30.9 C
Mumbai
June 8, 2026
Mumbai News Kannada
ತುಳುನಾಡು

ಕಾಪು ಮಾರಿಯಮ್ಮ ನ ಅನುಗ್ರಹ, ಭಾರತ ಟಿ20 ತಂಡದ ನಾಯಕನಾದ ಸೂರ್ಯಕುಮಾರ ಯಾದವ್.





ಇತ್ತೀಚಿಗೆ ನಡೆದ ಟಿ20 ವಿಶ್ವಕಪ್ ನ ಫೈನಲ್ ಪಂದ್ಯದಲ್ಲಿ ಭಾರತ 11 ವರ್ಷಗಳ ಬಳಿಕ ಕಪ್ ಗೆಲ್ಲುವಲ್ಲಿ ಸೂರ್ಯ ಕುಮಾರ್ ಯಾದವ್ ಹಿಡಿದ ಅದ್ಭುತ ಕ್ಯಾಚ್ ಪ್ರಮುಖ ಪಾತ್ರವಹಿಸಿತ್ತು.
ಟಿ20 ಕಪ್ ಗೆದ್ದ ಬಳಿಕ ಸೂರ್ಯಕುಮಾರ್, ಪತ್ನಿ ದೇವಿಷಾ ಶೆಟ್ಟಿ ಅವರೊಂದಿಗೆ ಕಾಪುವಿನ ಇತಿಹಾಸ ಪ್ರಸಿದ್ಧ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾರಿಯಮ್ಮ ನ ದರುಶನ ಪಡೆದಿದ್ದರು.ಸೂರ್ಯಕುಮಾರ ಯಾದವ್ ಅಮ್ಮನಲ್ಲಿ ಪ್ರಾಥಿಸಿ, ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಭವ್ಯ ಶಿಲಾಮಯ ದೇವಸ್ಥಾನಕ್ಕೆ ಶಿಲಾ ಕಂಬವನ್ನು ನೀಡಿದ್ದರು.


ಈ ಸಂಧರ್ಭದಲ್ಲಿ ದೇವಸ್ಥಾನದ ಅರ್ಚಕರು ಸೂರ್ಯಕುಮಾರ ಯಾದವ್ ಅವರಿಗೆ ಅಮ್ಮನ ಮಹಾಪ್ರಸಾದ ನೀಡಿ “ಮುಂದೆ ಭಾರತ ತಂಡದ ನಾಯಕನಾಗಿ ಇಲ್ಲಿ ಬರುತ್ತೀರಿ ” ಎಂದು ಹರಸಿದ್ದರು.
ಸೂರ್ಯಕುಮಾರ್ ಕಾಪುವಿಗೆ ಭೇಟಿ ನೀಡಿದ 10 ದಿನದಲ್ಲೇ, ಅವರು ಶ್ರೀಲಂಕಾ ವಿರುದ್ಧ ನಡೆಯಲಿರುವ ಟಿ 20 ಸರಣಿಗೆ ತಂಡದ ನಾಯಕನಾಗಿ ಆಯ್ಕೆಯಗಿದ್ದು, ‘ಕಾಪು ಅಮ್ಮನ” ಅನುಗ್ರಹ ಮತ್ತು ಸೂರ್ಯಕುಮಾರ್ ಯಾದವ್ ಅವರ ಭಕ್ತಿ ಎನ್ನಬಹುದು.
ನಂಬಿ ಬಂದ ಭಕ್ತರ ಪ್ರಾರ್ಥನೆಯನ್ನು ಅನುಗ್ರಹಿಸುವ ತಾಯಿ “ಕಾಪುವಿನ ಅಮ್ಮ” ಭಕ್ತ ಕೋಟಿಯ ಮನ- ಮಂದಿರದಲ್ಲಿ ವಿರಾಜಮಾನರಾಗಿದ್ದಾರೆ.



Related posts

ಫರಂಗಿಪೇಟೆ ಕುಲಾಲ ಸುಧಾರಕ ಸಂಘದ ವಾರ್ಷಿಕೋತ್ಸವ. ಸಾಧಕರಿಗೆ ಸನ್ಮಾನ.

Mumbai News Desk

ಮೂಲ್ಕಿ ಹೊಸ ಅಂಗಣ ಮಾಸ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮದಲ್ಲಿ ಆದಿಕಿಲ್ಲಾಡಿ ಶ್ರೀ ಕೊಡ್ದಬ್ಬು ದೈವಸ್ಥಾನದ ಗುರಿಕಾರರಾದ ವಿ ಎಸ್ ವಸಂತ್ ಗುರಿಕಾರಯವರಿಗೆ ಸನ್ಮಾನ

Mumbai News Desk

ಮೂಲ್ಕಿ ಹೊಸ ಅಂಗಣ ಮಾಸಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮ : ಕುಬೇವೂರು ಶ್ರೀ ಜಾರಂದಾಯ ದೇವಸ್ಥಾನದ ಅರ್ಚಕ ಶೇಖರ್ ಪೂಜಾರಿ ಅವರಿಗೆ ಗೌರವ

Mumbai News Desk

ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ,ದೈವ ಪಾತ್ರಿ ಮುರಳಿ ಪೂಜಾರಿಗೆ ಸನ್ಮಾನ

Mumbai News Desk

‘ಹೊಸ ಅಂಗಣ’ ಮಾಸ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮ : ದೈವದ ಪಾತ್ರಿ ಮೋಹನ್ ಪೂಜಾರಿಯವರಿಗೆ ಸನ್ಮಾನ

Mumbai News Desk

ಹಿರಿಯ ಸಮಾಜ ಬಂಧುಗಳ ನಿಸ್ವಾರ್ಥ ಸೇವೆಯೇ ಸಂಘದ ಬೆಳವಣಿಗೆಗೆ ಅಡಿಪಾಯ – ಮೋಹನ್ ದಾಸ್ ಹೆಜ್ಮಾಡಿ

Mumbai News Desk