September 6, 2026
Mumbai News Kannada
ಸುದ್ದಿ

ಕೊಂಡೆವೂರು ಶ್ರೀಗಳ 21 ನೇ ಚಾತುರ್ಮಾಸ್ಯ ವ್ರತಾಚರಣೆಉಪ್ಪಳ ಜು:    ಕೊಂಡೆವೂರು





 

ನಿತ್ಯಾನಂದ ಯೋಗಾಶ್ರಮದ ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ತಮ್ಮ 21 ನೇ ಚಾತುರ್ಮಾಸ್ಯ ವ್ರತಸಂಕಲ್ಪವನ್ನು ಗುರುಪೂರ್ಣಿಮೆಯಂದು ತಾ 21.07.2024 ಆದಿತ್ಯವಾರ  ಕೊಂಡೆವೂರು ಮಠದಲ್ಲಿ ಕೈಗೊಳ್ಳಲಿದ್ದಾರೆ. ಆ ದಿನ ಬೆಳಿಗ್ಗೆ 9.00 ಕ್ಕೆ ಗಣಹೋಮ, ಶ್ರೀ ನಿತ್ಯಾನಂದ ಗುರುದೇವರಿಗೆ ಪಂಚಾಮೃತಾಭೀಷೇಕ, ಸೀಯಾಳಾಭೀಷೇಕ, 10.30 ಕ್ಕೆ ವ್ಯಾಸಪೂಜೆ ಆರಂಭವಾಗಿ 12.00 ಕ್ಕೆ ಮಂಗಳಾರತಿ, 12.30 ಕ್ಕೆ ಮಹಾಪೂಜೆ ನಂತರ ಅನ್ನಪ್ರಸಾದ ನಡೆಯಲಿದೆ. ಸಾಯಂಕಾಲ 7 ಕ್ಕೆ “ಶ್ರೀ ಗುರುಪಾದುಕಾ ಪೂಜೆ”, ಭಜನೆ ನಂತರ ಪರಮಪೂಜ್ಯರು ಸತ್ಸಂಗ ನಡೆಸಿ ಅನುಗ್ರಹ ಮಂತ್ರಾಕ್ಷತೆ ನೀಡಲಿದ್ದಾರೆ.

18.09.2024 ಕ್ಕೆ ಸಂಪನ್ನಗೊಳ್ಳಲಿರುವ ಚಾತುರ್ಮಾಸ್ಯದ ಈ  ಸತ್ಸಂದರ್ಭದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.

    ಪ್ರತಿದಿನ ಸಂಜೆ 5.30 ರಿಂದ 7 ರವರೆಗೆ ವಿವಿಧ ಭಜನಾ ತಂಡಗಳಿ೦ದ ಭಜನಾಸೇವೆ ನಡೆಯಲಿದ್ದು, ಪ್ರತೀ ಭಾನುವಾರ ವಿದ್ವಾಂಸರಿ೦ದ ಪ್ರವಚನ, ಯಕ್ಷಗಾನ ತಾಳಮದ್ದಳೆ, ಭರತನಾಟ್ಯ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

    ಚಾತುರ್ಮಾಸ್ಯದ ಈ ಪುಣ್ಯ ಸಮಯದಲ್ಲಿ ಭಕ್ತಾದಿಗಳು ಶ್ರೀ ಮಠಕ್ಕೆ ಆಗಮಿಸಿ ಶ್ರೀ ಗಾಯತ್ರೀ ಮಾತೆಯ ಹಾಗೂ ನಿತ್ಯಾನಂದ ಭಗವಾನರ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ಕೊಂಡೆವೂರು ಮಠದ ಪ್ರಕಟನೆಯಲ್ಲಿ ತಿಳಿಸಲಾಗಿದೆ.



Related posts

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾಭಾಯಂದರ್ ವತಿಯಿಂದ ಗಣೇಶ್ ಪುರಿ ಪಾದಯಾತ್ರೆ.

Mumbai News Desk

ಯಕ್ಷಗಾನ ರಂಗದ ಅಮರ ಗಂಧರ್ವ ಕಾಳಿಂಗ ನಾವಡರ ಪುಣ್ಯಸ್ಮರಣೆ: ಕರಾವಳಿಯ ಕೋಗಿಲೆಗೆ ನುಡಿನಮನ

Mumbai News Desk

ಕ್ರೀಡಾ ಪ್ರತಿಭೆಗಳಿಗೆ ಉದ್ಯೋಗ ಭದ್ರತೆ ಕಲ್ಪಿಸುವುದು ಅವಶ್ಯ : ಅಂತಾರಾಷ್ಟ್ರೀಯ ದೇಹದಾಡ್ಯ ಪಟು ರೇಮಂಡ್ ಡಿಸೋಜಾ

Mumbai News Desk

ಪಂಚರಾಜ್ಯ ವಿಧಾನಸಭಾ ಚುನಾವಣೆ 2026: ಐತಿಹಾಸಿಕ ಫಲಿತಾಂಶ ಮತ್ತು ರಾಜಕೀಯ ವಿಶ್ಲೇಷಣೆ

Mumbai News Desk

ಅಂಕ್ಲೇಶ್ವರದಲ್ಲಿ ಭಾರತ್ ಬ್ಯಾಂಕ್‌ನ 47ನೇ ಸಂಸ್ಥಾಪನಾ ದಿನಾಚರಣೆ: ಯಶಸ್ಸಿನ ಮೈಲಿಗಲ್ಲು

Mumbai News Desk

ಉದ್ಯಮಿ ಎನ್. ಟಿ.ಪೂಜಾರಿ ಅವರಿಗೆ ಪಿತೃ ವಿಯೋಗ

Mumbai News Desk