July 22, 2026
Mumbai News Kannada
ಸುದ್ದಿ

ಕೊಂಡೆವೂರು ಶ್ರೀಗಳ 21 ನೇ ಚಾತುರ್ಮಾಸ್ಯ ವ್ರತಾಚರಣೆಉಪ್ಪಳ ಜು:    ಕೊಂಡೆವೂರು







 

ನಿತ್ಯಾನಂದ ಯೋಗಾಶ್ರಮದ ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ತಮ್ಮ 21 ನೇ ಚಾತುರ್ಮಾಸ್ಯ ವ್ರತಸಂಕಲ್ಪವನ್ನು ಗುರುಪೂರ್ಣಿಮೆಯಂದು ತಾ 21.07.2024 ಆದಿತ್ಯವಾರ  ಕೊಂಡೆವೂರು ಮಠದಲ್ಲಿ ಕೈಗೊಳ್ಳಲಿದ್ದಾರೆ. ಆ ದಿನ ಬೆಳಿಗ್ಗೆ 9.00 ಕ್ಕೆ ಗಣಹೋಮ, ಶ್ರೀ ನಿತ್ಯಾನಂದ ಗುರುದೇವರಿಗೆ ಪಂಚಾಮೃತಾಭೀಷೇಕ, ಸೀಯಾಳಾಭೀಷೇಕ, 10.30 ಕ್ಕೆ ವ್ಯಾಸಪೂಜೆ ಆರಂಭವಾಗಿ 12.00 ಕ್ಕೆ ಮಂಗಳಾರತಿ, 12.30 ಕ್ಕೆ ಮಹಾಪೂಜೆ ನಂತರ ಅನ್ನಪ್ರಸಾದ ನಡೆಯಲಿದೆ. ಸಾಯಂಕಾಲ 7 ಕ್ಕೆ “ಶ್ರೀ ಗುರುಪಾದುಕಾ ಪೂಜೆ”, ಭಜನೆ ನಂತರ ಪರಮಪೂಜ್ಯರು ಸತ್ಸಂಗ ನಡೆಸಿ ಅನುಗ್ರಹ ಮಂತ್ರಾಕ್ಷತೆ ನೀಡಲಿದ್ದಾರೆ.

18.09.2024 ಕ್ಕೆ ಸಂಪನ್ನಗೊಳ್ಳಲಿರುವ ಚಾತುರ್ಮಾಸ್ಯದ ಈ  ಸತ್ಸಂದರ್ಭದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.

    ಪ್ರತಿದಿನ ಸಂಜೆ 5.30 ರಿಂದ 7 ರವರೆಗೆ ವಿವಿಧ ಭಜನಾ ತಂಡಗಳಿ೦ದ ಭಜನಾಸೇವೆ ನಡೆಯಲಿದ್ದು, ಪ್ರತೀ ಭಾನುವಾರ ವಿದ್ವಾಂಸರಿ೦ದ ಪ್ರವಚನ, ಯಕ್ಷಗಾನ ತಾಳಮದ್ದಳೆ, ಭರತನಾಟ್ಯ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

    ಚಾತುರ್ಮಾಸ್ಯದ ಈ ಪುಣ್ಯ ಸಮಯದಲ್ಲಿ ಭಕ್ತಾದಿಗಳು ಶ್ರೀ ಮಠಕ್ಕೆ ಆಗಮಿಸಿ ಶ್ರೀ ಗಾಯತ್ರೀ ಮಾತೆಯ ಹಾಗೂ ನಿತ್ಯಾನಂದ ಭಗವಾನರ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ಕೊಂಡೆವೂರು ಮಠದ ಪ್ರಕಟನೆಯಲ್ಲಿ ತಿಳಿಸಲಾಗಿದೆ.



Related posts

ಉಡುಪಿ : ನೂತನ ಎಸ್ಪಿ ಆಗಿ ಹರಿರಾಮ್ ಶಂಕರ್ ಅಧಿಕಾರ ಸ್ವೀಕಾರ, ಕೋಮು ಪ್ರಚೋದನೆ, ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ – ಹರಿರಾಮ್ ಶಂಕರ್

Mumbai News Desk

ಮಂತ್ರಾಲಯದ ಬಳಿ ಭೀಕರ ರಸ್ತೆ ಅಪಘಾತ: ಚಿಕ್ಕಬಳ್ಳಾಪುರದ ಎಂಟು ಭಕ್ತರ ದುರ್ಮರಣ

Mumbai News Desk

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಮುಂಬೈಯ ನಿಷ್ಠಾವಂತ ಪತ್ರಕರ್ತ ನವೀನ್ ಕೆ ಇನ್ನ ಆಯ್ಕೆ.

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (21/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

*ಬಂಟರ ಯಾನೆ ನಾಡವರ ಮಾತೃ ಸಂಘ: ಅಧ್ಯಕ್ಷರಾಗಿ ಕೆ ಅಜಿತ್ ಕುಮಾರ್ ರೈ ಮಾಲಾಡಿ ಪುನರಾಯ್ಕೆ*

Mumbai News Desk

‘ನೆಲೆ ಫೌಂಡೇಶನ್ ‘ ಗೆ 11ನೇ ಮೂಲತ್ವ ವಿಶ್ವ ಪ್ರಶಸ್ತಿ 2025

Mumbai News Desk