28.4 C
Mumbai
March 7, 2026
Mumbai News Kannada
ತುಳುನಾಡು

ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಹೆತ್ತವರು ಮತ್ತು ಮಕ್ಕಳಿಗೆ ಉಪಯುಕ್ತ ಮಾಹಿತಿ ಇರುವ ಕೈ ಪಿಡಿ ಬಿಡುಗಡೆ





ಇಂದಿನ ವೈಜ್ಞಾನಿಕ ಯುಗದಲ್ಲಿ ಹೆತ್ತವರು ಮತ್ತು ಮಕ್ಕಳು ತಮ್ಮ ದಿನ ನಿತ್ಯದ ನಿಯಮ ತತ್ವವು ಮರೆಯಾಗುತ್ತಿದ್ದು ಈ ನಿಟ್ಟಿನಲ್ಲಿ ಏಕ ಜಾತಿ ಧರ್ಮ ಪೀಠ ದ್ವಾರಕಾಮಾಯಿ ಮಠದ ಪೀಠಾಧೀಶ್ವರ ಶ್ರೀ ಸಾಯಿಈಶ್ವರ್ ಗುರೂಜಿಯವರು ತಾ.20-06-2024 ಗುರುವಾರದಂದು ಶ್ರೀ ಮಹಾಲಿಂಗೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ನಡೂರು ನಲ್ಲಿ ಸಂಕೇತಿಯಾಗಿ ಕೈ ಪಿಡಿಯ
ಬಿಡುಗಡೆ ಮಾಡಿದರು

ಈ ಕೈ ಪಿಡಿಯಲ್ಲಿ ಹೆತ್ತವರು ಮತ್ತು ಮಕ್ಕಳು ನಿತ್ಯ ಅನುಸರಿಸ ಬೇಕಾದ ಉಪಯುಕ್ತ ಮಾಹಿತಿಯನ್ನು ಒಳಗೊಂಡಿದೆ ಮುಂದಿನ ದಿನಗಳಲ್ಲಿ
ಎಲ್ಲಾ ಶಾಲಾ ಮಕ್ಕಳ ಕೈ ಸೇರಲಿದೆ ಎಂದು ಗುರೂಜಿಯವರು ತಿಳಿಸುವುದರೊಂದಿಗೆ ಈ ಶಾಲೆಯಲ್ಲಿಯೂ ಪ್ರತಿ ಗುರುವಾರ ಮಠದ ವತಿಯದ ನಡೆಯುವ ಪಾಯಸ ಸೇವೆಯನ್ನು ಪ್ರತಿ ಗುರುವಾರ ನೀಡುವುದರ ಬಗ್ಗೆ ಮಕ್ಕಳಿಗೆ ಸಿಹಿ ಸುದ್ದಿಯನ್ನು ನೀಡಿದರು ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಸಂತೋಷ್ ಶೆಟ್ಟಿ , ಗೌರವ ಶಿಕ್ಷಕಿಯರಾದ ಗಂಗಾ, ಮಮತಾ,ಅನುರಾಧ,ಕವಿತಾ, ಸೌಜನ್ಯ ಹಾಗೂ ಅಡುಗೆ ಸಿಬ್ಬಂದಿ ಪ್ರೇಮಾ , ಸಾಧನಾ
ಅಂಗನವಾಡಿ ಕಾರ್ಯಕರ್ತೆ ಮಾಲತಿ .ಆರ್.ಶೆಟ್ಟಿ ಮತ್ತು ಅನಿತಾ ಮತ್ತು ಶಾಲಾ ಆಡಳಿತ ಮಂಡಳಿಯ ಪ್ರಶಾಂತ್ ಪೂಜಾರಿ ಮತ್ತು ಶ್ರೀ ರವಿ ಶೆಟ್ಟಿ ಉಪಸ್ಥಿತರಿದ್ದರು.



Related posts

ಮೂಲ್ಕಿ ಬ್ರಹ್ಮಶ್ರೀ ನಾರಾಯಣಗುರು ಜನ್ಮದಿನದ ಪ್ರಯುಕ್ತ ಭವ್ಯ ಶೋಭಾಯಾತ್ರೆ

Mumbai News Desk

ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಮಹಾ ಸಂಕಲ್ಪದ 19ನೇ ದಿನ – ಕಾಪು ಶ್ರೀ ಹಳೆ ಮಾರಿಗುಡಿಗೆ ಪ್ರದಕ್ಷಿಣೆ.

Mumbai News Desk

ಅದ್ಧೂರಿಯಾಗಿ ನಡೆದ ಮಂಗಳೂರು ದಸರಾ; ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ

Mumbai News Desk

ಶ್ರೀ ಕ್ಷೇತ್ರ ದ್ವಾರಕಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ 108 ಕ್ಷೇತ್ರ ಪ್ರದಕ್ಷಿಣೆಗೆ ಚಾಲನೆ.

Mumbai News Desk

ಪಡುಬಿದ್ರಿ ಬ್ರಹ್ಮಸ್ಥಾನದಲ್ಲಿ ಅನಂದ ಶೆಟ್ಟಿ ಎಕ್ಕಾರ್ ಕುಟುಂಬಿಕರಿಂದ ಡಕ್ಕೆಬಲಿ ಸೇವೆ

Mumbai News Desk

ಮುದ್ರಾಡಿ ಪ್ರೌಢಶಾಲೆ: ಉತ್ತಮ ಶ್ರೇಣಿ ಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಗೌರವ , ನಿವೃತ್ತ ಮುಖ್ಯ ಶಿಕ್ಷಕಿಗೆ ಸಮ್ಮಾನ

Mumbai News Desk