September 6, 2026
Mumbai News Kannada
ಸುದ್ದಿ

ಕರ್ನಿರೆ ಫೌಂಡೇಷನ್ ವತಿಯಿಂದ 27ನೇ ವರ್ಷದ ಪುಸ್ತಕ ವಿತರಣಾ ಕಾರ್ಯಕ್ರಮ,





ಕರ್ನಿರೆ ಗ್ರಾಮದ ವಿದ್ಯಾರ್ಥಿಗಳ ಶಿಕ್ಷಣಕ್ಕೆ  ಸಹಕಾರವಿದೆ: ಕರ್ನಿರೆ ವಿಶ್ವನಾಥ್ ಶೆಟ್ಟಿ,

       ಕಿನ್ನಿಗೋಳಿ: ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣಕ್ಕೆ ಯಾವುದೇ ರೀತಿಯ ತೊಂದರೆ ಆಗಬಾರದು ಎಂಬ ಕಾರಣಕ್ಕಾಗಿ ಕಳೆದ 27 ವರ್ಷಗಳಿಂದ ಇಲ್ಲಿನ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯನ್ನು ಮಾಡುತ್ತಿದ್ದೇನೆ ಎಂದು ಕರ್ನಿರೆ ಫೌಂಡೇಷನ್ ಪ್ರವರ್ತಕ ಕರ್ನಿರೆ ವಿಶ್ವನಾಥ ಶೆಟ್ಟಿ ಹೇಳಿದರು,

  ಅವರು ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾರ್ಥಮಿಕ ಶಾಲೆ ಕರ್ನಿರೆ ಇಲ್ಲಿ ಕರ್ನಿರೆ ಫೌಂಡೇಷನ್ ವತಿಯಿಂದ ನಡೆದ ಪುಸ್ತಕ ವಿತರಣಾ ಸಮಾರಂಭದಲ್ಲಿ ಮಾತನಾಡಿ ಸರಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಇಂದು ದೇಶ ವಿದೇಶದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ, ವಿದ್ಯಾರ್ಥಿಗಳಲ್ಲಿ ನಿರ್ದಿಷ್ಟ ಗುರಿ ಇದ್ದರೆ ಗುರಿ ತಲುಪಲು ಸಾದ್ಯ, ಶಿಕ್ಷಣಕ್ಕೆ ಸಹಕಾರ ನೀಡುವ ಬಗ್ಗೆ ನನ್ನ ತಾಯಿಗೂ ಸಂತಸವಿತ್ತು, ಅವರ ಆಸೆಯಂತೆ ನಿರಂತರ ಶಿಕ್ಷಣಕ್ಕೆ ನೀಡುವ ಸಹಕಾರವನ್ನು ಮುಂದುವರಿಸುತ್ತೇನೆ ಎಂದರು

        ಉದ್ಯಮಿ ಕೆ.ಎಸ್ ಅಶ್ರಪ್ ಮಾತನಾಡಿ ನಾನು ಇದೇ ಶಾಲೆಯಲ್ಲಿ ಕಲಿತವನು, ತಂದೆ ನನಗೆ ಉತ್ತಮ ಶಿಕ್ಷಣ ಕೊಟ್ಟ ಕಾರಣ ನಮ್ಮ‌ಭವಿಷ್ಯವನ್ನು ರೂಪಿಸಲು ಸಾದ್ಯವಾಯಿತು, ತಂದೆ ತಾಯಿ ಮಕ್ಕಳಿಗೆ ಶಿಕ್ಷಣ ಕೊಟ್ಟರೆ ಅದೇ ದೊಡ್ಡ ಆಸ್ತಿ, ಬೇರೆ ಆಸ್ತಿ ಬೇಡ, ಶಿಕ್ಷಣಕ್ಕೆ ನನ್ನಿಂದ ಯಾವುದೇ ಸಹಕಾರ ನೀಡುತ್ತೇನೆ ಎಂದರು. ಕಾರ್ಯಕ್ರಮದಲ್ಲಿ  ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕವನ್ನು ನೀಡಲಾಯಿತು,  ಈ ಸಂದರ್ಭ ಹರಿಶ್ಚಂದ್ರ ಶೆಟ್ಟಿ ಕರ್ನಿರೆಗುತ್ತು, ಗಂಗಾಗಧರ ಎನ್ ಅಮೀನ್ ಕರ್ನಿರೆ , ಮೋಹನ್ ಶೆಟ್ಟಿ, ರವೀಂದ್ರ ಶೆಟ್ಟಿ,  ಬಳ್ಕುಂಜೆ ಪಂಚಾಯತ್ ಸದಸ್ಯರಾದ ಪ್ರಶಾಂತ್ ಶೆಟ್ಟಿ, ವನಜಾ ಕೋಟ್ಯಾನ್,   ಬಳ್ಕುಂಜೆ ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ  ಶೆಟ್ಟಿ, ಸಂಪತ್ ಶೆಟ್ಟಿ ಕರ್ನಿರೆಗುತ್ತು , ಹಿರಿಯ ವಿದ್ಯಾರ್ಥಿ ಸಂಘದ ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಪ್ರಸಾದ್ ಶೆಟ್ಟಿ, ಉದ್ಯಮಿ ವಿಲ್ಸನ್ ಪೆರ್ನಾಂಡಿಸ್, ಉದ್ಯಮಿ ಕೆ.ಎಸ್ ಆಶ್ರಪ್,    ಎಸ್ ಡಿ.ಎಂಸಿ ಅಧ್ಯಕ್ಷೆ ಹೆಮಲತಾ ಮತ್ತಿತರರು ಉಪಸ್ಥಿತರಿದ್ದರು, ಮುಖ್ಯ ಶಿಕ್ಷಕಿ ಜೂಲೆಟ್ ಲೂವಿಸ್  ಸ್ವಾಗತಿಸಿ, ಸಹ ಶಿಕ್ಷಕ ಸಂತೋಷ್ ನಿರೂಪಿಸಿದರು.



Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟ ವತಿಯಿಂದ ಪ್ರತಿಷ್ಠ ತ  ಹೋಟೆಲ್ ಉದ್ಯಮಿ ಶಿವಚಂದ್ರ ಶೆಟ್ಟಿ ದಂಪತಿಗಳಿಗೆ ಸನ್ಮಾನ

Mumbai News Desk

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ,   ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಸರೋಜ ಶೆಟ್ಟಿ ಆಯ್ಕೆ.

Mumbai News Desk

ಫರಂಗಿಪೇಟೆ : ಬಾಲಕ ನಾಪತ್ತೆ ಪ್ರಕರಣ, ನಾಳೆ (ಶನಿವಾರ ) ಫರಂಗಿಪೇಟೆ ಬಂದ್

Mumbai News Desk

ಹ್ಯೂಮನ್ ರೈಟ್ಸ್ ಇಂಟರ್ನ್ಯಾಷನಲ್ ಫೆಡರೇಶನ್ ಮಹಾರಾಷ್ಟ್ರ ರಾಜ್ಯ ಅಧ್ಯಕ್ಷರಾಗಿ ಪತ್ರಕರ್ತ ಯೋಗೇಶ್ ಪುತ್ರನ್ ನೇಮಕ

Mumbai News Desk

ಜೆ. ಬಿ. ನಗರ : ಸುನಂದಾ ಕೇಶವ ಶ್ರೀಯಾನ್ ನಿಧನ

Mumbai News Desk

ಬಟ್ಟೆ ಕುದ್ರು ದುರ್ಗಿ ಶ್ರೀಯಾನ್ ನಿಧನ.

Mumbai News Desk