30.5 C
Mumbai
June 8, 2026
Mumbai News Kannada
ಮುಂಬಯಿ

ಬಂಟರ ಸಂಘ ಮುಂಬಯಿ, ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನವನದಲ್ಲಿ ಗಿಡ ನೆಡುವ ಕಾರ್ಯಕ್ರಮ





ಮುಂಬಯಿ : ಬಂಟರ ಸಂಘ ಮುಂಬಯಿ, ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಪ್ರೇಮನಾಥ ಶೆಟ್ಟಿ ಕೊಂಡಾಡಿ ಯವರ ಉಪಸ್ಥಿತಿಯಲ್ಲಿ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುನಿತಾ ಎನ್. ಹೆಗ್ಡೆ, ಯವರ ನೇತೃತ್ವದಲ್ಲಿ, ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನವನದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಜೂನ್ 17, ರಂದು ನಡೆಸಲಾಯಿತು. ಸಮಿತಿಯ ಸಲಹೆಗಾರರಾದ ಶೈಲಜಾ ಶೆಟ್ಟಿಯವರು ಅರಣ್ಯಾಧಿಕಾರಿಯವರಿಂದ ಅನುಮತಿ ಪಡೆದು, ಗಿಡಗಳನ್ನು ನೆಡಲು ಸ್ಥಳ ಮಂಜೂರು ಮಾಡಿದರು. 25 ಕ್ಕೂ ಅಧಿಕ ಸಸಿಗಳನ್ನು ಯಶಸ್ವಿಯಾಗಿ ನೆಡಲಾಯಿತು.

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುನಿತಾ ಎನ್. ಹೆಗ್ಡೆ, ಈ ಬಗ್ಗೆ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾ ನಮ್ಮ ತಂಡವು ಭವಿಷ್ಯದ ಪೀಳಿಗೆಗಾಗಿ ಇಂತಹ ಕೊಡುಗೆಯನ್ನು ನೀಡಿದ್ದು, ಇನ್ನೆರಡು ತಿಂಗಳಲ್ಲಿ ನಾವು ನಮ್ಮ ಗಿಡಗಳನ್ನು ಅದರ ಬೆಳವಣಿಗೆಯೊಂದಿಗೆ ನೋಡಲಿದ್ದೇವೆ ಎಂದರು.

ಮಹಿಳಾ ವಿಭಾಗದ ಎಲ್ಲಾ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಗಿಡ ನೆಟ್ಟು ಪರಿಸರವನ್ನು ಉತ್ತಮಗೊಳಿಸುವಲ್ಲಿ ಮಹಿಳಾ ವಿಭಾಗದ ಸರಿತಾ ಶೆಟ್ಟಿ , ಶುಭಾಂಗಿ ಶೆಟ್ಟಿ, ಯೋಗಿನಿ ಶೆಟ್ಟಿ ,ಪ್ರಭಾವತಿ ಶೆಟ್ಟಿ ಯವರೊಂದಿಗೆ ಇತರ ಎಲ್ಲಾ ಸದಸ್ಯರು ಸಹಕರಿಸಿದರು.



Related posts

ಘಾಟ್ಕೋಪರ್ ಶ್ರೀ ಭವಾನಿ ಶನೀಶ್ವರ ದೇವಸ್ಥಾನದ 45ನೇ ವಾರ್ಷಿಕ ಮಹಾಪೂಜಾ ಉತ್ಸವ

Mumbai News Desk

ವಿದೂಶಿ ಗೀತಾ ವೇದ್ (ಸಾಲ್ಯಾನ್) ರ ನಟನಾ ನೃತ್ಯ ಅಕಾಡೆಮಿಯ 11ನೇ ವಾರ್ಷಿಕೋತ್ಸವ.

Mumbai News Desk

ಬಿ. ಎಸ್. ಕೆ.ಬಿ. ಎಸೋಸಿಯೇಶನ್, ಸಾಯನ್ ಶತಮಾನೋತ್ಸವಾಚರಣೆ ಸಮಾರೋಪ, ಡಾ. ಸುರೇಶ್ ಎಸ್ ರಾವ್ ಅವರಿಗೆ “ಗೋಕುಲ ರತ್ನ” ಪ್ರಶಸ್ತಿ ಪ್ರದಾನ

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬೈ ಬೊರಿವಲಿ-ದಹಿಸರ್ ಸ್ಥಳೀಯ ಕಚೇರಿ ವತಿಯಿಂದ ಗಣರಾಜ್ಯೋತ್ಸವ ಆಚರಣೆ

Mumbai News Desk

ಸಾಂತಾಕ್ರೂಜ್ ಪೂರ್ವದ ಪೇಜಾವರ ಮಠದಲ್ಲಿ  ಶ್ರೀಕೃಷ್ಣ ಜನ್ಮಾಷ್ಟಮಿ, ವಿಟ್ಲಪಿಂಡಿ -ಮೊಸರು ಕುಡಿಕೆ ಸಂಭ್ರಮ, ಭಕ್ತಿ ಸಂಗೀತ ಕಾಠ್ಯಕ್ರಮ,

Mumbai News Desk

ಮೀರಾ -ದಹಣು ಬಂಟ್ಸ್ ವತಿಯಿಂದ ಆಟಿದ ಕೂಟ -2024 ಕಾರ್ಯಕ್ರಮ

Mumbai News Desk