July 22, 2026
Mumbai News Kannada
ಸುದ್ದಿ

ರಾಷ್ಟ್ರೀಯ ನಾಟಕ ಸ್ಪರ್ಧೆ – ಉಡುಪಿಯ ನವಸುಮ ರಂಗಮಂಚ ಕೊಡವೂರು ತಂಡ ಪ್ರಥಮ.







ಶೀಮ್ಲಾ ದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರ ಮಟ್ಟದ ಹಿಂದಿ ರಾಷ್ಟ್ರೀಯ ನಾಟಕ ಸ್ಪರ್ಧೆಯಲ್ಲಿ ಭಾಗವಹಿಸಿದ ಕರ್ನಾಟಕದ ಏಕೈಕ ರಂಗಸಂಸ್ಥೆ ಉಡುಪಿಯ ನವಸುಮ ರಂಗಮಂಚ ಪ್ರಥಮ ಸ್ಥಾನ ಗಳಿಸಿದೆ.ದೇಶದ ಒಟ್ಟು 30 ತಂಡಗಳು ನಾಟಕ ಸ್ಪರ್ಧೆಯಲ್ಲಿ ಭಾಗವಹಿಸಿತ್ತು.

ಬಾಲಕೃಷ್ಣ ಕೊಡವೂರು ರಚಿಸಿ ನಿರ್ದೇಶಿಸಿದ “ದ್ರೌಣಿ” ಮೂಲ ನಾಟಕವನ್ನು ಡಾ.ಮಾಧವಿ ಭಂಡಾರಿ ಹಿಂದಿಗೆ ಅನುವಾದಿಸಿದ್ದು, ಮಂಗಳೂರು ಆಕಾಶವಾಣಿಯ ಸಾಂದರ್ಭಿಕ ಉದ್ಘೋಷಕಿ ಅಕ್ಷತಾ ಪೆರ್ಲ ರಂಗ ಪದ್ಯ ರಚಿಸಿದ್ದಾರೆ. ಜಯಶೇಖರ್ ಮಡಪ್ಪಾಡಿ ಬೆಳಕಿನ ವಿನ್ಯಾಸ ಮಾಡಿದರೆ, ರೋಹಿತ್ ಮಲ್ಪೆ ಸಂಗೀತ ನೀಡಿದ್ದರು.


ಖ್ಯಾತ ಜನಪದ ಕಲಾವಿದ ಗುರುಚರಣ್ ಪೊಲಿಪು ಕೃಪಾಚಾರ್ಯನಾಗಿ, ರಕ್ಷಿತ್ ಮೂಡಬೆಟ್ಟು ಕ್ರತವರ್ಮಾ, ಕಾಲಬೈರವನಾಗಿ ವಿನೋದ್, ಸಂಜಯಾನಾಗಿ ಸುಕೇಶ್ ಮಧ್ವನಗರ್, ಕೃಷ್ಣನಾಗಿ ಖುಷಿ ಪೂಜಾರಿ ಹೆರ್ಗ, ಬಲರಾಮನಾಗಿ ಸತೀಶ್ ಕೋಟ್ಯಾನ್ ಕೊಡವೂರು, ಸೇವಕಿಯಾಗಿ ಲಿಪಿಕ ಹೆಗ್ಡೆ ಪಂಜಿಮಾರು, ಮೇಳ ಹಾಗೂ ಸೈನಿಕನಾಗಿ ದಿನೇಶ್ ಕದಿಕೆ, ಚಿರಾಗ್ ಮಧ್ವನಗರ, ಸುಹಾಗ್ ಬೈಲಕೆರೆ, ಪ್ರದೀಪ್ ಕಲ್ಮಾಡಿ, ಮನೀಶ್ ಅಮೀನ್ ಮೂಡಬೆಟ್ಟು ಪಾತ್ರಕ್ಕೆ ಜೀವತುಂಬಿ ಅಭಿನಯಿಸಿದರು. ಸಂತೋಷ್ ಪೆರಂಪಳ್ಳಿ ಬೆಳಕಿನಲ್ಲಿ ಸಹಕರಿಸದರು.


ಉಡುಪಿಯ ಹೆಸರಾಂತ ಕಲಾ ಸಂಸ್ಥೆ ನವಸುಮ ರಂಗಮಂಚ ಕೊಡವೂರು, ಸ್ಪರ್ಧೆಯಲ್ಲಿ ಭಾಗವಹಿಸಿದ ಕರ್ನಾಟಕದ ಏಕೈಕ ತಂಡವಾಗಿದ್ದು, ಎರಡನೇ ಬಾರಿ ಪ್ರಥಮ ಸ್ಥಾನ ಪಡೆಯುವ ಮೂಲಕ , ರಾಜ್ಯ, ಜಿಲ್ಲೆಗೆ ಹೆಮ್ಮೆ ತಂದಿದೆ.



Related posts

ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ – 58 ನೇ ಆರ್ ಎನ್ ಉಚ್ಚಿಲ್ ಸ್ಮಾರಕ ವಾರ್ಷಿಕ ಅಥ್ಲೆಟಿಕ್ಸ್ ಮೀಟ್

Mumbai News Desk

ಶೇಕಡಾವಾರು ಅಂಕಗಳಿಗಿಂತ ಮಗುವಿನ ನಗುವೇ ಮೇಲು: ಶೈಕ್ಷಣಿಕ ಒತ್ತಡದ ಜಗತ್ತಿಗೆ ಮುಂಬೈ ಕುಟುಂಬದ ಮಾನವೀಯ ಸಂದೇಶ

Mumbai News Desk

ಉಡುಪಿ : ಕಟಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್‌ಪಿಜಿ ಟ್ಯಾಂಕರ್ ಮಗುಚಿ ಆತಂಕ: ಅಗ್ನಿಶಾಮಕ ದಳದ ಸಮಯೋಚಿತ ಕಾರ್ಯಾಚರಣೆಯಿಂದ ತಪ್ಪಿದ ಭಾರಿ ಅನಾಹುತ

Mumbai News Desk

ಮುಂಬೈ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಪ್ರವೀಣ್ ಭೋಜ ಶೆಟ್ಟಿ ಆಯ್ಕೆ

Mumbai News Desk

ಪಳ್ಳಿ “ಫಿಶ್ ಮೀಲ್“ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ, ತಹಶೀಲ್ದಾರ್ ರಿಂದ ಸೂಕ್ತ ಕ್ರಮದ ಭರವಸೆ.

Mumbai News Desk

ಸಾಧಕ ಸ್ಕೌಟ್ಸ್-ಗೈಡ್ಸ್ ವಿದ್ಯಾರ್ಥಿಗಳಿಗೆ ಉಡುಪಿಯಲ್ಲಿ ಭವ್ಯ ಸನ್ಮಾನ: ದೇಶದ ಭವಿಷ್ಯ ಕಟ್ಟಲು ಮಕ್ಕಳಿಗೆ ಸಂಸ್ಕಾರ ಅಗತ್ಯ – ಶ್ರೀ ಶೀರೂರು ಶ್ರೀಗಳು

Mumbai News Desk