27.7 C
Mumbai
July 23, 2026
Mumbai News Kannada
ಕರಾವಳಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮರಬಳ್ಳಿ, ಹೊನ್ನಾವರ : ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ







ಹೊನ್ನಾವರದ ಮರಬಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕಳೆದ 20 ವರ್ಷಗಳಿಂದ ನೋಟ್ ಬುಕ್ ಗಳನ್ನು ಉಚಿತವಾಗಿ ಮುಂಬಯಿ ಉದ್ಯಮಿ ಮಹಾದೇವ ಪೂಜಾರಿ ಕೊಡೇರಿ ಯವರು ನೀಡುತ್ತಾ ಬಂದಿದ್ದು ಈ ವರ್ಷವು ಕೂಡ ಉಚಿತ ಪುಸ್ತಕ ನೀಡಿರುವುದನ್ನು ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳಿಗೆ ವಿತರಿಸಿದರು.


ಮಹಾದೇವ ಪೂಜಾರಿ ಯವರು ಪ್ರತಿ ವರ್ಷ ಈ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ನೀಡುವುದಲ್ಲದೆ ಐದು, ಆರು ಮತ್ತು ಏಳನೇ ತರಗತಿಯಲ್ಲಿ ಅತ್ಯಧಿಕ ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಾ ಬಂದಿರುತ್ತಾರೆ.


ಶಾಲಾ ಮುಖ್ಯೋಪಾಧ್ಯಾಯರಾದ ನಾಗಪ್ಪ ನಾಯ್ಕ ಅವರ ಅಧ್ಯಕ್ಷತೆ ಹಾಗೂ ಸಹ ಶಿಕ್ಷಕರ ಉಪಸ್ಥಿತಿಯಲ್ಲಿ ಜರಗಿದ ಸರಳ ಸಮಾರಂಭದಲ್ಲಿ ಸರ್ವ ವಿದ್ಯಾರ್ಥಿಗಳಿಗೂ ಪುಸ್ತಕ ವಿತರಿಸುವುದರೊಂದಿಗೆ ಕಳೆದ ಸಾಲಿನ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.



Related posts

 ಕಾಪು ಲೀಲಾಧರ ಶೆಟ್ಟಿ ಸ್ಮರಣಾರ್ಥ ರಕ್ತದಾನ ಶಿಬಿರ,

Mumbai News Desk

ಶಿಬರೂರು ನೂತನ ದ್ವಾರಕ್ಕೆ ಶಿಲಾನ್ಯಾಸ*

Mumbai News Desk

ಕುಲಾಲ  ಸಂಘ ಮುಂಬೈ ಯ  ಕುಲಾಲ ಭವನ ಮಂಗಳೂರು ಬ್ಯಾಂಕ್ವೆಟ್ ಹಾಲ್ ಗೆ ಮುಹೂರ್ತ,

Mumbai News Desk

ಯಕ್ಷ ಧ್ರುವ ಕೇಂದ್ರ ಮಹಿಳಾ ಘಟಕದ ವಾರ್ಷಿಕೋತ್ಸವ

Mumbai News Desk

ಉಳಿಯ ಕ್ಷೇತ್ರ ಬ್ರಹ್ಮಕಲಶೋತ್ಸವಕ್ಕೆ50,000 ರೂ. ದೇಣಿಗೆ ಘೋಷಣೆ

Mumbai News Desk

ಸಾಕ್ಷಿ ಆರ್ ಶೆಟ್ಟಿ ಶೇ.95.15 ಅಂಕ

Mumbai News Desk