30.9 C
Mumbai
June 8, 2026
Mumbai News Kannada
ಸುದ್ದಿ

ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ್ ರಾವ್ ನಿಧನ






ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ್ ರಾವ್ ಶುಕ್ರವಾರ ಹೃದಯಘಾತದಿಂದ ನಿಧನ ಹೊಂದಿದರು. ಅವರಿಗೆ 76 ವರ್ಷ ವಯಸಾಗಿತ್ತು.


1948ರ ಜುಲೈ 23ರಂದು ಕಾಸರಗೋಡು ಜಿಲ್ಲೆಯ ನಾಯ್ಕಪುವಿನಲ್ಲಿ ಜನಿಸಿದ ಅವರು, 1962ರಲ್ಲಿ ಕಲ್ಲಾಡಿ ಕೊರಗ ಶೆಟ್ಟರ ಯಜಮಾನಿಕೆಯ ಕುಂಡಾವು ಮೇಳಕ್ಕೆ ಬಾಲ ಕಲಾವಿದರಾಗಿ ಯಕ್ಷ ರಂಗ ಸೇರಿದ್ದರು.
ಬಳಿಕ ಕೂಡ್ಲು, ಮೂಲ್ಕಿ, ಕರ್ನಾಟಕ ಮತ್ತು ಧರ್ಮಸ್ಥಳ ಮೇಳಗಳಲ್ಲಿ ಒಟ್ಟು 60 ವರ್ಷಗಳ ಕಲಾ ಸೇವೆಗೈದಿರುವರು.


ಕುಂಬ್ಳೆ ಅವರು ತೆಂಕುತಿಟ್ಟಿನ ಅಪ್ರತಿಮ ಸ್ತ್ರಿ ವೇಷದಾರಿಯಾಗಿ ಗಮನಸೆಳೆದಿದ್ದರು. ಅವರ ದಮಯಂತಿ, ದಾಕ್ಷಯಯಣಿ, ಲಕ್ಷ್ಮೀ, ಸುಭದ್ರೆ, ಸತ್ಯಭಾಮ, ಪ್ರಮೀಳಾ, ಶಶಿಪ್ರಭೆ ಅವರಿಗೆ ದೊಡ್ಡ ಮಟ್ಟದ ಹೆಸರು ಮಾಡಿತ್ತು. ಅವರ ಅಂಬಾ ರೂಪ ರೇಖಾ ಪ್ರಸಂಗದ ರಂಬೆಯ ಪಾತ್ರದ ಅಭಿನಯವನ್ನು ಯಕ್ಷ ಪ್ರೇಮಿಗಳು ಈಗಲೂ ನೆನಪಿಸುತ್ತಾರೆ.
ಪುರುಷ ವೇಷದಲ್ಲಿ ಈಶ್ವರ, ಲಕ್ಷ್ಮಣ, ಮತ್ತು ವಿಷ್ಣು ಪಾತ್ರಗಳೂ ಅವರಿಗೆ ಖ್ಯಾತಿ ತಂದುಕೊಟ್ಟಿತ್ತು.



Related posts

‘ಜಯಲಕ್ಷ್ಮೀ ಎಸ್ ಜೋಕಟ್ಟೆಯವರ ಕವಿತೆಗಳು’ ಕೃತಿ ಬಿಡುಗಡೆ

Mumbai News Desk

ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್; ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್

Mumbai News Desk

ವಸಾಯಿ : ಹರಿಶ್ಚಂದ್ರ ಜಿ. ಕುಂದರ್ ಅವರ ಅಕಾಲಿಕ ಮರಣ

Mumbai News Desk

ಗನ್​ನಿಂದ ಕಾಲಿಗೆ ಶೂಟ್ ಮಾಡಿಕೊಂಡ ನಟ ಗೋವಿಂದ, ಐಸಿಯುಗೆ ದಾಖಲು

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿ – ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ, ಧಾರ್ಮಿಕ ಸಭೆ.

Mumbai News Desk

ಅನಿತಾ ಪಿ. ತಾಕೊಡೆಯವರಿಗೆ ಕರ್ನಾಟಕ ಲೇಖಕಿಯರ ಸಂಘದ ದತ್ತಿ ಪ್ರಶಸ್ತಿ ಪ್ರದಾನ

Mumbai News Desk