September 6, 2026
Mumbai News Kannada
ತುಳುನಾಡು

ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಚೆಯರ್ ಮೆನ್ ಆಗಿ ಕರುಣಾಕರ ಶೆಟ್ಟಿ ಮಧ್ಯಗುತ್ತು ಆಯ್ಕೆ






ಸುರತ್ಕಲ್ : ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಚೆಯರ್ ಮೆನ್ ಆಗಿ ಸಮಾಜಸೇವಕ, ಉದ್ಯಮಿ ಮುಂಬೈ ವಿ.ಕೆ.ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಕರುಣಾಕರ ಶೆಟ್ಟಿ ಮಧ್ಯಗುತ್ತು ಆಯ್ಕೆಯಾಗಿದ್ದಾರೆ. ಸುರತ್ಕಲ್ ಬಂಟರ ಸಂಘದ ಮಹಾಸಭೆಯಲ್ಲಿ ಕರುಣಾಕರ ಎಂ ಶೆಟ್ಟಿ ಅವರನ್ನು ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲು ಠರಾವು ಮಂಡಿಸಲಾಯಿತು. ಬಳಿಕ ಸಂಜೆ ನಡೆದ ಬಹಿರಂಗ ಅಧಿವೇಶನದಲ್ಲಿ ಕರುಣಾಕರ ಶೆಟ್ಟಿ ಅವರನ್ನು ನೂತನ ಕಟ್ಟಡ ಸಮಿತಿಯ ಅಧ್ಯಕ್ಷರನ್ನಾಗಿ ಘೋಷಿಸಲಾಯಿತು. ಬಳಿಕ ಸಂಘದ. ವತಿಯಿಂದ ಕರುಣಾಕರ ಶೆಟ್ಟಿ ಅವರನ್ನು ಗೌರವಿಸಲಾಯಿತು.
ಬಳಿಕ ಮಾತನಾಡಿದ ಕರುಣಾಕರ ಶೆಟ್ಟಿ ಅವರು ದೊಡ್ಡ ಜವಾಬ್ದಾರಿಯನ್ನು ನೀಡಿದ್ದೀರಿ. ಇದಕ್ಕೆ ಪ್ರತಿಯೊಬ್ಬ ಸದಸ್ಯರ ಸಹಕಾರ ಬೇಕು. ಸುರತ್ಕಲ್ ನಲ್ಲಿ ಭವ್ಯವಾದ ಹವಾನಿಯಂತ್ರಿತ ಕಟ್ಟಡವನ್ನು ನಿರ್ಮಿಸೋಣ ಎಂದರು. ಈ ಸಂದರ್ಭದಲ್ಲಿ  ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ, ಉಪಾಧ್ಯಕ್ಷ ಪುಷ್ಪರಾಜ ಶೆಟ್ಟಿ ಕುಡುಂಬೂರು,  ಕೋಶಾಧಿಕಾರಿ ಅವಿನಾಶ್ ಶೆಟ್ಟಿ ನಿಕಟಪೂರ್ವ ಅಧ್ಯಕ್ಷ ಸುಧಾಕರ ಪೂಂಜ, ಮಾಜೀ ಅಧ್ಯಕ್ಷರಾದ ದೇವಾನಂದ ಶೆಟ್ಟಿ, ಉಲ್ಲಾಸ್ ಶೆಟ್ಟಿ ಪೆರ್ಮುದೆ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.



Related posts

ಮೂಲತ್ವ ಫೌಂಡೇಶನ್‌ನಿಂದ ‘ಆಟಿದೊಂಜಿ ದಿನ’ ಆಚರಣೆ: ಶಾಸಕ ವೇದವ್ಯಾಸ ಕಾಮತ್ ಉದ್ಘಾಟನೆ, ‘ಮೂಲತ್ವ ಲೋಕ ಪೊರ್ಲು’ ಅನಾವರಣ

Mumbai News Desk

ಮೊಗವೀರ ಮಹಾಸಭಾ ಹೆಜಮಾಡಿ ಇದರ ನೂತನ ಅಧ್ಯಕ್ಷರಾಗಿ ಉದ್ಯಮಿ, ಸಮಾಜ ಸೇವಕ ಹರೀಶ್ ಕೋಟ್ಯಾನ್ ಆಯ್ಕೆ

Mumbai News Desk

ದೊಡ್ಡಣಗುಡ್ಡೆ: ಕೋಟಿ ಲಲಿತಾ ಸಹಸ್ರನಾಮ ಪಾರಾಯಣ ಮಹಾಯಜ್ಞದ ಸಂಕಲ್ಪ ಕಾರ್ಯಕ್ರಮದ ಉದ್ಘಾಟನೆ

Mumbai News Desk

ಹೆಜಮಾಡಿ ಬಿಲ್ಲವರ ಸಂಘ ನವರಾತ್ರಿ ಆಚರಣೆ, ದಾಂಡಿಯಾ ನೃತ್ಯ

Mumbai News Desk

ಉಡುಪಿ ಉಚ್ಚಿಲ ದಸರಾ-2025: ಮೊಗವೀರರ ಶಕ್ತಿ ಕೇಂದ್ರದಲ್ಲಿ ವೈಭವದ ‘ದಸರಾ ಸಮಾಪನ’

Mumbai News Desk

ಇಂದ್ರಾಳಿ ಮೇಲ್ಸೇತುವೆ ಸೆಪ್ಟೆಂಬರ್ 22 ವಾಹನ ಸಂಚಾರಕ್ಕೆ ಮುಕ್ತ, ಸೋಮವಾರದಿಂದಲೇ ಕೆಳ ಪರ್ಕಳ ರಸ್ತೆ ಕಾಮಗಾರಿ ಆರಂಭ : ಯಶ್ಪಾಲ್ ಸುವರ್ಣ

Mumbai News Desk