30 C
Mumbai
September 19, 2026
Mumbai News Kannada
ಸುದ್ದಿ

ಹಿರಿಯ ರಂಗಕರ್ಮಿ, ಚಿತ್ರ ನಿರ್ಮಾಪಕ ಸದಾನಂದ ಸುವರ್ಣ ನಿಧನ





ಹಿರಿಯ ರಂಗ ತಪಸ್ವಿ, ಲೇಖಕ, ಚಿತ್ರ ನಿರ್ಮಾಪಕ
ಸದಾನಂದ ಸುವರ್ಣ ಇಂದು ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದರು, ಅವರಿಗೆ 92 ವರ್ಷ ವಯಸ್ಸಾಗಿತ್ತು.
ಮೂಲತಃ ಮುಲ್ಕಿಯವರಾದ ಸದಾನಂದ ಸುವರ್ಣ ಅವರು ಹಲವು ವರ್ಷಗಳ ಕಾಲ ಮುಂಬೈ ನಲ್ಲಿ ನೆಲೆಸಿದ್ದರು. ಮುಂಬೈಯಲ್ಲಿ ಬಹಳ ಕಷ್ಟದಲ್ಲಿ ವಿದ್ಯಾಭ್ಯಾಸ ಮಾಡಿದ ಸದಾನಂದ ಸುವರ್ಣರು 10 ವರ್ಷಗಳ ಕಾಲ ಖಾಸಾಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡಿದ್ದರು. ಬಳಿಕ ಸಾಹಿತ್ಯ,ರಂಗಭೂಮಿ, ಸಿನಿಮಾಗಳಲ್ಲಿ ಆಸಕ್ತಿ ಬೆಳೆಸಿದ್ದ ಅವರು ಕಳೆದ ಹತ್ತು ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದ್ದರು.
ಕನ್ನಡ ರಂಗಭೂಮಿಯಲ್ಲಿ ಹಲವು ವರ್ಷಗಳ ಸೇವೆ ಸಲ್ಲಿಸಿದ ಸದಾನಂದ ಸುವರ್ಣರ ಉರುಳು, ಕೋರ್ಟ್ ಮಾರ್ಷಲ್, ಡೊಂಕು ಬಾಲದ ನಾಯಕರು, ಧರ್ಮ ಚಕ್ರ, ಸುಳಿ ಅವರಿಗೆ ಬಹಳ ಖ್ಯಾತಿಯನ್ನು ತಂದಿತ್ತು. ಸುವರ್ಣರು ನಿರ್ಮಿಸಿ, ಗಿರೀಶ್ ಕಾಸರವಳ್ಳಿ ನಿರ್ದೇಶಿಸಿದ ಘಟಶ್ರಾದ್ಧ ಸಿನಿಮಾಕ್ಕೆ ಸ್ವರ್ಣ ಕಮಲ ಪ್ರಶಸ್ತಿ ಲಭಿಸಿದೆ, ಹಾಗೂ ಅವರ ಗುಡ್ಡೆದ ಭೂತ ಧಾರಾವಾಹಿ ದೂರದರ್ಶನದಲ್ಲಿ ಪ್ರಸಾರಗೊಂಡು ಜನ ಮೆಚ್ಚುಗೆ ಗಳಿಸಿತ್ತು.
ರಂಗಭೂಮಿಯಲ್ಲಿ ಅತ್ಯಂತ ಕ್ರಿಯಾಶೀಲರಾಗಿದ್ದ ಸುವರ್ಣರು ತಾನು ಬೆಳೆಯುತ್ತಾ ನೂರಾರು ಕಿರಿಯ ಕಲಾವಿದರನ್ನು ಬೆಳೆಸಿದ್ದರು, ಸದಾನಂದ ಸುವರ್ಣರು ಮುಂಬೈ ಹಾಗೂ ಮಂಗಳೂರಿನ ರಂಗಭೂಮಿಗೆ ನೀಡಿದ ಕೊಡುಗೆ ಅನನ್ಯ.
ಅವರು ಗಿರೀಶ್ ಕಾಸರವಳ್ಳಿ, ಪ್ರಕಾಶ್ ರೈ ಅವರಂಥ ಅಪ್ರತಿಮ ಪ್ರತಿಭೆಗಳನ್ನು ಗುರುತಿಸಿ ಅವರ ಪ್ರತಿಭಾ ಪ್ರಧರ್ಶನಕ್ಕೆ ಅವಕಾಶ ನೀಡಿದವರು. ಗಿರೀಶ್ ಕಾಸರವಳ್ಳಿ ನಿರ್ದೇಶಿಸಿದ ಮಾಡಿ ಬಾಲಿವುಡ್ ನ ಖ್ಯಾತ ನಟ ನಸಿರುದ್ಧಿನ್ ಶಾ ನಟಿಸಿದ ಮನೆ ಹಾಗೂ ಕಾಸರಳ್ಳಿ ಅವರ ನಿರ್ದೇಶನದ ಚಾರುಹಾಸನ್ ನಟಿಸಿದ ತಬರನ ಕಥೆ ಸಿನಿಮಾಕ್ಕೆ ಸುವರ್ಣರು ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡಿದ್ದರು, ಅಲ್ಲದೆ ಕುಬಿ ಮತ್ತು ಇಯಲಾ ಸಿನಿಮಾವನ್ನು ನಿರ್ದೇಶನ ಮಾಡಿದ್ದರು.
ಮಂಗಳೂರಿನ ಪುರಭವನದಲ್ಲಿ ಮೃತರ ಅಂತಿಮ ದರ್ಶನ ನಾಳೆ (ಜು. 17)ಮಧ್ಯಾಹ್ನ 1 ರಿಂದ 3 ಗಂಟೆಗೆ ತನಕ ನಡೆಯಲಿದ್ದು, ಬಳಿಕ ಅವರ ಇಚ್ಛೆಯಂತ್ತೆ ದೇಹದಾನ ಮಾಡಲಾಗುವುದು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.



