾಯ ವಿತರಣೆ

Mumbai News Desk

ಶ್ರೀ ಮಹಾವಿಷ್ಣು ಮಂದಿರ , ಡೊಂಬಿವಲಿ , ವಾರ್ಷಿಕ ಭಜನಾ ಮಂಗಲೋತ್ಸವ ಹಾಗೂ ಏಕಾಹ ಭಜನೆ.

Mumbai News Desk