28.4 C
Mumbai
March 7, 2026
Mumbai News Kannada
ಸುದ್ದಿ

ರಾಷ್ಟ್ರೀಯ ನಾಟಕ ಸ್ಪರ್ಧೆ – ಉಡುಪಿಯ ನವಸುಮ ರಂಗಮಂಚ ಕೊಡವೂರು ತಂಡ ಪ್ರಥಮ.





ಶೀಮ್ಲಾ ದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರ ಮಟ್ಟದ ಹಿಂದಿ ರಾಷ್ಟ್ರೀಯ ನಾಟಕ ಸ್ಪರ್ಧೆಯಲ್ಲಿ ಭಾಗವಹಿಸಿದ ಕರ್ನಾಟಕದ ಏಕೈಕ ರಂಗಸಂಸ್ಥೆ ಉಡುಪಿಯ ನವಸುಮ ರಂಗಮಂಚ ಪ್ರಥಮ ಸ್ಥಾನ ಗಳಿಸಿದೆ.ದೇಶದ ಒಟ್ಟು 30 ತಂಡಗಳು ನಾಟಕ ಸ್ಪರ್ಧೆಯಲ್ಲಿ ಭಾಗವಹಿಸಿತ್ತು.

ಬಾಲಕೃಷ್ಣ ಕೊಡವೂರು ರಚಿಸಿ ನಿರ್ದೇಶಿಸಿದ “ದ್ರೌಣಿ” ಮೂಲ ನಾಟಕವನ್ನು ಡಾ.ಮಾಧವಿ ಭಂಡಾರಿ ಹಿಂದಿಗೆ ಅನುವಾದಿಸಿದ್ದು, ಮಂಗಳೂರು ಆಕಾಶವಾಣಿಯ ಸಾಂದರ್ಭಿಕ ಉದ್ಘೋಷಕಿ ಅಕ್ಷತಾ ಪೆರ್ಲ ರಂಗ ಪದ್ಯ ರಚಿಸಿದ್ದಾರೆ. ಜಯಶೇಖರ್ ಮಡಪ್ಪಾಡಿ ಬೆಳಕಿನ ವಿನ್ಯಾಸ ಮಾಡಿದರೆ, ರೋಹಿತ್ ಮಲ್ಪೆ ಸಂಗೀತ ನೀಡಿದ್ದರು.


ಖ್ಯಾತ ಜನಪದ ಕಲಾವಿದ ಗುರುಚರಣ್ ಪೊಲಿಪು ಕೃಪಾಚಾರ್ಯನಾಗಿ, ರಕ್ಷಿತ್ ಮೂಡಬೆಟ್ಟು ಕ್ರತವರ್ಮಾ, ಕಾಲಬೈರವನಾಗಿ ವಿನೋದ್, ಸಂಜಯಾನಾಗಿ ಸುಕೇಶ್ ಮಧ್ವನಗರ್, ಕೃಷ್ಣನಾಗಿ ಖುಷಿ ಪೂಜಾರಿ ಹೆರ್ಗ, ಬಲರಾಮನಾಗಿ ಸತೀಶ್ ಕೋಟ್ಯಾನ್ ಕೊಡವೂರು, ಸೇವಕಿಯಾಗಿ ಲಿಪಿಕ ಹೆಗ್ಡೆ ಪಂಜಿಮಾರು, ಮೇಳ ಹಾಗೂ ಸೈನಿಕನಾಗಿ ದಿನೇಶ್ ಕದಿಕೆ, ಚಿರಾಗ್ ಮಧ್ವನಗರ, ಸುಹಾಗ್ ಬೈಲಕೆರೆ, ಪ್ರದೀಪ್ ಕಲ್ಮಾಡಿ, ಮನೀಶ್ ಅಮೀನ್ ಮೂಡಬೆಟ್ಟು ಪಾತ್ರಕ್ಕೆ ಜೀವತುಂಬಿ ಅಭಿನಯಿಸಿದರು. ಸಂತೋಷ್ ಪೆರಂಪಳ್ಳಿ ಬೆಳಕಿನಲ್ಲಿ ಸಹಕರಿಸದರು.


ಉಡುಪಿಯ ಹೆಸರಾಂತ ಕಲಾ ಸಂಸ್ಥೆ ನವಸುಮ ರಂಗಮಂಚ ಕೊಡವೂರು, ಸ್ಪರ್ಧೆಯಲ್ಲಿ ಭಾಗವಹಿಸಿದ ಕರ್ನಾಟಕದ ಏಕೈಕ ತಂಡವಾಗಿದ್ದು, ಎರಡನೇ ಬಾರಿ ಪ್ರಥಮ ಸ್ಥಾನ ಪಡೆಯುವ ಮೂಲಕ , ರಾಜ್ಯ, ಜಿಲ್ಲೆಗೆ ಹೆಮ್ಮೆ ತಂದಿದೆ.



Related posts

ಮುಂಬೈಯ ಬಾಂದ್ರ ಟರ್ಮಿನಸ್ ನಲ್ಲಿ ನೂಕುನುಗ್ಗಲು, ಕಾಲ್ತುಳಿತ; 9 ಮಂದಿಗೆ ಗಾಯ

Mumbai News Desk

ದುಬೈ ಯಲ್ಲಿ ಅದ್ದೂರಿಯಾಗಿ ಜರಗಿದ “ಅಂತಾರಾಷ್ಟ್ರೀಯ ಜನಪದ ಉತ್ಸವ – 2025”

Mumbai News Desk

ಮುಲುಂಡ್ ಕ್ಷೇತ್ರದ ‌ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ರಾಕೇಶ್ ಶೆಟ್ಟಿ  ಕಣಕ್ಕೆ

Mumbai News Desk

ಸತತ 12 ಗಂಟೆ ಚರ್ಚೆ, ವಾಗ್ವಾದ ಬಳಿಕ ವಕ್ಫ್ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ

Mumbai News Desk

ಜ.11 : ಡಿವೈನ್ ಪಾರ್ಕ್‌ನ ಮಹಾರಾಷ್ಟ್ರ ಘಟಕದ ವತಿಯಿಂದ ಡಾಕ್ಟರ್‌ಜೀ ಅವರಿಗೆ ಶ್ರದ್ಧಾಂಜಲಿ ಹಾಗೂ ಪ್ರಾರ್ಥನಾ ಸಭೆ

Mumbai News Desk

ಖ್ಯಾತ ಆರ್ಥಿಕ ಸಲಹೆಗಾರ ಡಾ. ಆರ್. ಕೆ. ಶೆಟ್ಟಿಯವರಿಗೆ “ಸಂಸ್ಕೃತಿ ಸಿರಿ” ಪ್ರಶಸ್ತಿ

Mumbai News Desk