30.9 C
Mumbai
June 8, 2026
Mumbai News Kannada
ಸುದ್ದಿ

ಕೊಂಡೆವೂರು ಶ್ರೀಗಳ 21 ನೇ ಚಾತುರ್ಮಾಸ್ಯ ವ್ರತಾಚರಣೆಉಪ್ಪಳ ಜು:    ಕೊಂಡೆವೂರು





 

ನಿತ್ಯಾನಂದ ಯೋಗಾಶ್ರಮದ ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ತಮ್ಮ 21 ನೇ ಚಾತುರ್ಮಾಸ್ಯ ವ್ರತಸಂಕಲ್ಪವನ್ನು ಗುರುಪೂರ್ಣಿಮೆಯಂದು ತಾ 21.07.2024 ಆದಿತ್ಯವಾರ  ಕೊಂಡೆವೂರು ಮಠದಲ್ಲಿ ಕೈಗೊಳ್ಳಲಿದ್ದಾರೆ. ಆ ದಿನ ಬೆಳಿಗ್ಗೆ 9.00 ಕ್ಕೆ ಗಣಹೋಮ, ಶ್ರೀ ನಿತ್ಯಾನಂದ ಗುರುದೇವರಿಗೆ ಪಂಚಾಮೃತಾಭೀಷೇಕ, ಸೀಯಾಳಾಭೀಷೇಕ, 10.30 ಕ್ಕೆ ವ್ಯಾಸಪೂಜೆ ಆರಂಭವಾಗಿ 12.00 ಕ್ಕೆ ಮಂಗಳಾರತಿ, 12.30 ಕ್ಕೆ ಮಹಾಪೂಜೆ ನಂತರ ಅನ್ನಪ್ರಸಾದ ನಡೆಯಲಿದೆ. ಸಾಯಂಕಾಲ 7 ಕ್ಕೆ “ಶ್ರೀ ಗುರುಪಾದುಕಾ ಪೂಜೆ”, ಭಜನೆ ನಂತರ ಪರಮಪೂಜ್ಯರು ಸತ್ಸಂಗ ನಡೆಸಿ ಅನುಗ್ರಹ ಮಂತ್ರಾಕ್ಷತೆ ನೀಡಲಿದ್ದಾರೆ.

18.09.2024 ಕ್ಕೆ ಸಂಪನ್ನಗೊಳ್ಳಲಿರುವ ಚಾತುರ್ಮಾಸ್ಯದ ಈ  ಸತ್ಸಂದರ್ಭದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.

    ಪ್ರತಿದಿನ ಸಂಜೆ 5.30 ರಿಂದ 7 ರವರೆಗೆ ವಿವಿಧ ಭಜನಾ ತಂಡಗಳಿ೦ದ ಭಜನಾಸೇವೆ ನಡೆಯಲಿದ್ದು, ಪ್ರತೀ ಭಾನುವಾರ ವಿದ್ವಾಂಸರಿ೦ದ ಪ್ರವಚನ, ಯಕ್ಷಗಾನ ತಾಳಮದ್ದಳೆ, ಭರತನಾಟ್ಯ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

    ಚಾತುರ್ಮಾಸ್ಯದ ಈ ಪುಣ್ಯ ಸಮಯದಲ್ಲಿ ಭಕ್ತಾದಿಗಳು ಶ್ರೀ ಮಠಕ್ಕೆ ಆಗಮಿಸಿ ಶ್ರೀ ಗಾಯತ್ರೀ ಮಾತೆಯ ಹಾಗೂ ನಿತ್ಯಾನಂದ ಭಗವಾನರ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ಕೊಂಡೆವೂರು ಮಠದ ಪ್ರಕಟನೆಯಲ್ಲಿ ತಿಳಿಸಲಾಗಿದೆ.



Related posts

ಸಮಾಜ ಸೇವಕಿ ವಿಮಲಾ ಎಲ್ ಸಾಲ್ಯಾನ್ ನಿಧನ

Mumbai News Desk

ಮಹಾರಾಷ್ಟ್ರ ರಾಜ್ಯಪಾಲರು ಎನ್ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ

Mumbai News Desk

2018 ರ ರೆಮೋ ಡಿಸೋಜಾ ಸುಲಿಗೆ ಪ್ರಕರಣದ ಗ್ಯಾಂಗ್ ಸ್ಟರ್ ರವಿ ಪೂಜಾರಿ ಬಂಧನ

Mumbai News Desk

ಭಾಯಂದರ್:ಸ್ನೇಹಲತಾ ವಿಶ್ವನಾಥ ಪೂಜಾರಿ ನಿಧನ

Mumbai News Desk

ಮುಂಬೈ : ಚಿತ್ರ ನಿರ್ಮಾಪಕ ರೋಹಿತ್ ಶೆಟ್ಟಿ ಅವರ ನಿವಾಸದ ಹೊರಗೆ ಗುಂಡಿನ ದಾಳಿ

Mumbai News Desk

ಉಚಿತ ಗ್ಯಾರಂಟಿ ಸಂಸ್ಕೃತಿ ಮತ್ತು ದೇಶದ ಆರ್ಥಿಕತೆ: ಸುಪ್ರೀಂ ಕೋರ್ಟ್ ಎಚ್ಚರಿಕೆ

Mumbai News Desk