Related posts

ಜುಲೈ 9 : ಗಣೇಶಪುರಿಯಲ್ಲಿ ಸದ್ಗುರು ಶ್ರೀ ನಿತ್ಯಾನಂದ ಸ್ವಾಮಿಗಳ ಮೂರ್ತಿ ಪುನರ್ ಪ್ರತಿಷ್ಠಾಪನೋತ್ಸವ: ಭಕ್ತರಿಗೆ ಅಪೂರ್ವ ದರ್ಶನದ ಸೌಭಾಗ್ಯ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ಮುರಿದು ಬಿದ್ದ ರಥದ ಮೇಲ್ಬಾಗ

Mumbai News Desk

ರಂಗ ನಟ, ಕಲಾ ಪೋಷಕ, ಸಂಘಟಕ ಸದಾಶಿವ ಡಿ ತುಂಬೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ತಶಸ್ತಿ

Mumbai News Desk

ಕವಿ ಗವಿಸಿದ್ದ ಎನ್.ಬಳ್ಳಾರಿ ಸಾಹಿತ್ಯೋತ್ಸವ: ಅನಿತಾ ಪಿ ತಾಕೊಡೆ ಅವರ ಪ್ರಶಸ್ತಿ ವಿಜೇತ ‘ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಲೋಕಾರ್ಪಣೆ, ಕಾವ್ಯ ಪ್ರಶಸ್ತಿ ಪ್ರದಾನ

Mumbai News Desk

ಖಾರ್ ಪೂರ್ವ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿಯಾದ ಯೋಗೇಶ್ ಕೆ. ಹೆಜ್ಮಾಡಿ ಹಾಗೂ ಅವರ ಧರ್ಮಪತ್ನಿಯವರಾದ ಲೀಲಾವತಿ ವೈ. ಹೆಜ್ಮಾಡಿ* ಯವರು ದಾಂಪತ್ಯ ಜೀವನದ ಸುವರ್ಣ ಮಹೋತ್ಸವಕ್ಕೆ ಪಾದಾರ್ಪಣೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ಉಡುಪಿಯಲ್ಲಿ ಜರಗಿದ ಯಶಸ್ವಿ ಸರಣಿ ಕಾರ್ಯಕ್ರಮಗಳು

Mumbai News Desk