29.1 C
Karnataka
April 1, 2025
ಕರಾವಳಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮರಬಳ್ಳಿ, ಹೊನ್ನಾವರ : ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ

ಹೊನ್ನಾವರದ ಮರಬಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕಳೆದ 20 ವರ್ಷಗಳಿಂದ ನೋಟ್ ಬುಕ್ ಗಳನ್ನು ಉಚಿತವಾಗಿ ಮುಂಬಯಿ ಉದ್ಯಮಿ ಮಹಾದೇವ ಪೂಜಾರಿ ಕೊಡೇರಿ ಯವರು ನೀಡುತ್ತಾ ಬಂದಿದ್ದು ಈ ವರ್ಷವು ಕೂಡ ಉಚಿತ ಪುಸ್ತಕ ನೀಡಿರುವುದನ್ನು ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳಿಗೆ ವಿತರಿಸಿದರು.


ಮಹಾದೇವ ಪೂಜಾರಿ ಯವರು ಪ್ರತಿ ವರ್ಷ ಈ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ನೀಡುವುದಲ್ಲದೆ ಐದು, ಆರು ಮತ್ತು ಏಳನೇ ತರಗತಿಯಲ್ಲಿ ಅತ್ಯಧಿಕ ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಾ ಬಂದಿರುತ್ತಾರೆ.


ಶಾಲಾ ಮುಖ್ಯೋಪಾಧ್ಯಾಯರಾದ ನಾಗಪ್ಪ ನಾಯ್ಕ ಅವರ ಅಧ್ಯಕ್ಷತೆ ಹಾಗೂ ಸಹ ಶಿಕ್ಷಕರ ಉಪಸ್ಥಿತಿಯಲ್ಲಿ ಜರಗಿದ ಸರಳ ಸಮಾರಂಭದಲ್ಲಿ ಸರ್ವ ವಿದ್ಯಾರ್ಥಿಗಳಿಗೂ ಪುಸ್ತಕ ವಿತರಿಸುವುದರೊಂದಿಗೆ ಕಳೆದ ಸಾಲಿನ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.

Related posts

ಇತಿಹಾಸ ಪ್ರಸಿದ್ಧ ಕಾಪು ಪಿಲಿಕೋಲ

Mumbai News Desk

ಶಿಬರೂರು ನೂತನ ದ್ವಾರಕ್ಕೆ ಶಿಲಾನ್ಯಾಸ*

Mumbai News Desk

ಕೊಡೇರಿಯಲ್ಲಿ ಜರಗಿದ ಅಂಚೆ ಜನ ಸಂಪರ್ಕ ಅಭಿಯಾನ

Mumbai News Desk

ನ.21ರಂದು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ

Mumbai News Desk

“ಕಲಾವಿದರನ್ನು ಗುರುತಿಸುವ ರಂಗಚಾವಡಿಯ ಉದ್ದೇಶ ಶ್ಲಾಘನೀಯ” -ಕನ್ಯಾನ ಸದಾಶಿವ ಶೆಟ್ಟಿ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿರುದ್ಧ ಕೀಳು ಭಾಷೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟವರ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Mumbai News Desk