28.4 C
Mumbai
March 7, 2026
Mumbai News Kannada
ಸುದ್ದಿ

ಕೊಂಡೆವೂರು ಶ್ರೀಗಳ 21 ನೇ ಚಾತುರ್ಮಾಸ್ಯ ವ್ರತಾಚರಣೆಉಪ್ಪಳ ಜು:    ಕೊಂಡೆವೂರು





 

ನಿತ್ಯಾನಂದ ಯೋಗಾಶ್ರಮದ ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ತಮ್ಮ 21 ನೇ ಚಾತುರ್ಮಾಸ್ಯ ವ್ರತಸಂಕಲ್ಪವನ್ನು ಗುರುಪೂರ್ಣಿಮೆಯಂದು ತಾ 21.07.2024 ಆದಿತ್ಯವಾರ  ಕೊಂಡೆವೂರು ಮಠದಲ್ಲಿ ಕೈಗೊಳ್ಳಲಿದ್ದಾರೆ. ಆ ದಿನ ಬೆಳಿಗ್ಗೆ 9.00 ಕ್ಕೆ ಗಣಹೋಮ, ಶ್ರೀ ನಿತ್ಯಾನಂದ ಗುರುದೇವರಿಗೆ ಪಂಚಾಮೃತಾಭೀಷೇಕ, ಸೀಯಾಳಾಭೀಷೇಕ, 10.30 ಕ್ಕೆ ವ್ಯಾಸಪೂಜೆ ಆರಂಭವಾಗಿ 12.00 ಕ್ಕೆ ಮಂಗಳಾರತಿ, 12.30 ಕ್ಕೆ ಮಹಾಪೂಜೆ ನಂತರ ಅನ್ನಪ್ರಸಾದ ನಡೆಯಲಿದೆ. ಸಾಯಂಕಾಲ 7 ಕ್ಕೆ “ಶ್ರೀ ಗುರುಪಾದುಕಾ ಪೂಜೆ”, ಭಜನೆ ನಂತರ ಪರಮಪೂಜ್ಯರು ಸತ್ಸಂಗ ನಡೆಸಿ ಅನುಗ್ರಹ ಮಂತ್ರಾಕ್ಷತೆ ನೀಡಲಿದ್ದಾರೆ.

18.09.2024 ಕ್ಕೆ ಸಂಪನ್ನಗೊಳ್ಳಲಿರುವ ಚಾತುರ್ಮಾಸ್ಯದ ಈ  ಸತ್ಸಂದರ್ಭದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.

    ಪ್ರತಿದಿನ ಸಂಜೆ 5.30 ರಿಂದ 7 ರವರೆಗೆ ವಿವಿಧ ಭಜನಾ ತಂಡಗಳಿ೦ದ ಭಜನಾಸೇವೆ ನಡೆಯಲಿದ್ದು, ಪ್ರತೀ ಭಾನುವಾರ ವಿದ್ವಾಂಸರಿ೦ದ ಪ್ರವಚನ, ಯಕ್ಷಗಾನ ತಾಳಮದ್ದಳೆ, ಭರತನಾಟ್ಯ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

    ಚಾತುರ್ಮಾಸ್ಯದ ಈ ಪುಣ್ಯ ಸಮಯದಲ್ಲಿ ಭಕ್ತಾದಿಗಳು ಶ್ರೀ ಮಠಕ್ಕೆ ಆಗಮಿಸಿ ಶ್ರೀ ಗಾಯತ್ರೀ ಮಾತೆಯ ಹಾಗೂ ನಿತ್ಯಾನಂದ ಭಗವಾನರ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ಕೊಂಡೆವೂರು ಮಠದ ಪ್ರಕಟನೆಯಲ್ಲಿ ತಿಳಿಸಲಾಗಿದೆ.



Related posts

ಲಂಡನ್ ವಿಶ್ವ ಶೃಂಗಸಭೆಯಲ್ಲಿ ಐಕಾನಿಕ್ ಮಹಿಳಾ ವಿಶ್ವ ನಾಯಕಿ” ಪ್ರಶಸ್ತಿಗೆ ಡಾ. ವಿಜೇತಾ ಎಸ್. ಶೆಟ್ಟಿಆಯ್ಕೆ.

Mumbai News Desk

ತಮಿಳುನಾಡು : ನಟ-ರಾಜಕಾರಣಿ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತಕ್ಕೆ 31 ಮಂದಿ ಬಲಿ, 40 ಜನರ ಸ್ಥಿತಿ ಚಿಂತಾಜನಕ

Mumbai News Desk

ಮುಂಬಯಿ ಕನ್ನಡ ಸಂಘ: ಅರ್ಚನಾ ಪೂಜಾರಿಯವರಿಗೆ ಸನ್ಮಾನ

Mumbai News Desk

‘ಜಯಲಕ್ಷ್ಮೀ ಎಸ್ ಜೋಕಟ್ಟೆಯವರ ಕವಿತೆಗಳು’ ಕೃತಿ ಬಿಡುಗಡೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ  ಮುಂಬಯಿ: ಜಿಲ್ಲೆಯಲ್ಲಿ ಸಾಮರಸ್ಯ, ಶಾಂತಿ ಕಾಪಾಡಿಕೊಳ್ಳಲು ಜಿಲ್ಲಾಧಿಕಾರಿ   ಮತ್ತು ಪೊಲೀಸ್ ಆಯುಕ್ತರಿಗೆ  ಮನವಿ.

Mumbai News Desk

ಮೈಲ್ ಸ್ಟೋನ್ ಮಿಸ್ ಮತ್ತು ಮಿಸೆಸ್ ಗ್ಲೋಬಲ್ ಇಂಟರ್ನ್ಯಾಷನಲ್ ವರ್ಲ್ಡ್ ಪೇಜೆಂಟ್ 2024, ಪ್ರಭಾ ಸುವರ್ಣ ಟೂರಿಸಂ ಎಂಬಾಸಿಡರ್ ಆಗಿ ಆಯ್ಕೆ

Mumbai News Desk