July 23, 2026
Mumbai News Kannada
ಪ್ರಕಟಣೆ

ಜು.7 ರಂದು ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ) ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ ಉಚಿತ ಪುಸ್ತಕ ವಿತರಣೆ ಹಾಗೂ ಸದಸ್ಯರ ನೋಂದಣಿ ಕಾರ್ಯಕ್ರಮ







ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ) ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ ಡೊಂಬಿವಲಿ ಮತ್ತು ಕಲ್ಯಾಣ ಪರಿಸರದ ಸಂಘದ ಸದಸ್ಯರ ಮಕ್ಕಳಿಗಾಗಿ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಜು. 7 ರಂದು ರವಿವಾರ ಮುಂಜಾನೆ 9.30 ಗಂಟೆಗೆ ಮೊಗವೀರ ವ್ಯವಸ್ಥಾಪಕ ಮಂಡಳಿ, ವೇದ ಬ್ರಹ್ಮ ಬಿಲ್ಡಿಂಗ್, 2ನೇ ಮಾಳಿಗೆ, ಲಿಜ್ಜತ್ ಪಾಪಡ್‌ನ ಮೇಲೆ, ಎಂ ಜಿ ರೋಡ್, ಡೊಂಬಿವಲಿ ಪಶ್ಚಿಮ ಇಲ್ಲಿ ಏರ್ಪಡಿಸಲಾಗಿದೆ. ವಿದ್ಯಾರ್ಥಿಗಳು ಅರ್ಜಿ ಪತ್ರ (ಫಾರ್ಮ್) ಅನ್ನು ತುಂಬಿಸಿ ಆಧಾರ್‌ಕಾರ್ಡ್‌ ಮತ್ತು ಮಾರ್ಕ್‌ಕಾರ್ಡನ್ನು (ಕೈರಾಕ್ಸ್) ಅರ್ಜಿ ಪತ್ರದ ಜೊತೆಗೆ ಲಗತ್ತೀಕರಿಸಿ ಸಂಘದ ಕಚೇರಿಗೆ ಜೂ.30 ರ ಒಳಗೆ ತಲುಪಿಸಬೇಕಾಗಿ ವಿನಂತಿಸಲಾಗಿದೆ. ದನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಮೊಗವೀರ ಮಹಾಜನ ಸೇವಾ ಸಂಘದ ಸದಸ್ಯತ್ವವನ್ನು ಪಡೆಯುವ ಸದಸ್ಯರಾಗಿ ಸಹಕರಿಸಬೇಕಾಗಿ ಕೂಡ ವಿನಂತಿಸಲಾಗಿದೆ.

ಸಂಘದ ಕಚೇರಿಯು ಜೂ. 24 ರಿಂದ ಪ್ರತಿನಿತ್ಯ ಸಂಜೆ 6 ಗಂಟೆಯಿಂದ 8.30 ಗಂಟೆಯವರೆಗೆ ಹಾಗೂ ಜೂ. 23 ಮತ್ತು ಜೂ.30 ರ ರವಿವಾರ ಮುಂಜಾನೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಅರ್ಜಿ ಸ್ವೀಕರಿಸಲು ತೆರೆದಿಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಂತೋಷ ಪುತ್ರನ್ – 9930023998, ರಾಜು ಮೊಗವೀರ ತಗ್ಗರ್ಸೆ – 9594299593, ಆನಂದ್ ಹೆಮ್ಮಾಡಿ 7400202963 ಮತ್ತು ನಿಶಾ ಮಂಡನ್ – 9967371724 ಕ್ಕೆ ಸಂಪರ್ಕಿಸಬೇಕಾಗಿ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.



Related posts

ಡಿ. 03. ಥಾಣೆಯಲ್ಲಿ ಪ್ರಸಾದ್ ಪೂಜಾರಿ ಕಲ್ಯಾ ಇವರ ಸೇವೆಯಲ್ಲಿ ಮಂತ್ರ ದೇವತೆಯ 6ನೇ ವಾರ್ಷಿಕ ಪೂಜೆ ಹಾಗೂ ನೇಮೋತ್ಸವ

Mumbai News Desk

ಆದಿ ಕಿಲ್ಲಾಡಿ ಶ್ರೀ ಧೂಮಾವತಿ ಹಾಗೂ ಪರಿವಾರ ದೈವಗಳ ದೈವಸ್ಥಾನ, ಕಿಲ್ಪಾಡಿ, ಮೂಲ್ಕಿ : ಫೆ. 7ಕ್ಕೆ. ಸಿರಿಸಿಂಗಾರದ ನೇಮೋತ್ಸವ

Mumbai News Desk

ಬಂಟರ ಸಂಘ ಮುಂಬಯಿ ಅಂಧೇರಿ – ಬಾಂದ್ರಾ ಪ್ರಾದೇಶಿಕ ಸಮಿತಿ ಮಾ 30: ಮಾತಾ ಕಿ ಚೌಕಿ ಕಾರ್ಯಕ್ರಮ.

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ, ಥಾಣೆ : ಫೆಬ್ರವರಿ 14 ರಂದು 19ನೇ ವರ್ಷದ ಶ್ರೀ ಶನೀಶ್ವರ ಮಹಾಪೂಜೆ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ: ಡಿಸೇಂಬರ್ 15ರಂದು ಮಾಸಿಕ ಸಂಕ್ರಮಣ ಪೂಜೆ

Mumbai News Desk

ಜ. 24/25/26 : ಬಿಲ್ಲವರ ಎಸೋಸಿಯೇಷನ್ ಮುಂಬಯಿ ಇದರ ಸಾಂಸ್ಕೃತಿಕ ಉಪ ಸಮಿತಿಯ ಆಶ್ರಯದಲ್ಲಿ ‘ ಶ್ರೀ ಗುರು ನಾರಾಯಣ ತುಳು ನಾಟಕ ಸ್ಪರ್ಧೆ ‘

Mumbai News Desk