30 C
Mumbai
April 24, 2026
Mumbai News Kannada
ತುಳುನಾಡು

ಕಾಪು ಮಾರಿಯಮ್ಮ ನ ಅನುಗ್ರಹ, ಭಾರತ ಟಿ20 ತಂಡದ ನಾಯಕನಾದ ಸೂರ್ಯಕುಮಾರ ಯಾದವ್.





ಇತ್ತೀಚಿಗೆ ನಡೆದ ಟಿ20 ವಿಶ್ವಕಪ್ ನ ಫೈನಲ್ ಪಂದ್ಯದಲ್ಲಿ ಭಾರತ 11 ವರ್ಷಗಳ ಬಳಿಕ ಕಪ್ ಗೆಲ್ಲುವಲ್ಲಿ ಸೂರ್ಯ ಕುಮಾರ್ ಯಾದವ್ ಹಿಡಿದ ಅದ್ಭುತ ಕ್ಯಾಚ್ ಪ್ರಮುಖ ಪಾತ್ರವಹಿಸಿತ್ತು.
ಟಿ20 ಕಪ್ ಗೆದ್ದ ಬಳಿಕ ಸೂರ್ಯಕುಮಾರ್, ಪತ್ನಿ ದೇವಿಷಾ ಶೆಟ್ಟಿ ಅವರೊಂದಿಗೆ ಕಾಪುವಿನ ಇತಿಹಾಸ ಪ್ರಸಿದ್ಧ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾರಿಯಮ್ಮ ನ ದರುಶನ ಪಡೆದಿದ್ದರು.ಸೂರ್ಯಕುಮಾರ ಯಾದವ್ ಅಮ್ಮನಲ್ಲಿ ಪ್ರಾಥಿಸಿ, ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಭವ್ಯ ಶಿಲಾಮಯ ದೇವಸ್ಥಾನಕ್ಕೆ ಶಿಲಾ ಕಂಬವನ್ನು ನೀಡಿದ್ದರು.


ಈ ಸಂಧರ್ಭದಲ್ಲಿ ದೇವಸ್ಥಾನದ ಅರ್ಚಕರು ಸೂರ್ಯಕುಮಾರ ಯಾದವ್ ಅವರಿಗೆ ಅಮ್ಮನ ಮಹಾಪ್ರಸಾದ ನೀಡಿ “ಮುಂದೆ ಭಾರತ ತಂಡದ ನಾಯಕನಾಗಿ ಇಲ್ಲಿ ಬರುತ್ತೀರಿ ” ಎಂದು ಹರಸಿದ್ದರು.
ಸೂರ್ಯಕುಮಾರ್ ಕಾಪುವಿಗೆ ಭೇಟಿ ನೀಡಿದ 10 ದಿನದಲ್ಲೇ, ಅವರು ಶ್ರೀಲಂಕಾ ವಿರುದ್ಧ ನಡೆಯಲಿರುವ ಟಿ 20 ಸರಣಿಗೆ ತಂಡದ ನಾಯಕನಾಗಿ ಆಯ್ಕೆಯಗಿದ್ದು, ‘ಕಾಪು ಅಮ್ಮನ” ಅನುಗ್ರಹ ಮತ್ತು ಸೂರ್ಯಕುಮಾರ್ ಯಾದವ್ ಅವರ ಭಕ್ತಿ ಎನ್ನಬಹುದು.
ನಂಬಿ ಬಂದ ಭಕ್ತರ ಪ್ರಾರ್ಥನೆಯನ್ನು ಅನುಗ್ರಹಿಸುವ ತಾಯಿ “ಕಾಪುವಿನ ಅಮ್ಮ” ಭಕ್ತ ಕೋಟಿಯ ಮನ- ಮಂದಿರದಲ್ಲಿ ವಿರಾಜಮಾನರಾಗಿದ್ದಾರೆ.



Related posts

ಕಾಪು: ಗಾಳಿ – ಮಳೆಗೆ ಮನೆಗೆ ಮರಬಿದ್ದು ಅಪಾರ ನಷ್ಟ.

Mumbai News Desk

ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಮಹಾ ಸಂಕಲ್ಪದ 19ನೇ ದಿನ – ಕಾಪು ಶ್ರೀ ಹಳೆ ಮಾರಿಗುಡಿಗೆ ಪ್ರದಕ್ಷಿಣೆ.

Mumbai News Desk

ಕಾರ್ನಾಡು ಮಾಗಂದಡಿ ಗೋಪಾಲ್ ನಾಯಗರಿಗೆ ಸನ್ಮಾನ

Mumbai News Desk

ಕಾಪು ಮೂರನೇ ಮಾರಿಯಮ್ಮ ದೇವಸ್ಥಾನ ರಜತ ಗದ್ದುಗೆ ವಿಜ್ಞಾಪನ ಪತ್ರ ಬಿಡುಗಡೆ.

Mumbai News Desk

ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 18ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ವಿದ್ಯಾರ್ಥಿಗಳ ದತ್ತು ಸ್ವೀಕರ

Mumbai News Desk

ಧಾಖಲೆಯೊಂದಿಗೆ ತಿರುವೈಲು ಕಂಬಳ ಸಂಪನ್ನ: ಮುಂಬೈಯ ಪುರೋಹಿತರಾದ ಪ್ರವೀಣ್ ಭಟ್ ಅವರಿಗೆ ಸನ್ಮಾನ

Mumbai News Desk