32 C
Mumbai
March 7, 2026
Mumbai News Kannada
ಪ್ರಕಟಣೆ

ಮಕರ ಜ್ಯೋತಿ ಫೌಂಡೇಶನ್ ಸಯನ್ ಕೋಲಿವಾಡ – ಜೂನ್ 30ರಂದು ಪುಸ್ತಕ ವಿತರಣೆ, ಅಭಿನಂದನಾ ಕಾರ್ಯಕ್ರಮ





ಸಯನ್ -ಕೊಲಿವಾಡ ಪರಿಸರದ ಧಾರ್ಮಿಕ, ಸಾಮಾಜಿಕ ಸಂಸ್ಥೆ ಮಕರ ಜ್ಯೋತಿ ಫೌಂಡೇಶನ್ ಆಶ್ರಯದಲ್ಲಿ ನೋಟ್ ಬುಕ್ ವಿತರಣೆ ಹಾಗೂ ಅಭಿನಂದನಾ ಕಾರ್ಯಕ್ರಮ ಜೂನ್ 30ರಂದು, ಸಂಜೆ 6.30ಕ್ಕೆ, ಅಂಟಾಪ್ ಹಿಲ್ ನ ಎನ್ ಎಸ್ ಕ್ಲಾಸ್ ನಲ್ಲಿ ಜರಗಲಿದೆ. ಮುಖ್ಯ ಅತಿಥಿಗಳಾಗಿ ಕನ್ನಡ ಸಂಘ ಸಯನ್ ನ ಉಪಾಧ್ಯಕ್ಷ ಸದಾಶಿವ ಶೆಟ್ಟಿ, ಸಂಸ್ಥಾಪಕ ಹ್ಯಾರಿ ಸೀಕ್ವೆರ, ಸಂಘದ ಗೌರವಾಧ್ಯಕ್ಷರಾದ ಮಾಧವ ಮೇಸ್ತ ಶಿರೂರು, ಅಸೋಸಿಯೇಶನ್ ಆಫ್ ಇಂಡಿಯಾ ಕಾಂಟ್ರಾಕ್ಟ್ ನ ಅಧ್ಯಕ್ಷರಾದ ಸಂತೋಷ ಜಾಧವ, ಸಂಘದ ಸದಸ್ಯರಾದ ಬಾಲಚಂದ್ರ ದೇವಾಡಿಗ ಹಾಗೂ ಈಶ್ವರ ದೇವಾಡಿಗ, ಸಾಹಿತಿ ಮತ್ತು ನಾಟಕ ಕಲಾವಿದರು
ಗೋಪಾಲ್ ತ್ರಾಸಿ ಆಗಮಿಸಲಿರುವರು.


ಈ ಸಂಧರ್ಭ ಕರುನಾಡ ಸಿರಿ ಸಂಸ್ಥೆಯ ಅಧ್ಯಕ್ಷರಾದ ಬಾಲಚಂದ್ರ ದೇವಾಡಿಗ ಅವರನ್ನು ಸನ್ಮಾನಿಸಲಾಗುವುದು. ಹಾಗೂ ಈ ಬಾರಿಯ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಪನಸೂಲ್ ದೇವಾಡಿಗ ಹಮು ಗೌಡ ಹಾಗೂ ಧ್ಯಾನ್ ಗೌಡ ಇವರನ್ನು ಅಭಿನಂದಿಸಲಾಗುವುದು.
ಶ್ರೀಮತಿ ಮಾಲಾ ಮಾಧವ ಮೇಸ್ತ ಕಾರ್ಯಕ್ರಮ ನಿರೂಪಣೆ ಮಾಡಲಿರುವರು.
ಪರಿಸರದ ತುಳು – ಕನ್ನಡಿಗರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವಂತೆ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ವಿನಂತಿಸಿದ್ದಾರೆ.



Related posts

ಫೆ. 10ಕ್ಕೆ ಸಚ್ಚೇರಿಪೇಟೆಯಲ್ಲಿ ಸಾರ್ವಜನಿಕ ಶನೈಶ್ಚರ ಪೂಜೆ – ಸಂತ ಸಮಾಗಮ

Mumbai News Desk

ಶ್ರೀ ರಜಕ ಸಂಘ ಮುಂಬಯಿ, ಜ.6 ರಂದು ಸಾಮೂಹಿಕ ಶ್ರೀ ಸತ್ಯ ನಾರಾಯಣ ಮಹಾಪೂಜೆ

Mumbai News Desk

ದಹಿಸರ್ ಪೂರ್ವ. ರಾವಲ್ಪಾಡ   ಶ್ರೀ ದುರ್ಗಾಪರಮೇಶ್ವರಿ -ಶನೀಶ್ವರ ದೇವಸ್ಥಾನ, ಜೂ 6 ರಂದು ಶ್ರೀ ಶನಿ ಜಯಂತಿ ಆಚರಣೆ.

Mumbai News Desk

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್ ಸ್ಥಳೀಯ ಮಹಿಳಾ ವಿಭಾಗ. ಅ. 4 ರಂದು ”ಆಟಿದ ಒಂಜಿ ಪೊರ್ಲು” ಕಾರ್ಯಕ್ರಮ.

Mumbai News Desk

ಇತಿಹಾಸ ಪ್ರಸಿದ್ಧ ಕಾಪು ಪಿಲಿಕೋಲಕ್ಕೆ ದಿನ ನಿಗದಿ

Mumbai News Desk

ಸಾಂತಾಕ್ರೂಸ್ :  ಶ್ರೀ ಮಂತ್ರ ದೇವಿ ದೇವಸ್ಥಾನದಲ್ಲಿ ಅ 3 ರಿಂದ 11 ವರೆಗೆ ನವರಾತ್ರಿ ಉತ್ಸವ.

Mumbai News Desk