September 6, 2026
Mumbai News Kannada
ಸುದ್ದಿ

ರಾಷ್ಟ್ರೀಯ ನಾಟಕ ಸ್ಪರ್ಧೆ – ಉಡುಪಿಯ ನವಸುಮ ರಂಗಮಂಚ ಕೊಡವೂರು ತಂಡ ಪ್ರಥಮ.





ಶೀಮ್ಲಾ ದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರ ಮಟ್ಟದ ಹಿಂದಿ ರಾಷ್ಟ್ರೀಯ ನಾಟಕ ಸ್ಪರ್ಧೆಯಲ್ಲಿ ಭಾಗವಹಿಸಿದ ಕರ್ನಾಟಕದ ಏಕೈಕ ರಂಗಸಂಸ್ಥೆ ಉಡುಪಿಯ ನವಸುಮ ರಂಗಮಂಚ ಪ್ರಥಮ ಸ್ಥಾನ ಗಳಿಸಿದೆ.ದೇಶದ ಒಟ್ಟು 30 ತಂಡಗಳು ನಾಟಕ ಸ್ಪರ್ಧೆಯಲ್ಲಿ ಭಾಗವಹಿಸಿತ್ತು.

ಬಾಲಕೃಷ್ಣ ಕೊಡವೂರು ರಚಿಸಿ ನಿರ್ದೇಶಿಸಿದ “ದ್ರೌಣಿ” ಮೂಲ ನಾಟಕವನ್ನು ಡಾ.ಮಾಧವಿ ಭಂಡಾರಿ ಹಿಂದಿಗೆ ಅನುವಾದಿಸಿದ್ದು, ಮಂಗಳೂರು ಆಕಾಶವಾಣಿಯ ಸಾಂದರ್ಭಿಕ ಉದ್ಘೋಷಕಿ ಅಕ್ಷತಾ ಪೆರ್ಲ ರಂಗ ಪದ್ಯ ರಚಿಸಿದ್ದಾರೆ. ಜಯಶೇಖರ್ ಮಡಪ್ಪಾಡಿ ಬೆಳಕಿನ ವಿನ್ಯಾಸ ಮಾಡಿದರೆ, ರೋಹಿತ್ ಮಲ್ಪೆ ಸಂಗೀತ ನೀಡಿದ್ದರು.


ಖ್ಯಾತ ಜನಪದ ಕಲಾವಿದ ಗುರುಚರಣ್ ಪೊಲಿಪು ಕೃಪಾಚಾರ್ಯನಾಗಿ, ರಕ್ಷಿತ್ ಮೂಡಬೆಟ್ಟು ಕ್ರತವರ್ಮಾ, ಕಾಲಬೈರವನಾಗಿ ವಿನೋದ್, ಸಂಜಯಾನಾಗಿ ಸುಕೇಶ್ ಮಧ್ವನಗರ್, ಕೃಷ್ಣನಾಗಿ ಖುಷಿ ಪೂಜಾರಿ ಹೆರ್ಗ, ಬಲರಾಮನಾಗಿ ಸತೀಶ್ ಕೋಟ್ಯಾನ್ ಕೊಡವೂರು, ಸೇವಕಿಯಾಗಿ ಲಿಪಿಕ ಹೆಗ್ಡೆ ಪಂಜಿಮಾರು, ಮೇಳ ಹಾಗೂ ಸೈನಿಕನಾಗಿ ದಿನೇಶ್ ಕದಿಕೆ, ಚಿರಾಗ್ ಮಧ್ವನಗರ, ಸುಹಾಗ್ ಬೈಲಕೆರೆ, ಪ್ರದೀಪ್ ಕಲ್ಮಾಡಿ, ಮನೀಶ್ ಅಮೀನ್ ಮೂಡಬೆಟ್ಟು ಪಾತ್ರಕ್ಕೆ ಜೀವತುಂಬಿ ಅಭಿನಯಿಸಿದರು. ಸಂತೋಷ್ ಪೆರಂಪಳ್ಳಿ ಬೆಳಕಿನಲ್ಲಿ ಸಹಕರಿಸದರು.


ಉಡುಪಿಯ ಹೆಸರಾಂತ ಕಲಾ ಸಂಸ್ಥೆ ನವಸುಮ ರಂಗಮಂಚ ಕೊಡವೂರು, ಸ್ಪರ್ಧೆಯಲ್ಲಿ ಭಾಗವಹಿಸಿದ ಕರ್ನಾಟಕದ ಏಕೈಕ ತಂಡವಾಗಿದ್ದು, ಎರಡನೇ ಬಾರಿ ಪ್ರಥಮ ಸ್ಥಾನ ಪಡೆಯುವ ಮೂಲಕ , ರಾಜ್ಯ, ಜಿಲ್ಲೆಗೆ ಹೆಮ್ಮೆ ತಂದಿದೆ.



Related posts

ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ- ಪಟ್ಲ ಸತೀಶ್ ಶೆಟ್ಟಿ

Mumbai News Desk

ಉಡುಪಿ : ಅಕ್ಷತಾ ಪೂಜಾರಿ ಮೇಲೆ ಹಲ್ಲೆ ನಡೆಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ – ಕೋಟ ಶ್ರೀನಿವಾಸ ಪೂಜಾರಿ

Mumbai News Desk

ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಆತಂಕ: ಆರೋಗ್ಯ ಇಲಾಖೆಯಿಂದ ಅಯ್ಯಪ್ಪ ಭಕ್ತರಿಗೆ ಮಾರ್ಗಸೂಚಿ ಬಿಡುಗಡೆ

Mumbai News Desk

ಮುಂಬೈ : ಥಾಣೆಯಲ್ಲಿ ಪೈಪ್‌ಲೈನ್ ಸೋರಿಕೆ: ಏಪ್ರಿಲ್ 11 ರಿಂದ 24 ಗಂಟೆಗಳ ಕಾಲ ನೀರು ಸರಬರಾಜು ಸ್ಥಗಿತ

Mumbai News Desk

ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಸಂಸದ ಡಾ. ಶ್ರೀಕಾಂತ್ ಶಿಂಧೆ ಭೇಟಿ: ದೇವಿಯ ದರ್ಶನ ಪಡೆದು ವಿಶೇಷ ಪೂಜೆ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿಯಲ್ಲಿ ಸುಧೀರ್ಘ ಕಾಲ ಸೇವೆ ಮಾಡಿದ ಬಪ್ಪನಾಡು ಶ್ರೀನಿವಾಸ ಸುವರ್ಣ ಅವರಿಗೆ ಮಂಡಳಿಯ 123ನೇ ಸಂಸ್ಥಾಪನಾ ದಿನದಂದು ಸನ್ಮಾನ.

Mumbai News Desk