28.4 C
Mumbai
March 7, 2026
Mumbai News Kannada
ಸುದ್ದಿ

ಖ್ಯಾತ ಸಾಹಿತಿ ಕಮಲ ಹಂಪನಾ ಇನ್ನಿಲ್ಲ





ಹಿರಿಯ ಸಾಹಿತಿ, ಲೇಖಕಿ ಡಾ. ಕಮಲ ಹಂಪನಾ (89) ಅವರು ಇಂದು (ಜೂನ್ 22) ಹೃದಯಘಾತದಿಂದ ಮೃತ ಪಟ್ಟಿದ್ದಾರೆ.
ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತಿದ್ದ ಅವರಿಗೆ ಶುಕ್ರವಾರ ರಾತ್ರಿ 10 ಗಂಟೆಗೆ ಹೃದಯಘಾತವಾಗಿತ್ತು, ಬಳಿಕ ಅವರನ್ನು ಎಂ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾಜಾಜಿ ನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬಳಿಕ ಅವರ ಇಚ್ಛೆಯಂತ್ತೆ ರಾಮಯ್ಯ ಮೆಡಿಕಲ್ ಕಾಲೇಜ್ ಗೆ ದೇಹದಾನ ಮಾಡಲಾಗುವುದು.ಅವರು ಪತಿ ಸಾಹಿತಿ, ಸಂಶೋಧಕ ಹಂಪ ನಾಗರಾಜಯ್ಯ , ಇಬ್ಬರು ಪುತ್ರಿ, ಒಬ್ಬ ಪುತ್ರನನ್ನು ಅಗಲಿರುವರು.


ಮೈಸೂರು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪಿಎಚ್ ಡಿ ಪದವಿ ಪಡೆದ ಅವರು, ತಮ್ಮ ಅಧ್ಯಯನ, ಅಧ್ಯಾಪನ ಲೇಖನ,ಭಾಷಣ ಮತ್ತು ಸಂಶೋಧನೆಗಳಿಂದ 60 ವರ್ಷಗಳ ಕಾಲ ಸಾಹಿತ್ಯ ಕ್ಷೇತ್ರದಲ್ಲಿ ಅವಿರತವಾಗಿ ಕೃಷಿ ಮಾಡುತ್ತಾ ಬಂದಿರುವರು. ಕಮಲ ಹಂಪನಾ ಅವರು ಸಮಕಾಲಿನ ಕನ್ನಡ ಸಾಹಿತ್ಯದ ಹಿರಿಯ ಬರಹಗಾರ್ತಿ.
ಅವರ ಸಮಗ್ರ ಸಾಹಿತ್ಯವನ್ನು ಒಳಗೊಂಡ 9 ಬ್ರಹತ್ ಸಂಪುಟಗಳು ಹೊರಬಂದಿವೆ,ಸಂಶೋಧನೆ ಅವರ ಮೊದಲ ಆಯ್ಕೆಯಾಗಿತ್ತು. ಅವರು ಬೆಂಗಳೂರಿನ ಮಹಾರಾಣಿ ಕಾಲೇಜ್ ನಲ್ಲಿ ಪ್ರಿನ್ಸಿಪಾಲ ಆಗಿ ಕರ್ತವ್ಯ ನಿರ್ವಹಸಿ ನಿವೃತ್ತರಾಗಿದ್ದರು.


ಮೂಡುಬಿದ್ರಿಯಲ್ಲಿ ನಡೆದ 71ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಅವರು ವಹಿಸಿದ್ದರು.
ಅವರಿಗೆ ಹಂಪಿ ವಿಶ್ವವಿದ್ಯಾಲಯ ನಾಡೋಜ ಪ್ರಶಸ್ತಿ ನೀಡಿದರೆ, ದಾನ ಚಿಂತಮಣಿ ಅತಿಮಬ್ಬೆ ಪ್ರಶಸ್ತಿಯನ್ನು ಅವರು ಪಡೆದಿದ್ದರು.



Related posts

ನ್ಯಾಯವಾದಿ ಬಿ. ಕೆ. ಸದಾಶಿವ ನೋಟರಿ ಪಬ್ಲಿಕ್ ಆಗಿ ನೇಮಕ

Mumbai News Desk

ಶ್ರೀ ಶಂಕರಪುರ ಕ್ಷೇತ್ರದಲ್ಲಿ ಭಕ್ತರ ದುಃಖ ,ನೋವು ಕಷ್ಟಗಳನ್ನು ಸ್ವೀಕರಿಸುವ ಪಾನ ಪ್ರಿಯ ಕಾಲಭೈರವ ಸ್ವಾಮಿ.(ಮೇ 19ರಂದು ನಡೆದ ಘಟನೆಯಾದರೂ ಏನು )

Mumbai News Desk

ಕಾಂಗ್ರೆಸ್ ಗೆ ಕೈ ಕೊಟ್ಟ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ

Mumbai News Desk

ಒಕ್ಕೂಟದ ಮೂಲ್ಕಿಯ ನಿವೇಶನದಲ್ಲಿ ಕಟ್ಟಡ ನಿರ್ಮಿಸಲು ಸರಕಾರದಿಂದ ಅನುಮತಿ

Mumbai News Desk

ಕರ್ನಾಟಕ : ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ.

Mumbai News Desk

ಕರ್ನಿರೆ ಸುವರ್ಣ ಪ್ರತಿಷ್ಠಾನದಿಂದ ಉದ್ಯಮಿ ಕರ್ನಿರೆ ವಿಶ್ವನಾಥ ಶೆಟ್ಟಿ   ಸಮ್ಮಾನ 

Mumbai News Desk